Advertisement

Tag: kendasampige

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಕಾರವಾರದ ಆ ದಿನಗಳು: ರಂಜಾನ್ ದರ್ಗಾ ಸರಣಿ

‘ನಮ್ಮ ಕಷ್ಟ ಸುಖದಲ್ಲಿ ಇವರು. ಇವರ ಕಷ್ಟ ಸುಖದಲ್ಲಿ ನಾವು. ನಮ್ಮ ನಡುವೆ ಧರ್ಮಗಳು ಅಡ್ಡ ಬರುವುದಿಲ್ಲ. ಧರ್ಮಗಳ ಗೋಜಿಗೆ ನಾವು ಹೋಗುವುದಿಲ್ಲ. ಅವುಗಳ ಪಾಡಿಗೆ ಅವು ಇರುತ್ತವೆ. ನಮ್ಮ ಪಾಡಿಗೆ ನಾವು ಇರುತ್ತೇವೆ. ಕೆಲಸ ಮಾಡುವವರಿಗೆ ಎಲ್ಲ ಧರ್ಮಗಳು ಒಂದೇ. ಕೆಲಸವಿಲ್ಲದವರಿಗೆ ಮತ್ತು ಕೆಲಸವಿಲ್ಲದೆ ಬದುಕಬೇಕೆನ್ನುವವರಿಗೆ ಧರ್ಮಗಳು ಬೇರೆ ಬೇರೆಯಾಗಿ ಕಾಣುತ್ತವೆ. ಆ ಅವರು ಉಗ್ರರೂಪ ತಾಳಿ ಅನ್ಯ ಧರ್ಮೀಯರನ್ನು ಕೊಲ್ಲುತ್ತಾರೆ ಇಲ್ಲವೆ ಅವರಿಂದ ಕೊಲೆಗೀಡಾಗುತ್ತಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 100ನೇ ಕಂತು ನಿಮ್ಮ ಓದಿಗೆ

Read More

ಸ್ರೀರಾಮ್ನೋಮಿ: ಸುಮಾ ಸತೀಶ್ ಸರಣಿ

ರಾಮುನ್ನ ಒಲಿಸ್ಕಣಾದು ಕಷ್ಟ. ಹನುಮಂತನ್ನ ಒಲಿಸ್ಕಣಾದು ಸುಲ್ಬ. ರಾಮಾ ಅಂದ್ರೆ ಸಾಕು ಹನುಮ ಓಡೋಡ್ಕಂಡು ಬರ್ತಾನೆ. ಆಗ ಬ್ಯಾರೆ ಆಟ ಕಟ್ದೆ ರಾಮ್ನೂ ಹಿಂದಿಂದ್ಲೇ ಬತ್ತಾನೆ‌ ಅಂಬೋದು ಅಜ್ಜಿ ಯೋಳ್ತಿದ್ದ ಇಚಾರ. ಅಂಗಾಗಿ ರಾಮನ ಹತ್ರುಕ್ಕೆ ಹೋಗಾಕೆ ಸಲೀಸು ಹನುಮಂತನ ಭಜನೆ ಮಾಡೋದು. ಹನುಮ ಕಪಿ ಅಲ್ವೇ. ಕಿಚಪಿಚಾಂತ ನಾವೂ ಕಪಿಗಳಂಗೇ ಭಜನೆ ಹಾಡ್ತಿದ್ವಿ. ಮರದಾಗಿರೋವೂ ಜಾತಿಪ್ರೀತಿಗೆ ಓಡಿಬರೋ ಅಂಗೆ ಇರ್ತಿತ್ತು ನಮ್ಮ ಆಲಾಪ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

‘ರೈತ ಕವಿ’ ಲೆನಾರ್ಟ್ ಸ್ಯೋಗ್ರೆನ್ : ಎಸ್. ಜಯಶ್ರೀನಿವಾಸ ರಾವ್ ಸರಣಿ

ಈ ಕಾರ್ಯದ ವಿರೋಧಾಭಾಸದ ಸ್ವರೂಪವು ಅವರ ಕವಿತೆಗಳಿಗೆ ಒಂದು ರೀತಿಯ ಮೊಂಡುತನದ ನಿಷ್ಠುರತೆಯನ್ನು ನೀಡುತ್ತದೆ. ಮೌನದ ದಿಕ್ಕಿನಲ್ಲಿ ಮಾತನಾಡುವ ಈ ಮಾತು, ಭಾಷೆಯ ಮೂಲಕ ಭಾಷೆಯಿಲ್ಲದವರ ಜಗತ್ತನ್ನು ವ್ಯಾಖ್ಯಾನಿಸುವ ಈ ಪ್ರಯತ್ನ – ಅದರೊಂದಿಗೆ, ಯಾವಾಗಲೂ ಅಡಗಿರುವ ವೈಫಲ್ಯದ ಭಾವನೆಯ ಜೊತೆ – ಸ್ಯೋಗ್ರೆನ್ ಅವರು ಇದನ್ನು ಮುವ್ವತ್ತಕ್ಕೂ ಹೆಚ್ಚು ಕವನ ಸಂಕಲನಗಳಲ್ಲಿ ನಿರಂತರವಾಗಿ ಮತ್ತು ಸಮಚಿತ್ತದಿಂದ ನಿರ್ವಹಿಸುತ್ತಾ ಬಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಲೆನಾರ್ಟ್ ಸ್ಯೋಗ್ರೆನ್-ರವರ (Lennart Sjögren, 1930) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ