Advertisement

Tag: kendasampige

ಪ್ರಕೃತಿಯೇ ದೈವವೆನ್ನುವ ದೈಯ್ಯದ ಹರಕೆ: ಭವ್ಯ ಟಿ.ಎಸ್. ಸರಣಿ

ರಮಣೀಯವಾದ ಹಚ್ಚಹಸಿರಿನ ಮಲೆನಾಡಿನ ಒಂಟಿ ಮನೆಗಳ ಅಕ್ಕಪಕ್ಕದ ದರುಗು ಗುಡಿಸುವ ಹಡ್ಡೆಗಳ ಬನದೊಳಗೆ ಇರುವ ಮರದ ಬುಡಗಳೇ ಈ ದೈಯ್ಯಗಳ ಆವಾಸಸ್ಥಾನ. ಪ್ರಕೃತಿ, ಮರ-ಗಿಡಗಳಲ್ಲಿ ದೈವತ್ವವನ್ನು ಕಾಣುವ ಮಲೆಯ ಜನರ ಭಕ್ತಿ, ಶ್ರದ್ಧೆಗಳಿಗೆ ಈ ದೈಯ್ಯಗಳು ಪಾತ್ರವಾಗಿವೆ. ದೈಯ್ಯದ ಮರಗಳೆಂಬ ಭಯ, ಭಕ್ತಿಯಿಂದ ಈ ಮರಗಳನ್ನು ಯಾರೂ ಕಡಿಯುವುದಿಲ್ಲ. ಇದರಿಂದ ಪ್ರಕೃತಿಯ ಸಂರಕ್ಷಣೆಯೂ ಆಗುತ್ತಿದೆ. ಊರು ತೊರೆದು ಬೇರೆ ಬೇರೆ ಊರಿಗೆ ಹೋಗಿ ನೆಲೆಸಿರುವ ಜನರು ಪುನಃ ಊರಿಗೆ ಬರುವುದು, ಬಂಧು ಬಾಂಧವರೊಡನೆ ಬೆರೆಯಲು ಇದೊಂದು ಸುದಿನ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ದೇವರ ಹರಕೆ ಸಲ್ಲಿಸುವುದರ ಕುರಿತ ಬರಹ ನಿಮ್ಮ ಓದಿಗೆ

Read More

ಅಲಾರಾಂ ಹಾಗೂ ಓದುವ ವೇಳೆಯ ಕುರಿತು ಒಂದಷ್ಟು ಮಾತು… ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮಜ್ಜನ ಮನೆಯಲ್ಲಿ ಇದ್ದಾಗ, ನಮ್ಮಜ್ಜ ನನ್ನನ್ನು ಬೆಳಗ್ಗೆ ಏಳಿಸುವ ಅಲಾರಾಂನಂತೆ ಕೆಲಸ ಮಾಡುತ್ತಿದ್ದರು. ಆದರೆ ಯಾವಾಗ ಹಾಸ್ಟೆಲ್ ಸೇರಿದೆನೋ ಅಲ್ಲಿ ಹಾಸ್ಟೆಲ್ ವಾರ್ಡನ್ ಪೀಪಿಯನ್ನು ಊದಿ ಏಳಿಸುತ್ತಿದ್ದರು. ಆಗ ನಮ್ಮ ಮಲ್ಲಾಡಿಹಳ್ಳಿಯ ಹಾಸ್ಟೆಲ್ಲಿನಲ್ಲಿ ತುಂಬಾ ಶಿಸ್ತು ಇತ್ತು. ನಾವು ಕಡ್ಡಾಯವಾಗಿ ಬೆಳಗ್ಗೆ 5 ಕ್ಕೆ ಏಳಲೇಬೇಕಾಗಿತ್ತು. ಏಳದಿದ್ದರೆ ಕೋಲು ಹಿಡಿದುಕೊಂಡು ಬರುತ್ತಿದ್ದರು. ಒಂದೊಮ್ಮೆ ಮಲಗಿರುವುದನ್ನು ಕಂಡರೆ ಕುಂಡೆಯ ಮೇಲೆ ಬಾರಿಸುತ್ತಾ ಹೋಗುತ್ತಿದ್ದರು, ಬೆಳಗ್ಗೆ ಎದ್ದು ಕೆಲವರು ಓದುತ್ತಾ ಕುಳಿತರೆ ಕೆಲವರು ಬ್ರಷ್ ಮಾಡಲು ಹೋಗುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ

ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ನಾರಿ ಮತ್ತು ವಾಹನ ಸವಾರಿ – ಸಬಲೀಕರಣದ ಪರಿಣಾಮಕಾರಿ ದಾರಿ!: ಡಾ.ಎಲ್.ಜಿ.ಮೀರಾ ಅಂಕಣ

ನಮ್ಮ ಜೀವನವೆಂಬ ವಾಹನದ ಚಾಲಕಪೀಠದಲ್ಲಿ ಯಾರಿದ್ದಾರೆ? ನಾವೋ ಅಥವಾ ಬೇರೆ ಯಾರಾದರೂ ಅಧಿಕಾರಸ್ಥರೋ? ಗಂಡಾಳಿಕೆಯ ಸಮಾಜಗಳಲ್ಲಿ ಹೆಣ್ಣು ತನ್ನ ಜೀವನದ ಚಾಲಕ ಪೀಠದಲ್ಲಿ ಕುಳಿತಿದ್ದು ತೀರಾ ಅಪರೂಪ. ಅವಳು ಏನು ತಿನ್ನಬೇಕು, ಕುಡಿಯಬೇಕು, ಯಾವ ಬಟ್ಟೆ ತೊಡಬೇಕು ಮುಂತಾದ ಸಾಧಾರಣ, ದೈನಿಕ ಸಂಗತಿಗಳಿಂದ ಹಿಡಿದು ಓದು, ಕೆಲಸ, ಮದುವೆ, ಆಸ್ತಿಗಳಿಕೆಗಳಂತಹ ಮುಖ್ಯ ವಿಷಯಗಳ ತನಕ ಮನೆಯ ಗಂಡಸರೋ ಅಥವಾ ಅವರ ಪ್ರತಿನಿಧಿಗಳಾದವರೋ ನಿರ್ಧರಿಸುವ ಕಾಲ ಅನೇಕ ಶತಮಾನಗಳ ತನಕ ಇತ್ತಲ್ಲ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ