Advertisement

Tag: kendasampige

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ

Read More

ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ

ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮಳೆ ಜಿನುಗಿಗೆ ಅರಳುವ ಜೀವನಪ್ರೀತಿ: ಭವ್ಯ ಟಿ.ಎಸ್. ಸರಣಿ

ಮಳೆಗಾಲ ಮಲೆನಾಡಿನ ವಸುಂಧರೆಯನ್ನು ಸಿಂಗರಿಸಿದೆ. ಮಂಜು ಆವರಿಸಿದ ಬೆಟ್ಟ ಗುಡ್ಡಗಳು, ಮಳೆಯಲ್ಲಿ ಮಾತ್ರ ಗೋಚರಿಸುವ ಸೀತಾಳೆಯಂತಹ ವನಸುಮಗಳು, ಬಗೆಬಗೆಯ ಅಣಬೆಗಳು, ದಾರಿಯುದ್ದಕ್ಕೂ ಮನಸೆಳೆಯುವ ಸಣ್ಣ ಸಣ್ಣ ಜಲಪಾತಗಳು, ತುಂಬಿ ಹರಿಯುವ ನದಿ ತೊರೆಗಳು ಮಲೆನಾಡನ್ನು ಭೂ ಲೋಕ ಸ್ವರ್ಗವಾಗಿಸಿವೆ. ದೂರದೂರುಗಳಿಂದ ಪ್ರವಾಸಿಗರು ಮಳೆಗಾಲದಲ್ಲಿ ಮಲೆನಾಡಿನ ದೃಶ್ಯ ವೈಭವ ಸವಿಯಲು ಬರುತ್ತಿದ್ದಾರೆ. ಅನೇಕ ರೆಸಾರ್ಟ್‌ಗಳು, ಹೋಂ ಸ್ಟೇಗಳು ತಲೆಎತ್ತಿವೆ. ಮಲೆನಾಡು ತನ್ನ ಮೊದಲ ನೀರವ, ನಿರ್ಜನ ಭವ್ಯತೆಯನ್ನು ಕಳೆದುಕೊಳ್ಳುವ ಭೀತಿಯೂ ಇದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ