Advertisement

Tag: kendasampige

ಹುಡುಗಾಟಗ್ಳು: ಸುಮಾ ಸತೀಶ್ ಸರಣಿ

ಔಟೂಂದ್ರೆ ಅಂಗೇ ಕಣ್‌ ಬುಟ್ಟು ನೋಡಿ, ದಿಟ್ವಾಗ್ಲೂ ಔಟೇನಾ‌ ಎಂಗೆ ಅಂಬ್ತ ತಿಳ್ಕಂಡೇ ಕಾಲು ‌ಪಕ್ಕುಕ್ಕೆ‌ ಮಡಗ್ಬೇಕು. ಎದುರ್ನವೇನಾರಾ ಸುಮ್ ಸುಮ್ಕೆ ಯೋಳಿ ಕಿಸೀತಾವಾ ಅಂಬ್ತ ಮೊದ್ಲು ಅವ್ರ ಮಕ ನೋಡೀವು. ಆಮ್ಯಾಕೆ ಕಾಲು ಗೆರೆ‌ ಮ್ಯಾಗೆ ಮಡಗೈತಾ ಅಂಬ್ತ ಕಂಡ್ಕಂಡು ಆಚೀಕ್ ಬರಾದು. ಅದೆಂತದು ಅಮ್ಮಾಟೇ‌ ಅಂದ್ರೆ ಅದು ಆಮ್‌ ಐ ರೈಟ್ ಅಂಬ್ತ ಇಂಗ್ಲಿಷ್ ‌ನಾಗೆ ಕ್ಯೋಳೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಅವರ ಬಾಲ್ಯದ ಆಟಗಳನ್ನು ಕುರಿತು ಬರೆದಿದ್ದಾರೆ

Read More

ಕೂರಾಪುರಾಣ ೧೧: ಅವನಿದ್ದರೆ ಮನೆ ತುಂಬಿದಂತೆ, ಮನಸ್ಸು ಅರಳಿದಂತೆ…

ನಮ್ಮನ್ನು ಕಾಡುತ್ತಿದ್ದ ಒಂದು ಸಂಗತಿಯೆಂದರೆ ಇಡೀ ದಿನ ಅವರು ನಾಯಿಯನ್ನು ಮನೆಯಲ್ಲಿಯೇ ಬಿಟ್ಟು ಹೋಗುತ್ತಿದ್ದುದು. ಕೂರಾನಿಗೆ ಅದು ಅಭ್ಯಾಸವಿರದೇ ಇದ್ದುದ್ದರಿಂದ ಅವನು ಹೇಗೆ ವರ್ತಿಸುತ್ತಾನೋ ಎಂಬ ಚಿಂತೆ. ಅವರ ಮನೆಯಲ್ಲಿನ ವೈರ್, ಬೆಡಶೀಟ್, ಟವೆಲ್ ಎಲ್ಲವನ್ನು ಕಚ್ಚಿ ಹಾಕುವವನೇ.. ನಾವು ಭಾರತಕ್ಕೆ ಹಾರಿದ ಮೇಲೆ ಇಲ್ಲಿ ಅವನಿಗೆ ತೊಂದರೆಯಾದರೆ ಎಂದೆಲ್ಲ ಯೋಚನೆಗಳು ಬರತೊಡಗಿ ಮತ್ತಾರಾದರು ಆ ಆಪ್‌ನಲ್ಲಿ ನಮಗೆ ಹೊಂದುವಂತವರು ಸಿಗುತ್ತಾರೇನೋ ಎಂದು ನೋಡಹತ್ತಿದೆವು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಚಿ ಛೀ ಚೀನಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಅಂದವಾಗಿ ಬರೆಯುವ ಕಲೆಯಾದ ಕ್ಯಾಲಿಗ್ರಫಿ ಮತ್ತು ಚಿತ್ರಕಲೆಗಳ ಬಗ್ಗೆ ಚೀನಾದ ಜನರಿಗೆ ಅತೀವವಾದ ಆಸಕ್ತಿಯಿದೆ. ಚಿತ್ರಕಲೆ ಮತ್ತು ಕ್ಯಾಲಿಗ್ರಫಿ ಕಲೆಗಳು ಚೀನಾದಲ್ಲಿ ಒಂದಕ್ಕೊಂದು ಪೂರಕ ಎನ್ನುವಂತೆ ಬೆಳೆದುಕೊಂಡು ಬಂದಿವೆ. ವರ್ಣಚಿತ್ರವನ್ನು ರಚಿಸಿದ ಬಳಿಕ ಆ ವರ್ಣಚಿತ್ರಕ್ಕೆ ಸರಿಹೊಂದುವ ಕವಿತೆಯನ್ನು ಕಲಾತ್ಮಕವಾಗಿ ಬರೆಯಲಾಗುತ್ತಿತ್ತು. ಹೀಗೆ ಕ್ಯಾಲಿಗ್ರಫಿಯು ಚಿತ್ರಕಲೆಯ ಸೊಬಗನ್ನು ಹೆಚ್ಚಿಸುತ್ತಿತ್ತು. ಚಿತ್ರಕಲೆಗೆ ಅನುಗುಣವಾಗಿ ಕ್ಯಾಲಿಗ್ರಫಿ ಸ್ಪಂದಿಸುತ್ತಿತ್ತು. ಹಿಂದಿನ ಕಾಲದ ಚೀನೀಯರಿಗೆ ಅಕ್ಷರಗಳ ಬಗ್ಗೆ ವಿಪರೀತವೆನಿಸುವ ಮೋಹವಿತ್ತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಒಂಟಿಯಾದಾಗ ಕೈಹಿಡಿಯುವ ಗುಲ್ಜಾರರು: ಗೊರೂರು ಶಿವೇಶ್‌ ಬರಹ

ಗುಲ್ಜಾರ್ ನಿರ್ಜೀವ ವಸ್ತುಗಳನ್ನು ಹೇಗೆ ರೂಪಕಗಳಿಂದ ನಿರೂಪಿಸುತ್ತಾರೆ ಎಂಬುದನ್ನು ಇಲ್ಲಿ ಕಾಣಬಹುದು. ರಸ್ತೆಗಳು ನಡೆಯುತ್ತಲೇ ಇರುತ್ತವೆ… ಆದರೆ ವಾಸ್ತವವಾಗಿ ಎಲ್ಲಿಯೂ ಹೋಗುವುದಿಲ್ಲ… “ಖಾಲಿ ಪಾತ್ರೆಗಳಂತೆ ದಿನಗಳು ಉರುಳುತ್ತವೆ, ರಾತ್ರಿಗಳು ತಳವಿಲ್ಲದ ಬಾವಿಗಳು. ಕಣ್ಣುಗಳು ಕಣ್ಣೀರಿನ ಬದಲು ಹೊಗೆಯನ್ನು ಸೂಸುತಿವೆ. ಜೀವಿಸಲು ಕಾರಣಗಳಿಲ್ಲ, ಹೀಗಾಗಿ ಸಾಯಲು ಕಾರಣಗಳನ್ನು ಹುಡುಕುತ್ತಿರುವೆ. ಜೀವನಕ್ಕಿಂತ ಉದ್ದವಿರುವ ಈ ರಸ್ತೆಗಳು ಗುರಿ ಇಲ್ಲದೆ ಗುರಿಯನ್ನು ತಲುಪದೇ ಚಲಿಸುತ್ತಿವೆ..
ಗುಲ್ಜಾರ್‌ ಅವರ ಬರಹಗಳ ಕುರಿತು ಗೊರೂರು ಶಿವೇಶ್‌ ಬರಹ

Read More

ಕಾಡು ಮತ್ತು ಕಾಡಬೆಳುದಿಂಗಳು… ಶ್ರೀಧರ ಪತ್ತಾರ ಬರಹ

ನೀರವ ರಾತ್ರಿಗಳಲ್ಲಿ ನನ್ನಲ್ಲಿ ಆಗಾಗ ಒಂಟಿತನ ಹೆಡೆಯಾಡಿಸುವುದೂ ಉಂಟು. ಮಾತುಗಳು ಜಾರಿ ನನ್ನನ್ನು ಮೌನ ಕವಚಿಕೊಂಡಾಗ ಸಹಜವಾಗಿಯೇ ಮುಗಿಲು ದಿಟ್ಟಿಸುತ್ತೇನೆ. ಅಂತೆಯೇ ಈಗೀಗ ಚಂದ್ರನನ್ನು ದಿಟ್ಟಿಸುತ್ತಾ ಚುಕ್ಕಿಗಳೆಣಿಸುವ ಅಭ್ಯಾಸ ಶುರುವಾಗಿದೆ ನನಗೆ. ಆಗ ಚಂದಿರನ ಮೊಗದಲ್ಲಿ ಪ್ರತಿಫಲಿಸುವ ಅವಳಂತದೇ ನಗು ಕಾಣುತ್ತದೆ. ನಗೆಯುಕ್ಕಿಸುತ್ತಿರುವುದು ಚಂದ್ರನೋ ಇಲ್ಲ ಅವಳೋ… ಹೀಗೂ ಒಮ್ಮೊಮ್ಮೆ ಗೊಂದಲವಾಗುವುದು.
ಶ್ರೀಧರ ಪತ್ತಾರ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ