Advertisement

Tag: kendasampige

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಬನ್ನಿ.. ಸ್ವಯಂಪ್ರಭೆಯರನ್ನು ಸಂಭ್ರಮಾಚರಿಸೋಣ: ಎಲ್.ಜಿ.ಮೀರಾ ಅಂಕಣ

ಸಾಂಪ್ರದಾಯಿಕ ಸಮಾಜದ ಊಹೆಗೆ ನಿಲುಕದ ಇನ್ನೊಂದು ಜಿಗಿತವನ್ನು ನಮ್ಮ ಹೆಣ್ಣುಮಕ್ಕಳು ಈಗ ಮಾಡುತ್ತಿದ್ದಾರೆ. ಅದೇನೆಂದರೆ ಲಿಂಗ ಎಂಬುದು ಕೇವಲ ಗಂಡು-ಹೆಣ್ಣು ಎಂದು ಎರಡು ತುದಿಗಳಲ್ಲ, ಗಂಡಿನೊಳಗೆ ಹೆಣ್ಣು ಮತ್ತು ಹೆಣ್ಣಿನೊಳಗೆ ಗಂಡು ಬೇರೆ ಬೇರೆ ಪ್ರಮಾಣಗಳಲ್ಲಿ ಇರಬಹುದು, ಹೀಗಾಗಿ ಲಿಂಗ ಎಂಬುದು ಶ್ರೇಣಿ ಎಂಬ ಹೊಸ ತಿಳುವಳಿಕೆಯನ್ನು ತಮ್ಮ ನಡೆನುಡಿ, ಇರಿಸರಿಕೆ, ಹೋರಾಟಗಳಿಂದ ತಲುಪಿಸಲು ಪ್ರಯತ್ನಿಸುತ್ತಿದ್ದಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತನೆಯ ಬರಹ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ನಮ್‌ ಸೈಟ್‌ ಎಲ್ಲಿದೆ! : ಎಚ್. ಗೋಪಾಲಕೃಷ್ಣ ಸರಣಿಯ ಐವತ್ತನೆಯ ಕಂತು!

ಮೊದಲನೇ ಮಗನ ಚೆಡ್ಡಿಗೆ ಕೂಡುವ ಭಾಗದಲ್ಲಿ ತೇಪೆ ಹಾಕಿಸಿ ಎರಡನೆಯವನಿಗೆ ಹಾಕುತ್ತಿದ್ದರು, ಅವನ ನಂತರ ಮೂರನೇ ಅವನು, ಅದಾದ ಮೇಲೆ ನಾಲ್ಕು, ಐದು ಹೀಗೆ. ಕೊನೇ ಹುಡುಗನ ಬಳಿ ಬರುವ ಹೊತ್ತಿಗೆ ಚಡ್ಡಿಗೆ ತೇಪೆ ಹಾಕಲು ಜಾಗವೇ ಇರ್ತಾ ಇರಲಿಲ್ಲ. ಆಗಿನ್ನೂ ಪ್ರೈವೇಟ್ ಸ್ಕೂಲ್ ಬಂದಿರಲಿಲ್ಲ ಮತ್ತು ಎಲ್ಲರೂ ಸರ್ಕಾರಿ ಶಾಲೆ. ತೇಪೆ ಇಲ್ಲದಿರುವ ಚೆಡ್ಡಿ ಹಾಕಿದವನು ಮನೆಯ ಮೊದಲ ಮಗ ಎಂದು ಸುಲಭವಾಗಿ ಗೊತ್ತಾಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತನೆಯ ಕಂತು

Read More

ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ

ಈ ನಾಟಕದ ಮತ್ತೊಂದು ವೈಶಿಷ್ಟ್ಯತೆಯೆಂದರೆ, ಇಂದಿನ ತಂತ್ರಜ್ಞಾನ ಮತ್ತು ಅದರ ಪರಿಣಾಮದ ಸೋ ಕಾಲ್ಡ್ ಆನ್ ಲೈನ್ ಸಾಮಾಜಿಕ ಜಾಲ ತಾಣಗಳು ಮನುಷ್ಯ ಸಂಬಂಧಗಳನ್ನು ಸಡಿಲಗೊಳಿಸುತ್ತ, ಒಂಟಿತನಗಳನ್ನು ಹುಟ್ಟುಹಾಕುತ್ತ ಮನುಷ್ಯರನ್ನು ಭಾವನಾರಹಿತರನ್ನಾಗಿಸುತ್ತಿರುವುದನ್ನು, ಇಡೀ ಮನುಕುಲವೇ ಅನುಭವಿಸುತ್ತಿರುವುದನ್ನು, ಭಾರತೀಯ ಸಂದರ್ಭದಲ್ಲಿ ಇಟ್ಟು ನೋಡಿರುವುದು. ಇದಕ್ಕೆ ಪುರಾಣ, ಇತಿಹಾಸ, ಮತ್ತು ಜ್ವಲಂತ ಸಂಗತಿಗಳು ರೂಪಕವಾಗಿ ಮೈದಾಳಿ ಬಂದಿವೆ.
ಕುಮಾರಿ ಗೌತಮಿ ಕತೆಯಾಧಾರಿತ ಮೈಸೂರಿನ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸಿದ “ಮೈ ಫ್ಯಾಮಿಲಿ” ನಾಟಕದ ಕುರಿತು ಎಚ್.ಆರ್.‌ ರಮೇಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ