Advertisement

Tag: kendasampige

ಆ ಹೊಳೆವ ಕಂಗಳು…: ಸುಧಾ ಆಡುಕಳ ಅಂಕಣ

ಅದೇನು ಜಾದೂ ನಡೆಯಿತೋ ತಿಳಿಯದು, ಅಲ್ಲಿಂದ ತಿರುಗಿ ಬಂದ ಮಂಜಿಯ ಅಪ್ಪ ಗಡುಸಾಗಿ ಮಾತನಾಡತೊಡಗಿದ, “ಮಗಳು ನಂದು, ಏನು ಮಾಡಬೇಕಂತ ನಂಗೊತ್ತದೆ. ನೀವು ಇನ್ನೂ ಮೀಸೆ ಸರಿಯಾಗಿ ಬರದಿರೋರೆಲ್ಲ ಕಾನೂನು ಮಾತಾಡೂದು ಬ್ಯಾಡ. ಅವಳ ದೇಹ ಬಿಡುಗಡೆಗೆ ಕಾಯ್ತದೆ. ನಮ್ಮ ಕುಟುಂಬದ ದೆಯ್ಯಗಳು ಅವಳನ್ನು ಕಳಿಸಿಕೊಡು ಅಂತ ಕೂಗ್ತಿವೆ. ನೀವು ಪೋಲೀಸು, ಕಾನೂನು ಅಂತ ವರಾತ ಸುರುಮಾಡಿ ಅವಳ ದೇಹ ಕೊಳೆಯೂ ಹಾಗೆ ಮಾಡಬೇಡಿ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಒಡೆದದ್ದನ್ನು ಇಡಿಯಾಗಿಸಿಕೋ ಮೆಕ್ಸಿಕೋ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ವಿಶ್ವದಲ್ಲಿ ಅತೀ ಹೆಚ್ಚು ಜ್ವಾಲಾಮುಖಿಗಳಿಗೆ ನೆಲೆಯಾಗಿರುವ ದೇಶ ಮೆಕ್ಸಿಕೋ. ರಾಷ್ಟ್ರದ ಹೆಚ್ಚಿನ ಪರ್ವತ ಪ್ರದೇಶಗಳಲ್ಲಿ ಜ್ವಾಲಾಮುಖಿಗಳು ಕಂಡುಬರುತ್ತವೆ. ಆಶ್ಚರ್ಯದ ಸಂಗತಿಯೆಂದರೆ, ವಿಶ್ವದ ಅತ್ಯಂತ ಚಿಕ್ಕ ಜ್ವಾಲಾಮುಖಿಯೂ ಇರುವುದು ಮೆಕ್ಸಿಕೋದಲ್ಲಿ. ಪ್ಯೂಬ್ಲಾ ಸಮೀಪದಲ್ಲಿರುವ ಕ್ಯುಕ್ಸ್ಕೊಮೇಟ್ ಜ್ವಾಲಾಮುಖಿಯ ಎತ್ತರ ಕೇವಲ 43 ಅಡಿ. ಇದು ಈಗ ನಿಷ್ಕ್ರಿಯವಾಗಿದೆ. 1910ರಲ್ಲಿ ಮೆಕ್ಸಿಕೋದಲ್ಲಿ ಕ್ರಾಂತಿ ನಡೆದಿತ್ತು. ಇದರ ಪರಿಣಾಮವನ್ನು ಈಗಿನ ಕಾಲಘಟ್ಟದಲ್ಲಿಯೂ ಕಾಣುವುದಕ್ಕೆ ಸಾಧ್ಯವಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಮಹಾರಾಜಾ ಕಾಲೇಜಿನ ಮಧುರ ನೆನಪು ……: ಮೂರ್ತಿ ದೇರಾಜೆ ಬರಹ

ಮೈಸೂರಿಗೆ ಬಂದು ಮಹಾರಾಜಾ ಕಾಲೇಜು ನೋಡಿ ನಾವು ಮಾತ್ರ ಅಲ್ಲ…. ನನ್ನ ಅಪ್ಪನೂ ಕಂಗಾಲು. ಕಾಲೇಜು ಕಛೇರಿಯಲ್ಲಿ, “ಮಾರ್ಕ್ಸ್ ಎಷ್ಟಿದೆ…? ಬೇಕಾದ ಸಬ್ಜೆಕ್ಟ್ ಅಷ್ಟು ಸುಲಭದಲ್ಲೆಲ್ಲಾ ಸಿಗಲ್ಲ….” ಅಂತೆಲ್ಲ ಸ್ವಲ್ಪ ಹೆಚ್ಚೇ ಹೆದರಿಸಿದರೂ…… ಸೀಟಂತೂ ಸಿಕ್ಕಿತು. ನಮ್ಮ ಪೂರ್ವಜನ್ಮದ ಪುಣ್ಯ ಅಂತ ಭಾವಿಸಿದ್ದೆವು…… ಆಗ ನಮಗೇನು ಗೊತ್ತು….!! ವರ್ಷ ಕಳೆಯುವಾಗ ಗೊತ್ತಾಯ್ತು, ಇಲ್ಲಿ ಮಾರ್ಕ್ಸ್ ವಿಷಯ ಬಿಡಿ…. ! ೪-೫ ಭಾರಿ ಫೈಲ್ ಆದವರಿಗೂ ಎಡ್ಮಿಶನ್ ಕಷ್ಟವಿಲ್ಲ ಅಂತ.
ಮೈಸೂರಿನ ಮಹಾರಾಜಾ ಕಾಲೇಜು ದಿನಗಳ ಕುರಿತು ಮೂರ್ತಿ ದೇರಾಜೆ ಬರಹ ನಿಮ್ಮ ಓದಿಗೆ

Read More

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

Read More

ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ