Advertisement

Tag: kendasampige

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಹೋಳಿಗೆ ಕೊಡಿಸಿದ ಯುಗಾದಿ ಚಂದಿರ..: ಪೂರ್ಣೇಶ್‌ ಮತ್ತಾವರ ಸರಣಿ

ಹಬ್ಬದ ಹಿಂದಿನ ಸಂಜೆ “ನಾಳೆ ರಜಾ, ಕೋಳಿ ಮಜಾ..” ಎನ್ನುತ್ತಾ ರಜೆಯ ಸಡಗರವನ್ನು ಅನುಭವಿಸಿ, ಹಗಲಿಡೀ‌‌ ಆಟವಾಡಿ, ಮಧ್ಯಾಹ್ನ ಸಿಹಿ‌ ತಿಂದು ಖುಷಿಪಟ್ಟವರು ಸಂಜೆಯಾಗುತ್ತಲೇ ನಮಗೆ ತಿಳಿಯದಲೇ ಬೇಸರಿಸಿಕೊಂಡು ಬಿಡುತ್ತಿದ್ದೆವು. “ಹೋಂ ಸಿಕ್ ನೆಸ್” ಎಂಬುದು ನಮಗರಿವಿಲ್ಲದಲೇ ಹಬ್ಬದ ದಿನಗಳಲ್ಲೇ ಹೆಚ್ಚಾಗಿ ನಮ್ಮನ್ನು ಆವರಿಸಿಕೊಂಡು ಬಿಡುತ್ತಿತ್ತು. ಕೊಟ್ಟ ಹೋಂ ವರ್ಕ್ “ನಾಳೆ ಮಾಡಿದರಾಯ್ತು” ಎಂದು ಮುಂದೂಡಿ ಈಗ ಮಾಡಬೇಕಿರುವುದೂ ನಮ್ಮ ದುಃಖವನ್ನು ಮತ್ತಷ್ಟು ಹೆಚ್ಚಿಸಿ ಬಿಡುತ್ತಿತ್ತು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹನ್ನೆರಡನೆಯ ಬರಹ

Read More

ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

“ಬಂಧಿಸಲಾಗದು ಪ್ರೀತಿಯ
ರೂಪಕಗಳ ಬಂಧೀಖಾನೆಯಲ್ಲಿ,
ಹಾರುತ್ತದೆ ಪ್ರೀತಿಯ ಹಕ್ಕಿ
ಬಿಗುಮಾನದಲ್ಲಿ,
ಕಟ್ಟುತ್ತದೆ ಗೂಡು
ನೊಂದ ಹೃದಯದಲ್ಲಿ” -ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಎಲೆ ಮರೆಯ ಮಧುರ ಫಲ: ರಂಜಾನ್ ದರ್ಗಾ ಸರಣಿ

ಮೃದುಭಾಷಿ ಮಹಾದೇವಪ್ಪನವರ ವ್ಯಕ್ತಿತ್ವದ ಒಂದು ಮಹತ್ವದ ಅಂಶ ಎಂದರೆ, ಅವರು ಯಾವ ಕಾಲಕ್ಕೂ ಹೊಸದನ್ನು ಬಯಸುವವರು. ತಮ್ಮದೇ ಆದ ವಿಚಾರಕ್ಕೆ ಅಂಟಿಕೊಂಡವರಲ್ಲ. ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ತಮಗಿಂತಲೂ ಬೇರೆಯವರು ಚೆನ್ನಾಗಿ ತಿಳಿಸಿದರೆ ಅದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುವಂಥ ಸುಸಂಸ್ಕೃತರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 97ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ