Advertisement

Tag: kendasampige

ಮಹಾರಾಜಾ ಕಾಲೇಜಿನ ಮಧುರ ನೆನಪು ……: ಮೂರ್ತಿ ದೇರಾಜೆ ಬರಹ

ಮೈಸೂರಿಗೆ ಬಂದು ಮಹಾರಾಜಾ ಕಾಲೇಜು ನೋಡಿ ನಾವು ಮಾತ್ರ ಅಲ್ಲ…. ನನ್ನ ಅಪ್ಪನೂ ಕಂಗಾಲು. ಕಾಲೇಜು ಕಛೇರಿಯಲ್ಲಿ, “ಮಾರ್ಕ್ಸ್ ಎಷ್ಟಿದೆ…? ಬೇಕಾದ ಸಬ್ಜೆಕ್ಟ್ ಅಷ್ಟು ಸುಲಭದಲ್ಲೆಲ್ಲಾ ಸಿಗಲ್ಲ….” ಅಂತೆಲ್ಲ ಸ್ವಲ್ಪ ಹೆಚ್ಚೇ ಹೆದರಿಸಿದರೂ…… ಸೀಟಂತೂ ಸಿಕ್ಕಿತು. ನಮ್ಮ ಪೂರ್ವಜನ್ಮದ ಪುಣ್ಯ ಅಂತ ಭಾವಿಸಿದ್ದೆವು…… ಆಗ ನಮಗೇನು ಗೊತ್ತು….!! ವರ್ಷ ಕಳೆಯುವಾಗ ಗೊತ್ತಾಯ್ತು, ಇಲ್ಲಿ ಮಾರ್ಕ್ಸ್ ವಿಷಯ ಬಿಡಿ…. ! ೪-೫ ಭಾರಿ ಫೈಲ್ ಆದವರಿಗೂ ಎಡ್ಮಿಶನ್ ಕಷ್ಟವಿಲ್ಲ ಅಂತ.
ಮೈಸೂರಿನ ಮಹಾರಾಜಾ ಕಾಲೇಜು ದಿನಗಳ ಕುರಿತು ಮೂರ್ತಿ ದೇರಾಜೆ ಬರಹ ನಿಮ್ಮ ಓದಿಗೆ

Read More

ಕಾಮ್ರೇಡ್ ಹೆಚ್.ಕೆ. ರಾಮಚಂದ್ರಪ್ಪ ಸ್ಮರಣೆ: ರಂಜಾನ್ ದರ್ಗಾ ಸರಣಿ

ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಗಳಾಗಿವೆ. ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಸುಲಿಗೆ ಯೋಜನೆ ಮೂಲಕ ಇಡೀ ಜಗತ್ತಿನ ಕಾರ್ಮಿಕರ ಆರ್ಥಿಕ ಸ್ಥಿತಿ ಕುಸಿಯಿತು. ಈ ಎಲ್ಲ ಕಾರಣಗಳಿಂದಾಗಿ ದಾವಣಗೆರೆಯ ಸಂಗಾತಿಗಳ ಸಾಧನೆ ಗತವೈಭವದಂತೆ ಕಾಣತೊಡಗಿತು. ಅಂಥ ಸಂದರ್ಭದಲ್ಲಿ ಕೂಡ ಹೆಚ್.ಕೆ. ರಾಮಚಂದ್ರಪ್ಪ ಅವರು ಎದೆಗುಂದಲಿಲ್ಲ. ಬದುಕಿನ ಕೊನೆಯ ಉಸಿರು ಇರುವವರೆಗೂ ಅವರು ನಗುಮುಖದಿಂದ ಕಾರ್ಮಿಕರ ಒಳಿತಿಗಾಗಿ ದುಡಿದದ್ದು ಇಂದು ಇತಿಹಾಸವಾಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 92ನೇ ಕಂತು ನಿಮ್ಮ ಓದಿಗೆ

Read More

ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗೆ ಬಂದಿದ್ದ ಮಹಿಳೆಯೊಬ್ಬರು ಹೋಟಲ್‌ನಲ್ಲಿ ಊಟ ಮಾಡುತ್ತಿದ್ದಾಗ ನಮ್ಮ ದೇಶದವರೇ ಆದ ಹೋಟಲ್ ಮಾಲಿಕನಿಗೆ `ಸಿಂಗಾಪುರದಲ್ಲಿ ಕ್ರೈಮ್ ರೇಟ್ ಏನಿದೆ?’ ಎಂದು ಕೇಳಿಬಿಟ್ಟರು. ಆತ, `ಮೇಡಮ್ ಸಿಂಗಾಪುರದಲ್ಲಿ ಕ್ರೈಮ್ ರೇಟ್ ಝೀರೋ. ಅದೆಲ್ಲ ಭಾರತದಲ್ಲಿ’ ಎಂದು ಕೋಪ ಮಾಡಿಕೊಂಡು ಹೇಳಿದರು.
ಡಾ. ವೆಂಕಟಸ್ವಾಮಿ ಪ್ರವಾಸ ಕಥನದಲ್ಲಿ ಸಿಂಗಪೂರ್‌ ಕುರಿತ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ