Advertisement

Tag: kendasampige

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ಮಕ್ಕಳ ಶೋಷಣೆಯ ಪಾಪಿಷ್ಟರು: ಡಾ. ವಿನತೆ ಶರ್ಮಾ ಅಂಕಣ

ಹದಿನೆಂಟು ವರ್ಷವಾದಾಗ ಒಬ್ಬ ವ್ಯಕ್ತಿ ‘adult’ ಎಂದು ಸರ್ಕಾರ ಹೇಳುತ್ತದೆ. ಇವರು ತಮ್ಮ ಜೀವನಕ್ಕೆ ತಾವೇ ಸಂಪೂರ್ಣವಾಗಿ ಜವಾಬ್ದಾರರು. ಪೂರ್ಣಾವಧಿ ಉದ್ಯೋಗದಲ್ಲಿದ್ದು ಮುಂದೆ ತಮ್ಮದೇ ಕುಟುಂಬ ಆರಂಭಿಸಿದಾಗ ಇವರ ಮಕ್ಕಳು ಚೈಲ್ಡ್ ಕೇರ್ ಸೆಂಟರ್‌ಗೆ ಹೋಗುವುದು ಅನಿವಾರ್ಯವಾಗುತ್ತದೆ. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತೀವಿ ಎಂದರೆ ಅವರ ಕೆರಿಯರ್‌ಗೆ ದೊಡ್ಡ ಹೊಡೆತ. ಅಲ್ಲದೆ ಒಂದೂವರೆ ಸಂಬಳವಿದ್ದರೆ ಇತ್ತ ಕಡೆ ಕುಟುಂಬದ ಖರ್ಚುಗಳನ್ನು ತೂಗಿಸಲು ಕಷ್ಟ. ಅತ್ತ ಕಡೆ ಸರಕಾರದಿಂದ welfare ಸಹಾಯ ಸಿಗುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ದುಡ್ಡು ಬರ್ಲಿ ಐಸಾ… ಇನ್ನೂ ಕೊಡಿ ಐಸಾ…!: ಎಚ್. ಗೋಪಾಲಕೃಷ್ಣ ಸರಣಿ

ಅದರ ಮಾರನೇ ದಿವಸ ಹೋಗಿ ಭರಮಪ್ಪನ ಎದುರು ನಿಂತೆ. ಒಂದು ಗಂಟೆ ಕಾದೆ. ನನ್ನ ಕಡೆ ತಿರುಗಿ ನೋಡಲು ಸಹ ಅವರಿಗೆ ಪುರುಸೊತ್ತು ಇಲ್ಲರ. ಐದನೇ ದಿವಸವೂ ಇದೇ ರಿಪೀಟ್ ಆಯ್ತು. ಆರನೇ ದಿವಸ ಭಾನುವಾರ. ತೆಪ್ಪಗೆ ಮನೇಲೆ ಇದ್ದು ನನ್ನ ಅದೃಷ್ಟಕ್ಕೆ ಗಂಟೆ ಗಂಟೆಗೂ ಕೋಲಿನಿಂದ ಬಾರಿಸುತ್ತಾ ಕಳೆದೆ. ಸೋಮವಾರ ಬೆಳಿಗ್ಗೆ ಮತ್ತೆ ಕೆಇಬಿ ಆಫೀಸಿಗೆ ದಂಡ ಯಾತ್ರೆ ಮಾಡಿದೆ. ಜಗನ್ನಾಥ, ಅದೇ ಲೈನ್ ಮ್ಯಾನ್ ದಾರೀಲಿ ಸಿಕ್ಕಿದ. ನನ್ನನ್ನು ನೋಡಿ ಅವನ ಲೂನಾ ನಿಲ್ಲಿಸಿದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೈದನೆಯ ಕಂತು

Read More

ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ

ನಾಲಗೆ‌ ಖಾರದಿಂದ ಚುರುಕ್ ಎಂದ‌ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ‌ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಪದ್ಯಗಳು: ಕಲ್ಲೇಶ್ ಕುಂಬಾರ್ ಬರಹ

ಕವಿಯಾಗಿ ಮಾಲತಿಯವರಿಗೆ ಕತ್ತಲು ಮತ್ತು ಬೆಳಕಿನ ಕುರಿತಾಗಿ ವಿಶಿಷ್ಟವಾದ ಆಕರ್ಷಣೆಯಿದೆ ಎನ್ನಬಹುದು. ಈ ಮಾತಿಗೆ ಸಾಕ್ಷಿಯಾಗಿ ಈ ಕವನಸಂಕಲನದಲ್ಲಿ ‘ಅಜ್ಜಿ ಮತ್ತು..’ ಎಂಬ ಪದ್ಯವೊಂದಿದೆ. ಇಲ್ಲಿ, ಕತ್ತಲು–ಬೆಳಕಿನ ಆಟವನ್ನು ಕೇಂದ್ರವಾಗಿರಿಸಿಕೊಂಡು ಮನುಷ್ಯ ಬದುಕಿನ ಕ್ರಿಯೆಗಳನ್ನು ಅವರು ಶೋಧಿ‌ಸಲು ಪ್ರಯತ್ನಿಸಿದ್ದಾರೆ.‌ ಈ ಪದ್ಯದ ಶೀರ್ಷಿಕೆಯಲ್ಲಿರುವ ‘ಅಜ್ಜಿ’ ಬೇರಾರೂ ಆಗಿರದೇ ನಮ್ಮೊಳಗಿನ ಅರಿವಿನ ಕೇಡು ಕಳೆಯಲೆಂದು ನಮ್ಮ ಎದೆಯಂಗಳದಲ್ಲಿ ಮುಡಿಸಿಟ್ಟ ಅರಿವಿನ ದೀವಿಗೆಯೇ ಆಗಿದ್ದಾಳೆ!
ಮಾಲತಿ ಗೋರೆಬೈಲ್ ಬರೆದ “ಗುಬ್ಬಿ ಲಾಟೀನು” ಕವನ ಸಂಕಲನದ ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ