Advertisement

Tag: kendasampige

ಕಲಾತ್ಮಕ ಕಟ್ಟಣೆಯ ‘ಅಸೀಮರೂಪಿ’ ಕತೆಗಳು: ರೇವಣಸಿದ್ಧಪ್ಪ ಜಿ.ಆರ್. ಬರಹ

ಯುವತಿಯೊಬ್ಬಳ ಮೆದುಳು ಅಪಘಾತದಿಂದಾಗಿ ಜರ್ಝರಿತವಾಗಿ ಬ್ರೈನ್ ಡೆಡ್ ಆಗಿ ಅವಳ ಉಸಿರು ನಿಲ್ಲುವುದು ಖಾತ್ರಿಯಾದಾಗ, ಮುದಿಯಾಗಿದ್ದ ತನ್ನ ದೇಹದಿಂದ ಆಕೆಯ ದೇಹಕ್ಕೆ ಬ್ರೈನ್ ಟ್ರಾನ್ಸ್ ಪ್ಲಾಂಟೇಷನ್ ಮಾಡುವ ಪ್ರಯೋಗಕ್ಕೆ ಒಳಗಾಗುತ್ತಾನೆ. ಮಾನಸಿಕವಾಗಿ ಗಂಡಾಗಿ, ದೈಹಿಕವಾಗಿ ಹೆಣ್ಣಾಗಿರುವ ಈತ ಒಂದು ವಿಷಮ ಗಳಿಗೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯೂ ಆಗಿಬಿಡುತ್ತಾನೆ. ಕೊನೆಗೆ ತನ್ನ ಮನೆಯವರಿಂದಲೇ ಅವಜ್ಞೆಗೆ ಈಡಾಗುತ್ತಾನೆ….
ಕಂನಾಡಿಗಾ ನಾರಾಯಣ ಬರೆದ “ಅಸೀಮರೂಪಿ” ಕಥಾ ಸಂಕಲನದ ಕುರಿತು ರೇವಣಸಿದ್ಧಪ್ಪ ಜಿ.ಆರ್. ಬರಹ

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ

Read More

ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ