Advertisement

Tag: kendasampige

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಬಾವಿಯೊಳಗೆ `ಪುಣ್ಯಕೋಟಿ’: ನಟರಾಜ್‌ ಅರಳಸುರಳಿ ಕೃತಿಯ ಬರಹ

ತಂಡೋಪತಂಡವಾಗಿ ಜನ ನಮ್ಮ ಮನೆಕಡೆ ಬರುತ್ತಿರುವುದು ಕಾಣಿಸಿತು. ಹಲವಾರು ಬ್ಯಾಟರಿ ಬೆಳಕುಗಳೂ ಒಂದೆರಡು ಪೆಟ್ರೋಮ್ಯಾಕ್ಸ್‌ಗಳೂ ಆ ಗುಂಪಿನಲ್ಲಿದ್ದವು. ಎಲ್ಲರೂ ಮನೆಯಂಗಳಕ್ಕೆ ಬಂದವರೇ ನೇರವಾಗಿ ಬಾವಿಯಕಡೆ ನಡೆದರು. ನೋಡನೋಡುತ್ತಿದ್ದಂತೆ ಮೂರ್ನಾಲ್ಕು ಜನ ಬಾವಿ ಇಳಿದರು. ಕೆಲವರು ಮೇಲಿನಿಂದ ನೇಣು ಇಳಿಬಿಟ್ಟರು. ದನಗಳ ಹೊಟ್ಟೆ ಕೆಳಗೆ ನೇಣು ತೂರಿಸಿ ಬಾವಿಯ ಇನ್ನೊಂದು ಭಾಗದಲ್ಲಿದ್ದವರಿಗೆ ತಲುಪಿಸಿದರು. ನೋಡ ನೋಡುತ್ತಿದ್ದಂತೆಯೇ ಒಂದೊಂದೇ ದನಗಳನ್ನು ಬಾವಿಯಿಂದ ಮೇಲೆತ್ತಿದರು.
ನಟರಾಜ್‌ ಅರಳಸುರಳಿ ಬರೆದ ತಮ್ಮ ತಂದೆಯವರ ಕುರಿತ ಬರಹಗಳ ಸಂಕಲನ “ಆಕಾಶಬುಟ್ಟಿ” ಕೃತಿಯ ಒಂದು ಬರಹ ನಿಮ್ಮ ಓದಿಗೆ.

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ

ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ

Read More

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ