Advertisement

Tag: kendasampige

ನಮ್ಮ ಪರಿಸೆಗಳು: ಸುಮಾ ಸತೀಶ್ ಸರಣಿ

ಬಂಗಾರುದ್ ಕಾಟುಮಲಿಂಗೇಶ್ವರುನ್ನ ವರ್ಸುಕ್ಕೆ ಎಲ್ಡು ದಪ ಮಾತ್ರ ತೆಗ್ದು ಊರಾಚೇಗ್ಳ ಗುಡೀಗೆ ತಕಾ ಬರ್ತಾರೆ. ಅದ್ಕೆ ಮುಂದ್ಲೇ‌ ಆ ಲಿಂಗುದ್ ತೂಕ ಬರ್ದು ಮಡ್ಗಿ, ವಾಪ್ಸು ಇಕ್ಕಾ ಮದ್ಲು ಇನ್ನೊಂದು ದಪ ತೂಕ ನೋಡಿ ಮಡುಗ್ತಾರೆ. ಸಿವರಾತ್ರಿ ಪರಿಸೇ ಟೇಮ್ ನಾಗೆ ಒಂದು ಕಿತ, ಕಾರ್ತೀಕದಾಗೆ ಕೊನೇ ಸೋಮವಾರ ಇನ್ನೊಂದು ಕಿತ ದ್ಯಾವ್ರಿಗೆ ಹೊರುಕ್ ಬರಾಕೆ ಮೋಕ್ಷ ಸಿಕ್ತೈತೆ. ಜನುರ್ಗೂ ಕಣ್ ತುಂಬ್ಕಣಾಕೆ ಆಗ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಗುರುತರ ಗುರಿಯೆಡೆಗೆ ಓಡಲಿ ಜಮೈಕಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಮೈಕಾದ ಜನರು ಕಲೆಗಳ ಬಗೆಗೆ ಅತೀವ ಆಸಕ್ತಿಯನ್ನು ಹೊಂದಿದ್ದಾರೆ. ದೃಶ್ಯ ಕಲೆಗಳು ಮತ್ತು ಪ್ರದರ್ಶನ ಕಲೆಗಳು ಜಮೈಕಾದ ಜನರ ಬದುಕಿನ ಅವಿಭಾಜ್ಯ ಅಂಗಗಳು. ಕಲ್ಪನೆ, ಉತ್ಸುಕತೆ ಮತ್ತು ಸೃಜನಶೀಲತೆಗಳ ಮೂಲಕ ವಿವಿಧ ಕಲೆಗಳನ್ನು ರೂಪಿಸಿಕೊಂಡಿದೆ ಜಮೈಕಾ. ಕಲೆಗಳು ಅಲ್ಲಿಯ ಜನರ ಬದುಕಿನ ಸ್ಫೂರ್ತಿಯ ಸೆಲೆಯಾಗಿದೆ. ಬ್ಯಾರಿಂಗ್ಟನ್ ವ್ಯಾಟ್ಸನ್, ಆಲ್ಬರ್ಟ್ ಹುಯಿ ಇವರು ಜಮೈಕಾದ ಚಿತ್ರಕಲಾವಿದರು. ಎಡ್ನಾ ಮ್ಯಾನ್ಲಿ ಎನ್ನುವವರು ಪ್ರಸಿದ್ಧ ಶಿಲ್ಪಿಯಾಗಿದ್ದಾರೆ. ಇವರು ಜಮೈಕಾದಲ್ಲಿ ಮಾತ್ರವಲ್ಲದೆ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ವ್ಯಕ್ತಿತ್ವಗಳ ಮುಖವಾಡ ಕಳಚುವ ಅವಳ ಕಣ್ಣಿನ ಕಥೆ: ರಾಮ್‌ಪ್ರಕಾಶ್‌ ರೈ ಸರಣಿ

ಇಲ್ಲಿ ಕ್ರೈಮ್ ಇದ್ದರೂ, ಅನ್ಯಾಯವಿದ್ದರೂ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಯುಕ್ತಿಯೊಂದರ ಶಕ್ತಿಯಿಂದ ಆರಕ್ಷಕರು, ಕ್ರಮಬದ್ಧ ತನಿಖೆ ಎಲ್ಲವ ಮೀರಿಸಿ ಬೇಧಿಸುವ ಹಾದಿಯೇ ಬಲು ರೋಮಾಂಚಕ. ಕಥನ ಕಟ್ಟುವಿಕೆಯೂ ಈ ದಾರಿಗೆ ಹಾದಿಗಲ್ಲಿನಂತೆ ಪೂರಕವಾಗಿಯೇ ಇದೆ. ಅದು ಮಾತ್ರವಲ್ಲದೆ, ಪ್ರಿಯಾಳನ್ನು ಸೂಪರ್ ಹ್ಯೂಮನ್ ಎಂದೋ, ಅತಿಮಾನುಷ ಶಕ್ತಿ ಉಳ್ಳವಳು ಎಂಬಂತೆ ಬಿಂಬಿಸದೆ ಸಾಮಾನ್ಯ ಮಹಿಳೆಯೊಬ್ಬಳಂತೆ ತೋರಿಸಿದ್ದು, ಕಥನಕ್ಕೆ ಪ್ರಾಮಾಣಿಕ ಸ್ಪರ್ಶವನ್ನು ನೀಡಿದೆ ಮತ್ತು ಅದು ತೀರಾ ನೈಜವಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನೆದರ್‌ಲ್ಯಾಂಡ್ಸ್ ರಾಜಕಾರಣ- ಒಂದು ಅಪೂರ್ಣ ಅನುಬಂಧ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾಗರಿಕರನ್ನು ಸಾಕಬೇಕು, ಪೋಷಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ, ಅವರನ್ನು ಸಬಲಗೊಳಿಸಬೇಕು, ಅವರು ಸರ್ಕಾರ, ರಾಜ್ಯದ ಮೇಲೆ ಅವಲಂಬಿತರಾಗದ ಹಾಗೆ ನೋಡಿಕೊಳ್ಳಬೇಕು, ಹಾಗಾದಾಗ ಮುಂದೆ ಅವರೇ ದೇಶದ ಆರ್ಥಿಕ-ಸಾಮಾಜಿಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಾರೆ ಎಂಬುದು ಈ ಸಮಾಜದ ನಿಲುವು. ಉನ್ನತ ಮಟ್ಟದ ರಾಷ್ಟ್ರೀಯ ಆದಾಯ, ತಲಾವಾರ್ಷಿಕ ಆದಾಯದ ಹಂತವನ್ನು ತಲುಪಿದ ದೇಶದಲ್ಲಿ ಮಾತ್ರ ಇದು ಸಾಧ್ಯ. ಶ್ರೀಮಂತರು, ಚಕ್ರವರ್ತಿಗಳು ಇಲ್ಲವೆಂದಿಲ್ಲ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಕೊನೆಯ ಬರಹ

Read More

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ