Advertisement

Tag: kendasampige

ನೇಪಾಳವೆಂಬ ಮತ್ತೊಂದು ಭಾರತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನೇಪಾಳದ ಜನರು ಶ್ರಮಜೀವಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಪರ್ವತ ಪ್ರದೇಶಗಳನ್ನು ಅವರು ಏರುವ ಮತ್ತು ಇಳಿಯುವ ರೀತಿ ಎಂಥವರಲ್ಲೂ ಅಚ್ಚರಿ ಮೂಡಿಸುತ್ತದೆ. ಮೊದಮೊದಲು ಪರ್ವತಾರೋಹಣಕ್ಕೆ ಹೊರಟವರಿಗೆ ಖಾಲಿ ಕೈಯ್ಯಲ್ಲಿ ಪರ್ವತದ ತುದಿ ತಲುಪುವುದೇ ಅಬ್ಬಬ್ಬಾ ಎನಿಸಿಬಿಡುತ್ತದೆ. ಆದರೆ ನೇಪಾಳದವರು ತಮ್ಮ ಬೆನ್ನ ಮೇಲೆ ಭಾರವಾದ ಚೀಲಗಳನ್ನು ಇಲ್ಲವೇ ವಸ್ತುಗಳನ್ನು ಹೊತ್ತುಕೊಂಡು ಪರ್ವತವನ್ನು ಏರುತ್ತಾರೆ; ಇಳಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ನೇಪಾಳದ ಕುರಿತ ಬರಹ ನಿಮ್ಮ ಓದಿಗೆ

Read More

ಊರುಗಳ ಹೆಸರಿನ ಸುತ್ತ: ಸುಮಾವೀಣಾ ಸರಣಿ

ವಾರದ ಸಂತೆ ಆಗುವ ಅದೇ ದಿನದ ಹೆಸರುಗಳು ಊರುಗಳಾಗಿವೆ. ಸೋಮವಾರಪೇಟೆ, ಶನಿವಾರಸಂತೆ, ಶುಕ್ರವಾರಸಂತೆ ಇತ್ಯಾದಿಗಳು. ‘ಅಂಗ’ಡಿ ಎಂಬ ಹೆಸರನ್ನು ಕಡೆಯಲ್ಲಿ ಹೊಂದಿರುವ ಬೆಳ್ತಂಗಡಿ, ಉಪ್ಪಿನಂಗಡಿ, ಹಳೆಯಂಗಡಿ, ಹಟ್ಟಿಯಂಗಡಿ ಎಂಬ ಊರುಗಳಿವೆ. ‘ಅಂಗಡಿ’ ಎನ್ನುವ ಹೆಸರಿಗೂ ಹೊಯ್ಸಳ ಸಾಮ್ರಾಜ್ಯಕ್ಕೂ ಅವಿನಾಭಾವ ನಂಟು. ಇದಕ್ಕೂ ಅನನ್ಯ ಹೆಸರಿನ ಊರುಗಳಿವೆ. ರಸ್ತೆಯಲ್ಲಿರುವ ಪಾಲವನ್ನು ಸೇರಿಸಿಕೊಂಡು ಜೋಡುಪಾಲವೆಂದೂ ಕರೆಯುತ್ತಾರೆ. ‘ಪಾಲ’ ಅಂದರೆ ಸಂಕ /ಕಾಲುಸಂಕ ಅರ್ಥಾತ್ ಚಿಕ್ಕ ಸೇತುವೆ ಎಂದರ್ಥ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಆರನೆಯ ಬರಹ

Read More

ಕೂರಾಪುರಾಣ ೯: ಕಾರು ಪ್ರಯಾಣವೆಂದರೆ ಮೇಲೇಳುತ್ತವೆ ಕಿವಿಗಳು..

ಕೂರಾ ಇಲ್ಲದಿದ್ದಾಗ ತರಕಾರಿ, ಕಿರಾಣಿ, ಮತ್ತಿತರೆ ಸಾಮಾನುಗಳನ್ನು ಹಿಂದಿನ ಸೀಟಿನಲ್ಲಿ ತುಂಬುತ್ತಿದ್ದ ನಾವು ಈಗ ಅವೆಲ್ಲವನ್ನು ಡಿಕ್ಕಿಯಲ್ಲಿ ಹೇರಿ ಅಲ್ಲಿ ಜಾಗ ಸಾಲದಾದರೆ ನಮ್ಮ ಕಾಲ ಬಳಿಯೇ ಇಟ್ಟುಕೊಂಡು ಇಕ್ಕಟ್ಟು ಮಾಡಿಕೊಳ್ಳುತ್ತೆವೆಯೇ ಹೊರತು ಹಿಂದೆ ಪವಡಿಸುವ ನಮ್ಮ ಮಹಾರಾಜರಿಗೆ ಒಂದಿನಿತು ಅಸೌಕರ್ಯ ಮಾಡುವುದಿಲ್ಲ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಒಂಭತ್ತನೆಯ ಕಂತು

Read More

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಎರಡು ತಪ್ಪೊಪ್ಪಿಗೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

“ನೋಡು, ಡ್ಯಾಡಿ, ಬದಲಾವಣೆ ಅಂದರೆ, ಪ್ರಧಾನ ಮಂತ್ರಿಗಳ, ಸರ್ಕಾರಗಳ, ರಾಜಕೀಯ ಪಕ್ಷಗಳ ಬದಲಾವಣೆ ಅಲ್ಲ. ನಮ್ಮ, ನಮ್ಮ ಮನೆ, ಮನಸ್ಸುಗಳಲ್ಲಿ ಆಗುತ್ತಿರುವ ಬದಲಾವಣೆಗಳು. ಅದಕ್ಕೆ ನಮ್ಮ ಪ್ರತಿರೋಧ, ಹೊಂದಾಣಿಕೆ ಇವುಗಳನ್ನು ಅರ್ಥ ಮಾಡಿಕೊಳ್ಳುವುದು ಕೂಡ ಮುಖ್ಯ. ಮಕ್ಕಳ ಲಾಲನೆ, ಪಾಲನೆ ಹೆಂಗಸರ ಕರ್ತವ್ಯ ಮಾತ್ರ ಎಂಬ ಧೋರಣೆಯೇ ಬದಲಾಗಬೇಕು, ಬದಲಾಗುತ್ತಿದೆ.”
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ