Advertisement

Tag: kendasampige

ಗಯಾನಾ ದೇಶದ ಕವಿ ಮಾರ್ಟಿನ್ ಕಾರ್ಟರ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಕಾರ್ಟರ್ ತನ್ನ ಕವಿತೆಗಳಲ್ಲಿ, ಸರಳವಾದ, ಸ್ಪಷ್ಟವಾದ ಶೈಲಿಯನ್ನು ಇಷ್ಟಪಡುತ್ತಾರೆ. ದೀರ್ಘವಾದ ಸಂಕೀರ್ಣ ಕವಿತೆಗಳಿಗಿಂತ ಸರಳವಾದ ಕವಿತೆಗಳನ್ನು ಬರೆಯುವುದು ಹೆಚ್ಚು ಕಷ್ಟ ಎಂದು ಅವರ ಅಭಿಪ್ರಾಯ. ಸರಿಯಾಗಿರುವುದು ಮುಖ್ಯ. “ಇದು ಇದಕ್ಕೆ ಸರಿ ಅಥವಾ ಅದಕ್ಕೆ ಸರಿ ಎಂಬ ಪ್ರಶ್ನೆಯಲ್ಲ, ಅದು ಸರಿಯಾಗಿದೆ ಅಂತ ಅನಿಸಬೇಕು, ಅಷ್ಟೆ. ಕೆಲವೊಮ್ಮೆ ನಿಮಗೆ ಕವಿತೆಗಳ ಪುಸ್ತಕವೊಂದು ಸಿಗುತ್ತದೆ, ಅದರಲ್ಲಿ ಒಂದು ಕವಿತೆಯು ಕವಿ ಹೇಳುತ್ತಿರುವ ವಿಷಯಕ್ಕೆ ಸಂಪೂರ್ಣವಾಗಿ ಸರಿಯಾಗಿರಬಹುದು…
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಗಯಾನಾ (Guyana) ದೇಶದ ಖ್ಯಾತ ಕವಿ ಮಾರ್ಟಿನ್ ಕಾರ್ಟರ್-ರವರ (Martin Carter, 1927-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”

Read More

ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್‌ ಬರಹ

ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ನನ್ನ ಪುಟ್ಟ ಶಾಲೆ: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮ ಗುರ್ಜಿ ಎಲ್ಲರ ಕೈ ಮೇಲೆ ಕಿತ್ತಳೆ ತೊಳೆ ಆಕಾರದ ಪೆಪ್ಪರಮಿಠಾಯಿ ಇಡುತ್ತಿದ್ದಂತೇ, ಅದು ಬುಳಕ್ಕನೆ ಬಾಯಿಗಿಳಿದು ಬಿಡುತ್ತಿತ್ತು. ನಾವೆಲ್ಲ ಅದನ್ನು ಕಡಿಯದೇ ದವಡೆಯಲ್ಲಿ ಅದುಮಿಟ್ಟುಕೊಂಡು ಮೆಲ್ಲಗೆ ರಸ ಹೀರಿ, ಹೀರಿ ಚಪ್ಪರಿಸುತ್ತಿದ್ದೆವು. ಅದು ಖಾಲಿಯಾಗುವ ತನಕ ಮಾತು ಕತೆ ಎಲ್ಲ ಬಂದ್… ನಮ್ಮಿಡೀ ದಿನದ ಸಂಭ್ರಮ, ಸಂತೋಷ ಆ ಪುಟ್ಟ ಮಿಠಾಯಿಗೋಸ್ಕರವೇ ಇರುತ್ತಿತ್ತೊ ಗೊತ್ತಿಲ್ಲ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಗೌರವ ಹೆಚ್ಚಿಸುವ ಬಟ್ಟೆ; ಚೆನ್ನಾಗಿಲ್ಲದಿರೆ ಆಗಬಹುದು ಬದುಕು ಮೂರಾಬಟ್ಟೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ವ್ಯಕ್ತಿತ್ವ, ಗುಣ ಮುಖ್ಯವೇ ಹೊರತು, ಹೊರಗೆ ಧರಿಸಿರುವ ದಿರಿಸಲ್ಲ ಎಂದು ಹೇಳುವ ಮಾತು ಕೇವಲ ಹೇಳಲಿಕ್ಕೆ ಮಾತ್ರ ಚೆಂದ ಅಷ್ಟೇ. ಇಂದಿನ ಯುಗದಲ್ಲಿ ಬಾಹ್ಯ ಆಕರ್ಷಣೆಯೇ ಮುಖ್ಯ!! ಆಸ್ತಿಯಾಗಿ ಕಚ್ಚೆ ಹರಿವೆಯಷ್ಟು ಹೊಲ ಇಲ್ದಿದ್ರೂ ಒಳ್ಳೇ ಮನೆ, ಕಾರು ಇದ್ದರೆ ಸಂಬಂಧ ಮಾಡೋಕೆ ಜನರು ಬರ್ತಾರೆ!! ಇಲ್ದಿದ್ರೆ ಅವರ ಕಥೆ ಅಷ್ಟೇ!! ಆದರೂ ಬ್ರಿಟಿಷರಿಂದ ‘ಅರೆ ಬೆತ್ತಲೆ ಫಕೀರ’ ಎಂದು ಕರೆಸಿಕೊಂಡು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಮಹಾತ್ಮ ಗಾಂಧೀಜಿಯವರು ಧರಿಸುತ್ತಿದ್ದುದು ಸಾಮಾನ್ಯ ಅರೆಬರೆ ಉಡುಪನ್ನೇ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ