Advertisement

Tag: kendasampige

ನೇತಾಜಿ ಸುಭಾಷರ ಲೋಕದಲ್ಲಿ ನಮ್ಮದೊಂದು ಹೆಜ್ಜೆ: ನಾರಾಯಣ ಯಾಜಿ ಬರಹ

ರಾಮಾಯಣವನ್ನು ಹೊಸ ಇತಿಹಾಸದೊಂದಿಗೆ ನೇತಾಜಿ ಸುಭಾಶ್‌ಚಂದ್ರ ಬೋಸ್ ಅವರು ಇಂಗ್ಲೀಷಿನಲ್ಲಿ ಬರೆದ ಆತ್ಮಕಥೆಯನ್ನು “ಭಾರತೀಯ ಹೋರಾಟ” ಎನ್ನುವ ಹೆಸರಿನಲ್ಲಿ ಹೊರತಂದಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ, ಗಾಂಧಿ ಒಂದು ಕಡೆ, ಅದಕ್ಕೆ ಪ್ರತಿಯಾಗಿ ನೇತಾಜಿ ಸುಭಾಶ್ ಬಾಬು ಎನ್ನುವ ಸುದ್ದಿ ಯಾವತ್ತಿನಿಂದಲೂ ಕೇಳುತ್ತಲೇ ಇದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ 1915 ರಿಂದ 1921ರ ತನಕ ಮಹತ್ವದ ತಿರುವು ಕಂಡ ದಿನಗಳು.
ಪ್ರೊ. ಕೆ.ಇ. ರಾಧಾಕೃಷ್ಣ ಅನುವಾದಿಸಿರುವ ಸುಭಾಶ್‌ಚಂದ್ರ ಬೋಸರ ಕೃತಿ “ಭಾರತೀಯ ಹೋರಾಟ”ದ ಕುರಿತು ನಾರಾಯಣ ಯಾಜಿ ಬರಹ, ನಿಮ್ಮ ಓದಿಗೆ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಜಮೈಕಾ ದೇಶದ ಖ್ಯಾತ ಕವಿ ಮರ್ವಿನ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಉಗ್ರಮನಸ್ಸಿನ ಸಾಹಿತಿಗಳಲ್ಲಿ ಹಾಗೂ ಸಾಹಿತ್ಯಾಭಿಮಾನಿಗಳಲ್ಲಿ ಅವರ ಜನಪ್ರಿಯತೆ ತುಸು ಕಡಿಮೆಯೆಂದೇ ಹೇಳಬೇಕು, ಮತ್ತು ಅವರು ಎಂದಿಗೂ ಮಹಾನ್ ರಾಜಕೀಯ ಕವಿತೆ, ಪ್ರಚಾರಕರ ಸಾಂದರ್ಭಿಕ ಕವಿತೆ ಅಥವಾ ರಾಜಿಯಾಗದ, ಪಟ್ಟುಬಿಡದ ಕ್ರಾಂತಿಕಾರಿಗಳ ಘೋಷಣೆ ತುಂಬಿದ ಕವನಗಳನ್ನು ಬರೆಯುವುದಿಲ್ಲ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇದು 50ರ ಬರಹ! ಇಂದಿನ ಸರಣಿಯಲ್ಲಿ ಜಮೈಕಾ (Jamaica) ದೇಶದ ಖ್ಯಾತ ಕವಿ ಮರ್ವಿನ್ ಮೊರಿಸ್-ರವರ (Mervyn Morris, 1937) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ