Advertisement

Tag: kendasampige

ಮರೆಯಲಾಗದ ರಾಜನೀತಿಜ್ಞ ಬಿ. ಸುಬ್ಬಯ್ಯ ಶೆಟ್ಟಿ: ರಂಜಾನ್ ದರ್ಗಾ ಸರಣಿ

ಬಾಕ್ರಬೈಲು ಸುಬ್ಬಯ್ಯ ಶೆಟ್ಟಿ ಅವರು 1972-1977 ಮತ್ತು 1978-1983 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿದ್ದರು. ದೇವರಾಜ ಅರಸು ಅವರ ಮಂತ್ರಿಮಂಡಲದಲ್ಲಿ ಭೂಸುಧಾರಣಾ ಸಚಿವರಾದ ನಂತರ ವಾರ್ತಾ, ಇಂಧನ ಮತ್ತು ಶಿಕ್ಷಣ ಸಚಿವರಾಗಿ ಸೇವೆಸಲ್ಲಿಸಿದರು. ಶಿಕ್ಷಣದಲ್ಲಿಯೂ ಸುಧಾರಣೆ ತಂದರು. ರಾಜ್ಯದಲ್ಲಿ ಇಷ್ಟೊಂದು ಎಂಜಿನಿಯರಿಂಗ್ ಕಾಲೇಜುಗಳಾಗಲಿಕ್ಕೂ ಅವರೇ ಕಾರಣರು. ಕರ್ನಾಟಕದ ಎಲ್ಲ ಹೈಸ್ಕೂಲ್‌ಗಳಲ್ಲಿ ಮಹಿಳಾ ಕರಾಟೆ ಪಟುಗಳ ಮೂಲಕ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸುವ ಕನಸನ್ನು ಹೊಂದಿದ್ದ ಅವರು ಆ ಕುರಿತು ಯೋಜನೆ ರೂಪಿಸಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಖಂಡಕಾವ್ಯಕ್ಕೊಂದು ಪ್ರವೇಶ: ಯು.ಆರ್.ಅನಂತಮೂರ್ತಿ ಮುನ್ನುಡಿ

ಆತ್ಮ ಸಫಲತೆಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಹೆಣ್ಣು ಪ್ರಣಯಿನಿಯಾಗಿಯೂ, ಹೆಂಡತಿಯಾಗಿಯೂ, ಮಗಳಾಗಿಯೂ, ತಾಯಿಯಾಗಿಯೂ, ‘ಬಜಾರಿ’ಯಾಗಿಯೂ ಅವನಿಗೆ ಒದಗುತ್ತಾಳೆ. ಇದನ್ನು ನಟಿಸಿ ತೋರಲು ತೇಜಶ್ರೀ ಕವನದಲ್ಲಿ ಒಂದು ಅಪರೂಪದ ಕಾವ್ಯ ಪ್ರಯೋಗವಿದೆ. ಇಲ್ಲಿ ಬರುವ ಅವನು ಪುರಾಣದ ಕೃಷ್ಣನೂ ಹೌದು, ನಿಜದ ಅವನೂ ಹೌದು. ಹಾಗೆಯೇ ರಾಧೆ ಪುರಾಣದ ರಾಧೆಯೂ ಹೌದು, ನಿಜದ ಅವಳೂ ಹೌದು. ಈ ಎರಡು ಸತ್ಯಗಳೂ ಒಟ್ಟಾಗಿ ನಮಗೆ ಭಾಸವಾಗುವುದರಿಂದ ಸಾಮಾಜಿಕ ಸಾಂಸಾರಿಕ ನೀತಿ ಅನೀತಿಗಳನ್ನು ಈ ಕವನ ಮೀರುತ್ತದೆ.
ಜ.ನಾ. ತೇಜಶ್ರೀ ಖಂಡಕಾವ್ಯ “ಅವನರಿವಲ್ಲಿ” ಕೃತಿಗೆ ಯು.ಆರ್.‌ ಅನಂತಮೂರ್ತಿ ಮುನ್ನುಡಿ

Read More

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಬದುಕಿಗೆ ಪರಿಧಿಯ ಬರೆವ ಕರ್ಮಫಲವೆಂಬ ಕೈವಾರ: ರಾಮ್ ಪ್ರಕಾಶ್ ರೈ ಕೆ ಸರಣಿ

ಸುಜಿಗೆ ಒಳ್ಳೆಯ ಬದುಕಿತ್ತು. ಮಧುವಿನ ಪತ್ನಿಗೂ. ಆದರೆ, ಅವಳಲ್ಲಿನ ಖಾಲಿತನವನ್ನು ತುಂಬಲು ಆಕೆ ಹೊರಟಳು. ಸುಜಿ ಆ ಅವಕಾಶವನ್ನು ಬಳಸಿ ಆಕೆಯ ನಂಬಿಕೆ, ಆತ್ಮಾಭಿಮಾನದ ಜೊತೆಗೆ ಆಟವಾಡಿಬಿಟ್ಟ. ಇವೆಲ್ಲವೂ ನಡೆದಾಗ ಮಧು ಮೂಕ ಪ್ರೇಕ್ಷನಾಗಿದ್ದ. ಆದರೆ ಪತ್ನಿಯ ಮೇಲಿನ ಆತನ ಅಸ್ಖಲಿತ ಪ್ರೇಮ, ಗೌರವಕ್ಕೆ ಧಕ್ಕೆಯಾದಾಗ ಆತ ಹಿಂಸೆಯ ದಾರಿಯ ಹಿಡಿದ. ಸರಿ ತಪ್ಪುಗಳಾಚೆ ಇಂತಹ ಅದೆಷ್ಟೋ ಕ್ರಿಮಿಗಳಿಗೆ ‘ಸಾವು ಮಲಗಿರುತ್ತೆ ನಿನ್ನ ಪಕ್ಕದಲ್ಲೇ, ಗೊತ್ತಾಗೋದು ಎದ್ದಾಗಲೇ’ ಎಂದು ಪಾಠವಾಯಿತು ಆತನ ನಡೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಇಲಾ ವಿಳಾ ಪೂಂಚಿರಾ’ ಸಿನಿಮಾದ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ