Advertisement

Tag: kendasampige

ನನ್ನ ಪುಟ್ಟ ಶಾಲೆ: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮ ಗುರ್ಜಿ ಎಲ್ಲರ ಕೈ ಮೇಲೆ ಕಿತ್ತಳೆ ತೊಳೆ ಆಕಾರದ ಪೆಪ್ಪರಮಿಠಾಯಿ ಇಡುತ್ತಿದ್ದಂತೇ, ಅದು ಬುಳಕ್ಕನೆ ಬಾಯಿಗಿಳಿದು ಬಿಡುತ್ತಿತ್ತು. ನಾವೆಲ್ಲ ಅದನ್ನು ಕಡಿಯದೇ ದವಡೆಯಲ್ಲಿ ಅದುಮಿಟ್ಟುಕೊಂಡು ಮೆಲ್ಲಗೆ ರಸ ಹೀರಿ, ಹೀರಿ ಚಪ್ಪರಿಸುತ್ತಿದ್ದೆವು. ಅದು ಖಾಲಿಯಾಗುವ ತನಕ ಮಾತು ಕತೆ ಎಲ್ಲ ಬಂದ್… ನಮ್ಮಿಡೀ ದಿನದ ಸಂಭ್ರಮ, ಸಂತೋಷ ಆ ಪುಟ್ಟ ಮಿಠಾಯಿಗೋಸ್ಕರವೇ ಇರುತ್ತಿತ್ತೊ ಗೊತ್ತಿಲ್ಲ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಗೌರವ ಹೆಚ್ಚಿಸುವ ಬಟ್ಟೆ; ಚೆನ್ನಾಗಿಲ್ಲದಿರೆ ಆಗಬಹುದು ಬದುಕು ಮೂರಾಬಟ್ಟೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ವ್ಯಕ್ತಿತ್ವ, ಗುಣ ಮುಖ್ಯವೇ ಹೊರತು, ಹೊರಗೆ ಧರಿಸಿರುವ ದಿರಿಸಲ್ಲ ಎಂದು ಹೇಳುವ ಮಾತು ಕೇವಲ ಹೇಳಲಿಕ್ಕೆ ಮಾತ್ರ ಚೆಂದ ಅಷ್ಟೇ. ಇಂದಿನ ಯುಗದಲ್ಲಿ ಬಾಹ್ಯ ಆಕರ್ಷಣೆಯೇ ಮುಖ್ಯ!! ಆಸ್ತಿಯಾಗಿ ಕಚ್ಚೆ ಹರಿವೆಯಷ್ಟು ಹೊಲ ಇಲ್ದಿದ್ರೂ ಒಳ್ಳೇ ಮನೆ, ಕಾರು ಇದ್ದರೆ ಸಂಬಂಧ ಮಾಡೋಕೆ ಜನರು ಬರ್ತಾರೆ!! ಇಲ್ದಿದ್ರೆ ಅವರ ಕಥೆ ಅಷ್ಟೇ!! ಆದರೂ ಬ್ರಿಟಿಷರಿಂದ ‘ಅರೆ ಬೆತ್ತಲೆ ಫಕೀರ’ ಎಂದು ಕರೆಸಿಕೊಂಡು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಮಹಾತ್ಮ ಗಾಂಧೀಜಿಯವರು ಧರಿಸುತ್ತಿದ್ದುದು ಸಾಮಾನ್ಯ ಅರೆಬರೆ ಉಡುಪನ್ನೇ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮನುಷ್ಯ ಮೃಗವಾಗುತ್ತಿರುವನೆ?: ಸುಮಾವೀಣಾ ಸರಣಿ

ವಾಹನಗಳ ವಿಚಾರಕ್ಕೆ ಬಂದಾಗ ಗಾಳಿ ಇದ್ದರೆ ಗಾಲಿ ಓಡಲು ಸಾಧ್ಯ ಅಲ್ವೆ! ಸ್ವಲ್ಪ ಗಾಳಿ ಹೆಚ್ಚಾದರೂ ವಾಹನಗಳಾಗಲಿ, ಮನುಷ್ಯನಾಗಲಿ ಇರುವುದಿಲ್ಲ. ಗಾಳಿ ಹೆಚ್ಚಾಗಿ ಸೈಕಲ್ ಬರ್ಸ್ಟ್ ಆಯಿತು. ಅದೇ ಗಾಳಿ ಇಲ್ಲದೆ ಹೋದರೆ ಅದು ಓಡುವುದೇ ಇಲ್ಲ ಪಂಚರ್ ಆಗುತ್ತದೆ. ಅಂತೆಯೇ ಮಾನವ ಉಸಿರುಗಟ್ಟಿ ಸಾಯುತ್ತಾನೆ. ಹೌದು! ಮಾನವನ ಬದುಕು ಉಸಿರು ಹೋದಾಗ ‘ಸತ್ತರು’, ‘ಅದು’, ‘ಇದು’, ‘ಶವ’ ಎಂಬುದಾಗಿ ಮಾತನಾಡುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೊಂದನೆಯ ಬರಹ ನಿಮ್ಮ ಓದಿಗೆ

Read More

ಅವ್ವಕ್ಕನೆಂಬ ಅಚ್ಚರಿ…: ಜ.ನಾ. ತೇಜಶ್ರೀ ಹೊಸ ಕಾದಂಬರಿಯ ಪುಟಗಳು

ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ