Advertisement

Tag: kendasampige

ವ್ಯಕ್ತಿತ್ವಗಳ ಮುಖವಾಡ ಕಳಚುವ ಅವಳ ಕಣ್ಣಿನ ಕಥೆ: ರಾಮ್‌ಪ್ರಕಾಶ್‌ ರೈ ಸರಣಿ

ಇಲ್ಲಿ ಕ್ರೈಮ್ ಇದ್ದರೂ, ಅನ್ಯಾಯವಿದ್ದರೂ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಯುಕ್ತಿಯೊಂದರ ಶಕ್ತಿಯಿಂದ ಆರಕ್ಷಕರು, ಕ್ರಮಬದ್ಧ ತನಿಖೆ ಎಲ್ಲವ ಮೀರಿಸಿ ಬೇಧಿಸುವ ಹಾದಿಯೇ ಬಲು ರೋಮಾಂಚಕ. ಕಥನ ಕಟ್ಟುವಿಕೆಯೂ ಈ ದಾರಿಗೆ ಹಾದಿಗಲ್ಲಿನಂತೆ ಪೂರಕವಾಗಿಯೇ ಇದೆ. ಅದು ಮಾತ್ರವಲ್ಲದೆ, ಪ್ರಿಯಾಳನ್ನು ಸೂಪರ್ ಹ್ಯೂಮನ್ ಎಂದೋ, ಅತಿಮಾನುಷ ಶಕ್ತಿ ಉಳ್ಳವಳು ಎಂಬಂತೆ ಬಿಂಬಿಸದೆ ಸಾಮಾನ್ಯ ಮಹಿಳೆಯೊಬ್ಬಳಂತೆ ತೋರಿಸಿದ್ದು, ಕಥನಕ್ಕೆ ಪ್ರಾಮಾಣಿಕ ಸ್ಪರ್ಶವನ್ನು ನೀಡಿದೆ ಮತ್ತು ಅದು ತೀರಾ ನೈಜವಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನೆದರ್‌ಲ್ಯಾಂಡ್ಸ್ ರಾಜಕಾರಣ- ಒಂದು ಅಪೂರ್ಣ ಅನುಬಂಧ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾಗರಿಕರನ್ನು ಸಾಕಬೇಕು, ಪೋಷಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ, ಅವರನ್ನು ಸಬಲಗೊಳಿಸಬೇಕು, ಅವರು ಸರ್ಕಾರ, ರಾಜ್ಯದ ಮೇಲೆ ಅವಲಂಬಿತರಾಗದ ಹಾಗೆ ನೋಡಿಕೊಳ್ಳಬೇಕು, ಹಾಗಾದಾಗ ಮುಂದೆ ಅವರೇ ದೇಶದ ಆರ್ಥಿಕ-ಸಾಮಾಜಿಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಾರೆ ಎಂಬುದು ಈ ಸಮಾಜದ ನಿಲುವು. ಉನ್ನತ ಮಟ್ಟದ ರಾಷ್ಟ್ರೀಯ ಆದಾಯ, ತಲಾವಾರ್ಷಿಕ ಆದಾಯದ ಹಂತವನ್ನು ತಲುಪಿದ ದೇಶದಲ್ಲಿ ಮಾತ್ರ ಇದು ಸಾಧ್ಯ. ಶ್ರೀಮಂತರು, ಚಕ್ರವರ್ತಿಗಳು ಇಲ್ಲವೆಂದಿಲ್ಲ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಕೊನೆಯ ಬರಹ

Read More

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಬನ್ನಿ.. ಸ್ವಯಂಪ್ರಭೆಯರನ್ನು ಸಂಭ್ರಮಾಚರಿಸೋಣ: ಎಲ್.ಜಿ.ಮೀರಾ ಅಂಕಣ

ಸಾಂಪ್ರದಾಯಿಕ ಸಮಾಜದ ಊಹೆಗೆ ನಿಲುಕದ ಇನ್ನೊಂದು ಜಿಗಿತವನ್ನು ನಮ್ಮ ಹೆಣ್ಣುಮಕ್ಕಳು ಈಗ ಮಾಡುತ್ತಿದ್ದಾರೆ. ಅದೇನೆಂದರೆ ಲಿಂಗ ಎಂಬುದು ಕೇವಲ ಗಂಡು-ಹೆಣ್ಣು ಎಂದು ಎರಡು ತುದಿಗಳಲ್ಲ, ಗಂಡಿನೊಳಗೆ ಹೆಣ್ಣು ಮತ್ತು ಹೆಣ್ಣಿನೊಳಗೆ ಗಂಡು ಬೇರೆ ಬೇರೆ ಪ್ರಮಾಣಗಳಲ್ಲಿ ಇರಬಹುದು, ಹೀಗಾಗಿ ಲಿಂಗ ಎಂಬುದು ಶ್ರೇಣಿ ಎಂಬ ಹೊಸ ತಿಳುವಳಿಕೆಯನ್ನು ತಮ್ಮ ನಡೆನುಡಿ, ಇರಿಸರಿಕೆ, ಹೋರಾಟಗಳಿಂದ ತಲುಪಿಸಲು ಪ್ರಯತ್ನಿಸುತ್ತಿದ್ದಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ