Advertisement

Tag: kendasampige

ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ

ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ

Read More

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

Read More

ಕಲಾತ್ಮಕ ಕಟ್ಟಣೆಯ ‘ಅಸೀಮರೂಪಿ’ ಕತೆಗಳು: ರೇವಣಸಿದ್ಧಪ್ಪ ಜಿ.ಆರ್. ಬರಹ

ಯುವತಿಯೊಬ್ಬಳ ಮೆದುಳು ಅಪಘಾತದಿಂದಾಗಿ ಜರ್ಝರಿತವಾಗಿ ಬ್ರೈನ್ ಡೆಡ್ ಆಗಿ ಅವಳ ಉಸಿರು ನಿಲ್ಲುವುದು ಖಾತ್ರಿಯಾದಾಗ, ಮುದಿಯಾಗಿದ್ದ ತನ್ನ ದೇಹದಿಂದ ಆಕೆಯ ದೇಹಕ್ಕೆ ಬ್ರೈನ್ ಟ್ರಾನ್ಸ್ ಪ್ಲಾಂಟೇಷನ್ ಮಾಡುವ ಪ್ರಯೋಗಕ್ಕೆ ಒಳಗಾಗುತ್ತಾನೆ. ಮಾನಸಿಕವಾಗಿ ಗಂಡಾಗಿ, ದೈಹಿಕವಾಗಿ ಹೆಣ್ಣಾಗಿರುವ ಈತ ಒಂದು ವಿಷಮ ಗಳಿಗೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯೂ ಆಗಿಬಿಡುತ್ತಾನೆ. ಕೊನೆಗೆ ತನ್ನ ಮನೆಯವರಿಂದಲೇ ಅವಜ್ಞೆಗೆ ಈಡಾಗುತ್ತಾನೆ….
ಕಂನಾಡಿಗಾ ನಾರಾಯಣ ಬರೆದ “ಅಸೀಮರೂಪಿ” ಕಥಾ ಸಂಕಲನದ ಕುರಿತು ರೇವಣಸಿದ್ಧಪ್ಪ ಜಿ.ಆರ್. ಬರಹ

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ