Advertisement

Tag: kendasampige

ಮಗನಂತೆ ಮಗಳನ್ನೂ ಕಾಣೋಣ: ಅನುಸೂಯ ಯತೀಶ್ ಸರಣಿ

ಆ ಹುಡುಗನನ್ನ ಎಬ್ಬಿಸಿ ಯಾಕೋ ನಿನ್ನ ತಂಗಿ ಶಾಲೆಗೆ ಬಂದಿಲ್ಲ? ಎಂದಾಗ ಇಂದು ಮನೆಯಲ್ಲಿ ಬಟ್ಟೆ ಒಗೆಯುವ ಕೆಲಸ ಇತ್ತು. ಅದಕ್ಕೆ ಅಮ್ಮ ರಜೆ ಹಾಕಿಸಿದ್ದಾರೆ ಮಿಸ್ ಎಂದನು. ನೀನು ಮಾತ್ರ ಶಾಲೆಗೆ ಬಂದಿದ್ದೀಯಾ? ನೀನು ಬಟ್ಟೆ ಒಗೆಯಲು ಹೋಗಲಿಲ್ಲವೇನು? ಎಂದು ಕೇಳಿದ್ದಕ್ಕೆ “ನಾನು ಹುಡುಗ ಮಿಸ್, ಬಟ್ಟೆ ತೊಳೆಯಲು ಹೋದರೆ ಯಾರಾದರೂ ನಗುತ್ತಾರೆ ಅಷ್ಟೇ” ಎಂದವನು, ಈ ಮಿಸ್‌ಗೆ ಅಷ್ಟು ಗೊತ್ತಿಲ್ಲವಾ? ಎಂಬ ಭಾವದಲ್ಲಿ ಗೆಳೆಯರೊಂದಿಗೆ ಮುಸಿಮುಸಿ ನಗಲಾರಂಭಿಸಿದ್ದ. ನನ್ನ ಮನಸ್ಸು ಈ ಲಿಂಗ ತಾರತಮ್ಯದ ಭಾವವನ್ನು ಕಂಡು ಖೇದಗೊಂಡಿತು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗ

Read More

ಅಮಾನುಷ ಮನಸ್ಥಿತಿಗಳ ಮಧ್ಯೆ ಮನುಷ್ಯತ್ವದ ತಲಾಶು: ರಾಮ್ ಪ್ರಕಾಶ್ ರೈ ಕೆ. ಸರಣಿ

ನಾಪತ್ತೆಯಾಗಿದ್ದಾರೆ ಎಂಬ ನೋಟಿಸುಗಳು ಇನ್ನೂ ವಿಲೇವಾರಿಯಾಗದೆ ಕಚೇರಿ ಫಲಕದಲ್ಲಿ ಕುಳಿತುಕೊಂಡಿರುವುದೇ ಆ ಮನುಷ್ಯನ ಸ್ವಭಾವಕ್ಕೆ ಹಿಡಿದ ಕನ್ನಡಿ. ಅವನ ಸರಹದ್ದಿನಲ್ಲಿ ಸ್ಲಮ್ಮಿನ ಭಾರವಾದ ಉಸಿರುಗಳೇ ಹೆಚ್ಚಿದ್ದರಿಂದ, ಆ ಜೀವಗಳಿಗೆ ಅಲ್ಲಿ ಬೆಲೆ ಇರುತ್ತಿರಲಿಲ್ಲ. ಮಾನವೀಯತೆಯ ಬಗ್ಗೆ ಪುಟಗಟ್ಟಲೆ ಮಾತುಗಳು ಕೇಳಿಬಂದರೂ ನಮ್ಮ ಸುತ್ತಮುತ್ತಲೇ ಇರುವ ಖಾಲಿ ಕಿಸೆಯ ಜನರ ಜೀವ-ಜೀವನ ಸದಾ ಅನಾಥವಲ್ಲವೇ
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಹಿಂದಿಯ ‘ಸೆಕ್ಟರ್ -36’ ಸಿನಿಮಾದ ವಿಶ್ಲೇಷಣೆ

Read More

ಸಹಪಾಠಿಗಳ ಸಾಧನೆ ಹಾಗೂ ಕೊಂಡಜ್ಜಿ ಕ್ಯಾಂಪ್: ಬಸವನಗೌಡ ಹೆಬ್ಬಳಗೆರೆ ಸರಣಿ

ಈ ಕ್ಯಾಂಪಿನಿಂದ ಬಂದು ವಾಪಸ್ಸು ಹೋದಾಗಲೇ ನನಗೆ ತಿಳಿದದ್ದು ಈ ಸಮಯದಲ್ಲಿ ಹಲವಾರು ಪಾಠಗಳನ್ನು ನಮ್ಮ ಮೇಷ್ಟ್ರು ಮುಗಿಸಿದ್ದಾರೆ ಎಂಬುದು. 8 ರಲ್ಲಿ ಮೂರನೇ ರ್ಯಾಂಕು, 9 ರಲ್ಲಿ ಎರಡನೇ ರ್ಯಾಂಕು ಬಂದಿದ್ದವನು 10 ನೇ ತರಗತಿಯಲ್ಲಿ ಮೊದಲ ರ್ಯಾಂಕನ್ನು ಗಳಿಸುತ್ತಾನೆ ಎಂಬ ಹಲವರ ನಿರೀಕ್ಷೆ ಸುಳ್ಳಾಗಲು ಇದೂ ಒಂದು ಕಾರಣವಾಗಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಪಾಠದ ವಿಷಯದಲ್ಲಿ ನನಗೆ ರೀಟೇಕ್ ಆಗಲು ಸಾಧ್ಯವಾಗಲೇ ಇಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಕೆ. ಆರ್. ಸಂಧ್ಯಾರೆಡ್ಡಿ ಕತೆ

ಇಷ್ಟು ಸುಖ ಕೊಡುವ ಸಂಬಂಧ ನನ್ನ ಪಾಲಿಗೆ ಎಂದೆಂದಿಗೂ ಇಲ್ಲವಾಗುವುದು ಎಂಬ ಅರಿವಿನಿಂದ ನಾನು ತೀರಾ ವಿಹ್ವಲಳಾಗುತ್ತಿದ್ದೆ. ಆದರೆ ಅವನು? ಅವನ ಪಾಲಿಗೆ ಇದೇ ಕೊನೆಯಲ್ಲವಲ್ಲ? ಇಷ್ಟಾಗಿ ನನ್ನ ವೈಯಕ್ತಿಕ ನೋವುಗಳನ್ನು ಅವನೊಂದಿಗೆ ಹೇಳಿಕೊಳ್ಳುವುದಾಗಲೀ, ನನ್ನನ್ನೇ ಮದುವೆಯಾಗು ಎಂದು ಅತ್ತು ಕರೆಯುವುದಾಗಲೀ ನನಗೆ ಸಾಧ್ಯವಿರಲಿಲ್ಲ. ನಮ್ಮ ಸಂಬಂಧ ಎಲ್ಲ ಸಾಮಾನ್ಯ ಸಂಬಂಧಗಳಂತಾಗಿ ಬಿಡುವುದೂ ನನಗೆ ಬೇಕಾಗಿರಲಿಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಕೆ. ಆರ್. ಸಂಧ್ಯಾರೆಡ್ಡಿ ಕತೆ “ಹೀಗೇ ಒಂದು ಪ್ರೇಮದ ಕಥೆ”

Read More

ಕೂರಾಪುರಾಣ ೬: ಪರಚುವ ಉಗುರುಗಳು ಮತ್ತು ಮೊಂಡು ನಾಯಿಗಳು

ನಾಯಿಗಳ ಸಲೂನಿನಲ್ಲಿ ಉಗುರುಗಳನ್ನು ಕತ್ತರಿಸುತ್ತಾರೆಂದು ಗೊತ್ತಾಗಿ ಅಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಅವನ ಯಾವ ತಂತ್ರಗಳು ನಡೆಯದೇ, ಆಕೆಗಿರುವ ಅನುಭವದಿಂದ ಉಗುರುಗಳನ್ನು ಕತ್ತರಿಸಿಯೇ ತೀರುತ್ತಾಳೆ ಎಂದು ನಾವು ಮನಸ್ಸಿನಲ್ಲಿ ಮಂಡಿಗೆ ಮೆಲ್ಲುತ್ತ ಹೊರಗೆ ಕಾಯುತ್ತಿದ್ದೆವು. ಸ್ವಲ್ಪ ಹೊತ್ತಿನ ನಂತರ ಹೊರಗೆ ಬಂದ ಆಕೆಯನ್ನು ನೋಡಿ ಬೆಟ್ಟದ ಚಾಮುಂಡಿದೇವಿಯೇ ದರ್ಶನ ಕೊಟ್ಟಂತಾಯಿತು. ಆದರೆ.. ಅವಳು ಸಹ ತನಗೆ ಆಗಲಿಲ್ಲ ಎಂದು ಕೂರಾನನ್ನು ಕರೆತಂದು ಕೊಟ್ಟು ಬಿಟ್ಟಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಆರನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ