Advertisement

Tag: kendasampige

ಕೂರಾಪುರಾಣ ೫: ಸೂಜಿಗಳು ಮತ್ತು ಸಂಕಷ್ಟಗಳು

ಲೀಶ್ ಹಾಕಿ ಸೂಜಿ ಚುಚ್ಚುವುದಿಲ್ಲ ಎಂದು ಅವನಿಗೆ ತಿಳಿಯುವ ಹಾಗೆ ನಯವಾಗಿ ವರ್ತಿಸುತ್ತ ನಿಧಾನವಾಗಿ ಲೀಶ್ ಅಭ್ಯಾಸ ಮಾಡಿಸಲು ಸುಮಾರು ಮೂರು ತಿಂಗಳುಗಳೇ ಹಿಡಿಯಿತು. ನಾಯಿಗಳ ಮನಸ್ಸಿನಲ್ಲಿ ಯಾವುದರ ಬಗ್ಗೆಯಾದರು ಭಯ ಕೂತು ಬಿಟ್ಟರೆ ಅವುಗಳಿಗೆ ಆ ವಿಷಯದ ಬಗ್ಗೆ ಅದೆಷ್ಟು ಭಯವಿರುತ್ತದೆ ಎಂದು ಗೊತ್ತಾಗಿದ್ದು ಆಗಲೇ. ಚಿಕ್ಕವರಿದ್ದಾಗ ನಾಯಿಯ ಬಾಲಕ್ಕೆ ಹುಡುಗರು ಪಟಾಕಿ ಕಟ್ಟಿ ಅದು ಸಿಡಿದಾಗ ಕುಂಯ್ಯ ಕುಂಯ್ಯ ಎಂದು ಓಡಿ ಹೋದದ್ದು, ಅದನ್ನು ನೋಡಿ ನಾವು ನಕ್ಕಿದ್ದನ್ನೆಲ್ಲ ನೆನೆದು ಅದೆಷ್ಟು ಪ್ರಾಣಿಗಳು ನಮ್ಮಿಂದ ಹಿಂಸೆ ಪಟ್ಟಿವೆಯೋ ಎನ್ನಿಸುತ್ತದೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಪಶ್ಚಿಮ ಪೂರ್ವಗಳ ಅಪೂರ್ವ ಸಂಗಮ ಟರ್ಕಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಂವಿಧಾನದ ಪ್ರಕಾರ ಟರ್ಕಿ ಜಾತ್ಯತೀತ ರಾಷ್ಟ್ರವಾಗಿದ್ದರೂ, ಅನುದಿನದ ಬದುಕಿನಲ್ಲಿ ಅದು ಪಾಲನೆಯಾಗುತ್ತಿಲ್ಲ. ಶಾಲೆಗಳಲ್ಲಿ ಧಾರ್ಮಿಕ ವಿಚಾರಗಳನ್ನು ಬೋಧಿಸಲಾಗುತ್ತಿದೆ. ಧರ್ಮವನ್ನು ಮಕ್ಕಳಿಗೆ ಕಲಿಸುವುದಕ್ಕಾಗಿಯೇ ಪಠ್ಯಕ್ರಮವನ್ನು ರೂಪಿಸಲಾಗಿದೆ. ಟರ್ಕಿಯಲ್ಲಿರುವ ಹೆಚ್ಚಿನ ಜನರು ಮುಸ್ಲಿಂ ಧರ್ಮಕ್ಕೆ ನಿಷ್ಠರಾಗಿದ್ದು, ಇಸ್ಲಾಂ ಜಗತ್ತು ಸ್ಥಾಪನೆಯಾಗಬೇಕೆಂಬ ಆಶಯವನ್ನು ಇಟ್ಟುಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ “ಟರ್ಕಿ” ಕುರಿತ ಬರಹ ನಿಮ್ಮ ಓದಿಗೆ

Read More

ನವಿರಾದ ಹಾಸ್ಯದೊಳಗಿನ ಗಂಭೀರ ಕಾವ್ಯ…: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರ ಕವನಗಳಲ್ಲಿ ಬೈಬಲ್‌ ಹಾಗೂ ಗ್ರೀಕ್ ಪುರಾಣಗಳ ಉಲ್ಲೇಖಗಳೂ ಇವೆ. ಈ ಪುರಾಣಗಳ ಪ್ರಯೋಗದಿಂದ ಹೆರ್ಬೆರ್ತರು ಸಮಕಾಲೀನ ಅನುಭವಗಳ ತೀಕ್ಷ್ಣ ಝಳಪನ್ನು ಸ್ವಲ್ಪ ಮಟ್ಟಿಗೆ ಮೃದುಗೊಳಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಪೋಲಂಡ್ ದೇಶದ ಖ್ಯಾತ ಕವಿ ಜ಼್ಬಿಗ್ನಿಎಫ಼್ ಹೆರ್ಬೆರ್ತ್-ರವರ (Zbigniew Herbert, 1924 – 1998) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಗೋಡೆಯ ಮೇಲೆ ಪ್ರತಿಭಟನೆಯ ಚಿತ್ತಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದು 1980ರಲ್ಲಿ ಅಮೆರಿಕಾದಲ್ಲಿ ಜಾನ್ ಲೆನ್ನನ್ ಹತ್ಯೆಯಾದ ಮೇಲೆ ಪ್ರೇಗ್‌ನಲ್ಲಿ ಕಲಾವಿದರ ಗುಂಪೊಂದು ಈ ಗೋಡೆಯ ಮೇಲೆ ತಮ್ಮ ಸಹಿಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದ ಕಲಾ ಗೋಡೆ. ಅದು ಇಂದಿನವರೆಗೂ ಮುಂದುವರಿದುಕೊಂಡು ಬಂದಿದೆ. ಅಲ್ಲಿಗೆ ತಲುಪಿದ ಯಾರಾದರೂ ಆ ಗೋಡೆಯ ಮೇಲೆ ಏನಾದರೂ ಗೀಚಬಹುದು.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಎರಡನೇ ಭಾಗ ಇಲ್ಲಿದೆ

Read More

ಕ್ಯಾಲಿಫೋರ್ನಿಯಾ ಮತ್ತು ಭೂಕಂಪ: ಗಿರಿಧರ್‌ ಗುಂಜಗೋಡು ಬರಹ

ನನ್ನ ಹೆದರಿಕೆ ಏನೆಂದರೆ ನಾನು ಟಾಯ್ಲೆಟ್ಟಿನಲ್ಲಿದ್ದಾಗಲೋ ಇಲ್ಲಾ ಸ್ನಾನ ಮಾಡಬೇಕಾದರೋ ಭೂಕಂಪವಾದರೆ ಏನು ಮಾಡೋದು ಅಂತ. ಆ ಅವಸ್ಥೆಯಲ್ಲಿ ಹೊರಗೆ ಓಡುವುದು ಎಷ್ಟು ಮುಜುಗರದ ಸನ್ನಿವೇಶ ಅಂತ ಯೋಚಿಸಿ. ನಾನು ಗೆಳೆಯನೊಟ್ಟಿಗೆ ಮಾತನಾಡುತ್ತಾ ಇದೇ ವಿಷಯ ಹೇಳಿದೆ.
ಕ್ಯಾಲಿಫೋರ್ನಿಯಾದಲ್ಲಾದ ಭೂಕಂಪದ ಅನುಭವಗಳ ಕುರಿತು ಗಿರಿಧರ್‌ ಗುಂಜಗೋಡು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ