Advertisement

Tag: kendasampige

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಎಲೆ ಮರೆಯ ಮಧುರ ಫಲ: ರಂಜಾನ್ ದರ್ಗಾ ಸರಣಿ

ಮೃದುಭಾಷಿ ಮಹಾದೇವಪ್ಪನವರ ವ್ಯಕ್ತಿತ್ವದ ಒಂದು ಮಹತ್ವದ ಅಂಶ ಎಂದರೆ, ಅವರು ಯಾವ ಕಾಲಕ್ಕೂ ಹೊಸದನ್ನು ಬಯಸುವವರು. ತಮ್ಮದೇ ಆದ ವಿಚಾರಕ್ಕೆ ಅಂಟಿಕೊಂಡವರಲ್ಲ. ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ತಮಗಿಂತಲೂ ಬೇರೆಯವರು ಚೆನ್ನಾಗಿ ತಿಳಿಸಿದರೆ ಅದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುವಂಥ ಸುಸಂಸ್ಕೃತರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 97ನೇ ಕಂತು ನಿಮ್ಮ ಓದಿಗೆ

Read More

ಶ್ರೀಲೋಲ ಸೋಮಯಾಜಿ ಬರೆದ ಈ ಭಾನುವಾರದ ಕತೆ

ಕುಟುಂಬಕ್ಕೆ ಆಗಮಿಸಿದ ಹೊಸ ಸದಸ್ಯೆಯ ಆಗಮನದ ಸಂತೋಷ ಬರಿಯ ಹದಿನೈದು ದಿನಗಳಲ್ಲಿ ಕಮರಿಹೋಯಿತು. ಆಸ್ಪತ್ರೆಯಿಂದ ಹೊರಬರುವ ಮೊದಲೇ ಮೊದಲ ಬಾರಿಗೆ ದಪ್ಪ ಸೂಜಿಯಿಂದ ಚುಚ್ಚಿಸಿಕೊಂಡು ರಕ್ತವನ್ನು ದೇಹದ ಒಳಗೆ ದಾಟಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಅಳುತ್ತಿದ್ದ ಮಗುವನ್ನು ನೋಡಲಾಗದ ರಮ್ಯಾ ಕೋಣೆಯಿಂದ ಹೊರಗೆ ಓಡಿಬಂದು ಬಿಕ್ಕಿಬಿಕ್ಕಿ ಅಳತೊಡಗಿದಳು.
ಶ್ರೀಲೋಲ ಸೋಮಯಾಜಿ ಬರೆದ “ಮೊನಾಲಿಸಾಳ ನಗು” ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕಾವ್ಯ ಸಂಚಾರಿಣಿ ಮಮತಾ ಸಾಗರ: ಬಾನು ಮುಷ್ತಾಕ್ ಮುನ್ನುಡಿ

ಮಮತಾ ಸಾಗರ್‌ ಭಾಷೆಯಲ್ಲಿ ಹೇಳುವುದಾದರೆ ಆಕೆಯ ಪದಸಂಚಾರದ ಲಯ, ಗತಿ, ಭಾವ, ಅರ್ಥ ವ್ಯಾಪ್ತಿ ಮತ್ತು ಭಾಷೆಯ ನಿಲ್ಲದ ಪಯಣ ಕವಿಯತ್ರಿಯಂತೆಯೆ ಆಕೆಯ ಪದಗಳು ಕೂಡ ನಿರಂತರ ಸಂಚಾರದಲ್ಲಿರುತ್ತವೆ. ಹೀಗಾಗಿ ಆಕೆಯ ಭಾವನೆ ಮತ್ತು ಭಾವತೀವ್ರತೆಗಳಿಗೆ ಜಡ್ಡು ಮತ್ತು ಜಿಡ್ಡು ಹಬ್ಬಿಲ್ಲ. ಕೆಲವೆಡೆ ಪ್ರಖರವಾಗಿ ಇಡೀ ಆಸ್ತಿತ್ವವನೆ ಕಲಕುವ ಸಾಲುಗಳು ಯರ್ರಾ ಬಿರ್ರಿ ಕಲ್ಲು ಮಳೆಗರೆದಂತೆ ಮತ್ತೊಮ್ಮೆ ಪುಷ್ಪ ವೃಷ್ಟಿಯಂತೆ ಮತ್ತೊಮೆ ತಣ್ಣಗೆ ಕರಗುವ ಮಂಜಿನ ಕಠಾರಿ ಆಳವಾಗಿ ಎದೆಗಿಳಿದಂತೆ ಕಾಡುತ್ತಲೇ ಹೋಗುತ್ತವೆ.
ಮಮತಾ ಜಿ. ಸಾಗರ ಇಲ್ಲಿಯವರೆಗಿನ ಕವಿತೆಗಳ ಸಂಕಲನ “ಪದಸಂಚಾರ”ಕ್ಕೆ ಬಾನು ಮುಷ್ತಾಕ್‌ ಬರೆದ ಮುನ್ನುಡಿ

Read More

ಎಲ್ಲವೂ…. ಮರಳು ಮರಳೂ…: ಎಚ್. ಗೋಪಾಲಕೃಷ್ಣ ಸರಣಿ

ಮನೆಗೆ ಬರಬೇಕಾದರೆ ಮತ್ತೊಂದು ಯೋಚನೆ ತಲೆ ಕೆಡಿಸಿತು. ಸೈಟ್ ಮಧ್ಯ ಮಾರ್ಕ್ ಮಾಡ್ತಾ ಇದಾನೆ. ಮಧ್ಯದಿಂದ ಯಾರಾದರೂ ಮಾರ್ಕ್ ಮಾಡ್ತಾರಾ? ನಾನು ದಾಖಲು ಮಾಡ್ತಿರೋ ಈ ಪ್ರಸಂಗ ನಾಲ್ಕೂ ಕಾಲು ದಶಕದ ಹಿಂದೆ. ಅಂದರೆ ಆಗಿನ್ನೂ ಮೊಬೈಲ್ ಫೋನು, ಲ್ಯಾಂಡ್ ಲೈನ್ ಫೋನು ಇವೆಲ್ಲಾ ಇರದಿದ್ದ ಕಾಲ. ಏನಾದರೂ ಸಮಸ್ಯೆ, ಅದಕ್ಕೆ ಪರಿಹಾರ ಬೇಕು ಅಂದರೆ ಒಂದು ಮುಖಾಮುಖಿ ಮಾತು, ಇಲ್ಲ ಅಂದರೆ ಪೋಸ್ಟ್ ಮೂಲಕ ಕಾರ್ಡು ಅಥವಾ ಇನ್ ಲ್ಯಾಂಡ್ ಲೆಟರ್, ಇಲ್ಲಾ ಕಾಗದದಲ್ಲಿ ಬರೆದು ಅದನ್ನ ಕವರ್‌ನಲ್ಲಿ ಇಟ್ಟು ಪೋಸ್ಟ್ ಡಬ್ಬಕ್ಕೆ ಹಾಕಿ ಉತ್ತರಕ್ಕೆ ಕಾಯೋದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ನಾಲ್ಕನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ