Advertisement

Tag: kendasampige

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

Read More

ಹೆಣ್ಣಿನ ಉಡುಪು ಎಂಬ ಯುದ್ಧಭೂಮಿ: ಡಾ.ಎಲ್.ಜಿ.ಮೀರಾ

ನಾವು ಹೆಂಗಸರು ಹಲವು ಬಗೆಯಲ್ಲಿ ಸೃಷ್ಟಿಯಾಗಿರುತ್ತೇವೆ, ಅಲ್ಲದೆ ವಯಸ್ಸು, ಕಾಲ, ಸಂದರ್ಭ ಬದಲಾದಂತೆ ನಮ್ಮ ಆಯ್ಕೆಗಳು ಬದಲಾಗುತ್ತಿರುತ್ತವೆ. ನಮ್ಮಲ್ಲಿ ಅಲಂಕಾರದ ಗಾಢ ಅಭಿರುಚಿ ಇರುವವರು ಇದ್ದಂತೆ ಅದರ ಬಗ್ಗೆ ಅಷ್ಟೇನೂ ಆಸಕ್ತಿ ಇಲ್ಲದವರೂ ಇರುತ್ತೇವೆ. ನಮಗೆ ಬೇಸರ ತರಿಸುವ ವಿಷಯ ಏನೆಂದರೆ ನಮ್ಮ ಒಳಗಿನ ಗುಣ, ಜೀವನದೃಷ್ಟಿ, ಚಿಂತನೆ ಇವುಗಳಿಗೆ ಪ್ರಾಮುಖ್ಯ ಕೊಡದೆ ಕೇವಲ ಸೀರೆ, ಒಡವೆ, ಮುಖಬಣ್ಣಗಳಿಂದ ನಮ್ಮನ್ನು ಅಳೆದುಬಿಡುವ ಸಮಾಜದ ಧೋರಣೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮರೆಯಲಾಗದ ರಾಜನೀತಿಜ್ಞ ಬಿ. ಸುಬ್ಬಯ್ಯ ಶೆಟ್ಟಿ: ರಂಜಾನ್ ದರ್ಗಾ ಸರಣಿ

ಬಾಕ್ರಬೈಲು ಸುಬ್ಬಯ್ಯ ಶೆಟ್ಟಿ ಅವರು 1972-1977 ಮತ್ತು 1978-1983 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿದ್ದರು. ದೇವರಾಜ ಅರಸು ಅವರ ಮಂತ್ರಿಮಂಡಲದಲ್ಲಿ ಭೂಸುಧಾರಣಾ ಸಚಿವರಾದ ನಂತರ ವಾರ್ತಾ, ಇಂಧನ ಮತ್ತು ಶಿಕ್ಷಣ ಸಚಿವರಾಗಿ ಸೇವೆಸಲ್ಲಿಸಿದರು. ಶಿಕ್ಷಣದಲ್ಲಿಯೂ ಸುಧಾರಣೆ ತಂದರು. ರಾಜ್ಯದಲ್ಲಿ ಇಷ್ಟೊಂದು ಎಂಜಿನಿಯರಿಂಗ್ ಕಾಲೇಜುಗಳಾಗಲಿಕ್ಕೂ ಅವರೇ ಕಾರಣರು. ಕರ್ನಾಟಕದ ಎಲ್ಲ ಹೈಸ್ಕೂಲ್‌ಗಳಲ್ಲಿ ಮಹಿಳಾ ಕರಾಟೆ ಪಟುಗಳ ಮೂಲಕ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸುವ ಕನಸನ್ನು ಹೊಂದಿದ್ದ ಅವರು ಆ ಕುರಿತು ಯೋಜನೆ ರೂಪಿಸಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಖಂಡಕಾವ್ಯಕ್ಕೊಂದು ಪ್ರವೇಶ: ಯು.ಆರ್.ಅನಂತಮೂರ್ತಿ ಮುನ್ನುಡಿ

ಆತ್ಮ ಸಫಲತೆಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಹೆಣ್ಣು ಪ್ರಣಯಿನಿಯಾಗಿಯೂ, ಹೆಂಡತಿಯಾಗಿಯೂ, ಮಗಳಾಗಿಯೂ, ತಾಯಿಯಾಗಿಯೂ, ‘ಬಜಾರಿ’ಯಾಗಿಯೂ ಅವನಿಗೆ ಒದಗುತ್ತಾಳೆ. ಇದನ್ನು ನಟಿಸಿ ತೋರಲು ತೇಜಶ್ರೀ ಕವನದಲ್ಲಿ ಒಂದು ಅಪರೂಪದ ಕಾವ್ಯ ಪ್ರಯೋಗವಿದೆ. ಇಲ್ಲಿ ಬರುವ ಅವನು ಪುರಾಣದ ಕೃಷ್ಣನೂ ಹೌದು, ನಿಜದ ಅವನೂ ಹೌದು. ಹಾಗೆಯೇ ರಾಧೆ ಪುರಾಣದ ರಾಧೆಯೂ ಹೌದು, ನಿಜದ ಅವಳೂ ಹೌದು. ಈ ಎರಡು ಸತ್ಯಗಳೂ ಒಟ್ಟಾಗಿ ನಮಗೆ ಭಾಸವಾಗುವುದರಿಂದ ಸಾಮಾಜಿಕ ಸಾಂಸಾರಿಕ ನೀತಿ ಅನೀತಿಗಳನ್ನು ಈ ಕವನ ಮೀರುತ್ತದೆ.
ಜ.ನಾ. ತೇಜಶ್ರೀ ಖಂಡಕಾವ್ಯ “ಅವನರಿವಲ್ಲಿ” ಕೃತಿಗೆ ಯು.ಆರ್.‌ ಅನಂತಮೂರ್ತಿ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ