Advertisement

Tag: kendasampige

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ನಾನೇನೋ ಒಂದಷ್ಟು ಹನಿ ಬಿತ್ತು ಅಂದೆ ಸರಿ. ಆದರೆ ಸಣ್ಣ ಮಳೆ ಬಿದ್ದದ್ದು ಬ್ರಿಸ್ಬೇನ್, ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ. ಇದನ್ನು ಅಪಹಾಸ್ಯ ಮಾಡುವಂತೆ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿರುವ (ಬ್ರಿಸ್ಬೇನ್ ನಗರದಿಂದ ೧,೪೦೦ ಕಿಮೀ ದೂರ) Townsville ನಗರ ಮತ್ತು ಅದರ ಆಸುಪಾಸಿನಲ್ಲಿ ಭಾರಿ ಮಳೆ ಬಿದ್ದು, ಪ್ರವಾಹ ಸ್ಥಿತಿ ಉದ್ಭವಿಸಿ ಈಗ ಅದನ್ನು ಕ್ವೀನ್ಸ್‌ಲ್ಯಾಂಡ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿವೆ. ಸಾವಿರಾರು ಜನರು ಪ್ರವಾಹಪೀಡಿತ ಸಂತ್ರಸ್ತರು ಎಂದು ನೋಂದಾಯಿಸಿಕೊಂಡಿದ್ದಾರೆ. ಅನೇಕ ಕಡೆ ರಸ್ತೆಗಳು ಮುಚ್ಚಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ನಮ್ಮ ಪರಿಸೆಗಳು: ಸುಮಾ ಸತೀಶ್ ಸರಣಿ

ಬಂಗಾರುದ್ ಕಾಟುಮಲಿಂಗೇಶ್ವರುನ್ನ ವರ್ಸುಕ್ಕೆ ಎಲ್ಡು ದಪ ಮಾತ್ರ ತೆಗ್ದು ಊರಾಚೇಗ್ಳ ಗುಡೀಗೆ ತಕಾ ಬರ್ತಾರೆ. ಅದ್ಕೆ ಮುಂದ್ಲೇ‌ ಆ ಲಿಂಗುದ್ ತೂಕ ಬರ್ದು ಮಡ್ಗಿ, ವಾಪ್ಸು ಇಕ್ಕಾ ಮದ್ಲು ಇನ್ನೊಂದು ದಪ ತೂಕ ನೋಡಿ ಮಡುಗ್ತಾರೆ. ಸಿವರಾತ್ರಿ ಪರಿಸೇ ಟೇಮ್ ನಾಗೆ ಒಂದು ಕಿತ, ಕಾರ್ತೀಕದಾಗೆ ಕೊನೇ ಸೋಮವಾರ ಇನ್ನೊಂದು ಕಿತ ದ್ಯಾವ್ರಿಗೆ ಹೊರುಕ್ ಬರಾಕೆ ಮೋಕ್ಷ ಸಿಕ್ತೈತೆ. ಜನುರ್ಗೂ ಕಣ್ ತುಂಬ್ಕಣಾಕೆ ಆಗ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಗುರುತರ ಗುರಿಯೆಡೆಗೆ ಓಡಲಿ ಜಮೈಕಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಮೈಕಾದ ಜನರು ಕಲೆಗಳ ಬಗೆಗೆ ಅತೀವ ಆಸಕ್ತಿಯನ್ನು ಹೊಂದಿದ್ದಾರೆ. ದೃಶ್ಯ ಕಲೆಗಳು ಮತ್ತು ಪ್ರದರ್ಶನ ಕಲೆಗಳು ಜಮೈಕಾದ ಜನರ ಬದುಕಿನ ಅವಿಭಾಜ್ಯ ಅಂಗಗಳು. ಕಲ್ಪನೆ, ಉತ್ಸುಕತೆ ಮತ್ತು ಸೃಜನಶೀಲತೆಗಳ ಮೂಲಕ ವಿವಿಧ ಕಲೆಗಳನ್ನು ರೂಪಿಸಿಕೊಂಡಿದೆ ಜಮೈಕಾ. ಕಲೆಗಳು ಅಲ್ಲಿಯ ಜನರ ಬದುಕಿನ ಸ್ಫೂರ್ತಿಯ ಸೆಲೆಯಾಗಿದೆ. ಬ್ಯಾರಿಂಗ್ಟನ್ ವ್ಯಾಟ್ಸನ್, ಆಲ್ಬರ್ಟ್ ಹುಯಿ ಇವರು ಜಮೈಕಾದ ಚಿತ್ರಕಲಾವಿದರು. ಎಡ್ನಾ ಮ್ಯಾನ್ಲಿ ಎನ್ನುವವರು ಪ್ರಸಿದ್ಧ ಶಿಲ್ಪಿಯಾಗಿದ್ದಾರೆ. ಇವರು ಜಮೈಕಾದಲ್ಲಿ ಮಾತ್ರವಲ್ಲದೆ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ