Advertisement

Tag: kendasampige

ಮನುಷ್ಯ ಮೃಗವಾಗುತ್ತಿರುವನೆ?: ಸುಮಾವೀಣಾ ಸರಣಿ

ವಾಹನಗಳ ವಿಚಾರಕ್ಕೆ ಬಂದಾಗ ಗಾಳಿ ಇದ್ದರೆ ಗಾಲಿ ಓಡಲು ಸಾಧ್ಯ ಅಲ್ವೆ! ಸ್ವಲ್ಪ ಗಾಳಿ ಹೆಚ್ಚಾದರೂ ವಾಹನಗಳಾಗಲಿ, ಮನುಷ್ಯನಾಗಲಿ ಇರುವುದಿಲ್ಲ. ಗಾಳಿ ಹೆಚ್ಚಾಗಿ ಸೈಕಲ್ ಬರ್ಸ್ಟ್ ಆಯಿತು. ಅದೇ ಗಾಳಿ ಇಲ್ಲದೆ ಹೋದರೆ ಅದು ಓಡುವುದೇ ಇಲ್ಲ ಪಂಚರ್ ಆಗುತ್ತದೆ. ಅಂತೆಯೇ ಮಾನವ ಉಸಿರುಗಟ್ಟಿ ಸಾಯುತ್ತಾನೆ. ಹೌದು! ಮಾನವನ ಬದುಕು ಉಸಿರು ಹೋದಾಗ ‘ಸತ್ತರು’, ‘ಅದು’, ‘ಇದು’, ‘ಶವ’ ಎಂಬುದಾಗಿ ಮಾತನಾಡುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೊಂದನೆಯ ಬರಹ ನಿಮ್ಮ ಓದಿಗೆ

Read More

ಅವ್ವಕ್ಕನೆಂಬ ಅಚ್ಚರಿ…: ಜ.ನಾ. ತೇಜಶ್ರೀ ಹೊಸ ಕಾದಂಬರಿಯ ಪುಟಗಳು

ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ಒಂದು ಕೊನೇ ರೌಂಡು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಾಮಿಗೆ ದುಃಖ ತಡೆದುಕೊಳ್ಳಲು ಆಗಲಿಲ್ಲ. ಮಣಿ, “ಕಾರ್ ಚೆನ್ನಾಗಿದೆ. ತಿಂಡಿ ತಿಂದ ಮೇಲೆ ನನ್ನನ್ನು ಒಂದು ರೌಂಡ್ ಹಾಕಪ್ಪ ಸ್ವಾಮಿ” ಎಂದಿದ್ದು ಸ್ವಾಮಿ, “ಅದೇನು ದೊಡ್ಡ ವಿಷಯ. ಒಂದಲ್ಲ ಎರಡು ರೌಂಡ್ ಹಾಕೋಣ ಬಿಡು” ಎಂಬ ಮಾತುಗಳು ಜ್ಞಾಪಕಕ್ಕೆ ಬಂದವು. ಸ್ವಾಮಿ ಕೈಕೈ ಹಿಸುಕಿಕೊಂಡು ನನ್ನಿಂದ ಅಪಾರಾಧ ನಡೆದು ಹೋಯಿತಲ್ಲ ಎಂದುಕೊಳ್ಳುತ್ತ.. ಸ್ವಾಮಿ, “ದೇವರೆ ಈ ದಿನ ಬೆಳಿಗ್ಗೆ ನನ್ನನ್ನು ಯಾಕಪ್ಪ ಇಲ್ಲಿಗೆ ಕರೆದುಕೊಂಡು ಬಂದೆ?” ಎಂದು ಅಳತೊಡಗಿದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಕೊನೆಯ ಕಂತು

Read More

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ