Advertisement

Tag: kendasampige

ಫ್ರೆಂಚ್ ಹಸ್ತದಿಂದ ಮುಕ್ತವಾದ ಗಿಣಿ ಗಿನಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಈ ದೇಶದಲ್ಲಿ ತೀವ್ರವಾದ ಬಡತನವಿದೆ. ಯುವಜನತೆ ಹೆಚ್ಚಿರುವ ದೇಶವಾದ ಕಾರಣ ಜನಸಂಖ್ಯೆ ಈಚೀಚೆಗೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿಯೂ ಸಹ ಗಿನಿಯಾ ದೇಶವು ಅರಣ್ಯ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಗಿನಿಯಾ ದೇಶವು ವಿಸ್ತೃತವಾದ ಕರಾವಳಿ ಪ್ರದೇಶವನ್ನು ಹೊಂದಿದೆ. ಸುಮಾರು ಮುನ್ನೂರ ಇಪ್ಪತ್ತು ಕಿಲೋಮೀಟರ್‌ಗಳಷ್ಟು ಉದ್ದದ ಕರಾವಳಿಯನ್ನು ಹೊಂದಿದ ದೇಶವಿದು. ಇದರ ರಾಜಧಾನಿ ಕೊನಾಕ್ರಿ ನೆಲೆನಿಂತಿರುವುದೇ ಕರಾವಳಿಯಲ್ಲಿ. ಎಲ್ಲರ ಕಣ್ಮನ ಸೆಳೆಯುವ ಸುಂದರವಾದ ಕಡಲತೀರಗಳನ್ನು ಹೊತ್ತುನಿಂತಿದೆ ಕರಾವಳಿ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಗಿನಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ದರ್ಶನ್‌ ಜಯಣ್ಣ ಹೊಸ ಸರಣಿ “ಸೌದಿ ಡೇಟ್ಸ್” ಇಂದಿನಿಂದ….

ನಾನಿಲ್ಲಿ ಇಲ್ಲಿಯತನಕ ಆರು ವರ್ಷ ನಾಲ್ಕು ತಿಂಗಳುಗಳನ್ನ ಕಳೆದಿದ್ದೇನೆ. ನನ್ನ ಕುಟುಂಬದ ಜೊತೆ, ಗೆಳೆಯರ ಜೊತೆ ಈ ದೇಶ ಸುತ್ತಾಡಿದ್ದೇನೆ. ಇಲ್ಲಿನ ಬೃಹತ್ ಕಾರ್ಖಾನೆಗಳನ್ನು ಸ್ವತಃ ನೋಡಿದ್ದೇನೆ. ಇಲ್ಲಿನ ರಣ ಬಿಸಿಲಿನ ಜೊತೆಗೆ ತಂಪಾದ ಹವೆಯನ್ನೂ ಅನುಭವಿಸಿದ್ದೇನೆ. ಮರಳ ಮಳೆ, ನಿಜದ ಮಳೆ ಎರಡಕ್ಕೂ ಸಾಕ್ಷಿಯಾಗಿದ್ದೇನೆ. ಅರಬ್ಬರ ಜೊತೆ ಕೆಲಸ ಮಾಡಿ, ಓಡಾಡಿ ಚರ್ಚಿಸಿದ್ದೇನೆ. ಅವರ ಕನಸು, ವಿಚಾರ, ಜೀವನ ಕ್ರಮ, ಸ್ನೇಹವನ್ನು ಅನುಭವಿಸಿದ್ದೇನೆ.
ಸೌದಿ ಅರೇಬಿಯಾದ ವಾಸಿಯಾದ ದರ್ಶನ್‌ ಜಯಣ್ಣ ಅಲ್ಲಿನ ವಾಸದ ಹಾಗೂ ಆ ದೇಶದ ಕುರಿತು ತಮ್ಮ ಅನುಭವಗಳನ್ನು “ಸೌದಿ ಡೇಟ್ಸ್”‌ ಹೆಸರಿನಲ್ಲಿ ಶನಿವಾರಗಳಂದು, ಹದಿನೈದು ದಿನಗಳಿಗೊಮ್ಮೆ ಬರೆಯಲಿದ್ದಾರೆ

Read More

ತ್ಯಾಗದಿಂದ ಹುಟ್ಟಿಕೊಂಡಂಥ ಕಾವ್ಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ನಾನು ಬರೆಯುವೆ ಕಣ್ಮರೆಯಾಗಲು, ಇದರಿಂದ ಜೀವನವು ನನಗೆ ಬಹಿರಂಗವಾಗುತ್ತೆ, ನಾನಿಲ್ಲದೆನೇ, ಅಂತ್ಯದಲ್ಲಿ ನನ್ನ ಮುಖವು ಕಾಗದದ ಬಿಳಿ ಬಣ್ಣಕ್ಕಿಂತ ಹೆಚ್ಚು ಮಸುಕಾಗಿರುತ್ತೆ, ಪ್ರತಿಬಿಂಬವಿಲ್ಲದೆನೇ. ತನ್ನನ್ನು ತಾನು ಮರೆಯಬಹುದಾದಂತಹ ಜಗತ್ತು. ಕನ್ನಡಿಯಾಗಲ್ಲ, ಒಂದು ಕಲ್ಲಾಗಿ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇಟಲಿ ದೇಶದ ಹೆಸರಾಂತ ಕವಿ ಆ್ಯಂಟೊನೆಲಾ ಅನೆಡಾ-ರವರ (Antonella Anedda, 1955) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ

ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ