Advertisement

Tag: kendasampige

ಬೇರು – ಬಿಳಲು: ಸುಮಾ ಸತೀಶ್ ಸರಣಿ

ಹೊಸ್ದಾಗಿ ಮದ್ವೆ ಆಗಿದ್ದ ಅಳಿಯ ಅತ್ತೆ ಮನೇಗೆ ಬಂದ್ನಂತೆ. ಅತ್ತೆ ಕಡುಬು ಮಾಡಿದ್ರು. ತೆಳ್ಳಗೆ, ಸಣ್ಣವು. ಹೊಸ ಅಳಿಯನಿಗೇಂತ ಕಷ್ಟ ಪಟ್ಟು ಸಣ್ಣ ಸಣ್ಣಕೆ ಮಾಡಿದ್ರು. ಅಳಿಯನ ತಟ್ಟೇಗೆ ಬಡಿಸಿದ್ರು. ಅವ್ನು ಒನೊಂದು ಸತೀಗೆ ಒಂದು ಗುಳುಂ ಮಾಡ್ತಿದ್ದ. ಅಳಿಯನ ಅಪ್ಪ ಥೋ ನಮ್ ಮರ್ವಾದೆ ತೆಗೀತಾವ್ನೆ ಅಂತ ಮೆಲ್ಲಕೆ ಮೂಗ್ಸನ್ನೆ ಮಾಡೀರು. ಒಂದು ಮುರಿದು ಎರ್ಡು ಭಾಗ ಮಾಡಿ ತಿನ್ನಾಕೆ ಸೈಗು (ಸನ್ನೆ) ಮಾಡಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಚಿಕ್ಮಾಲೂರಿನ ಅಜ್ಜ-ಅಜ್ಜಿಯರ ಕುರಿತ ಬರಹ ಇಲ್ಲಿದೆ

Read More

ದ ಗ್ರೇಟ್ ನೋಟ್ ಬುಕ್ ರಾಬರಿ!: ಪೂರ್ಣೇಶ್‌ ಮತ್ತಾವರ ಸರಣಿ

ಜೋಗಿ ಕಿಂದರಿ ಬಾರಿಸತೊಡಗಿದೊಡನೆ ಜಗತ್ತನ್ನೇ ಮೋಹಿಸುವ ಅದರ ನಾದಕ್ಕೆ ಇಲಿಗಳು ಅನ್ನದ ಮಡಕೆಯನ್ನು ಆಗಲಿ, ಟೋಪಿಯ ಗೂಡನ್ನು ತ್ಯಜಿಸಿ, ಅಂಗಿಯ ಜೇಬು, ಕಾಲು ಚೀಲಗಳನ್ನೆಲ್ಲಾ ಬಿಟ್ಟು ಹಾರುತ್ತಾ, ಓಡುತ್ತಾ, ನೆಗೆದು ಬಂದು ಅವನನ್ನೇ ಹಿಂಬಾಲಿಸಿ ಹೋಗುವಂತೆ ಹೌಸ್ ಮಾಸ್ಟರ್‌ರ ಹುಣಸೆ ಬರಲಿನ ಬಾರಿಸುವಿಕೆಗೆ ನಮ್ಮ ಗೆಳೆಯರು ಟ್ರಂಕ್ ಕಪಾಟುಗಳ ಒಳಗಿನಿಂದ, ಹಾಸಿಗೆ ದಿಂಬುಗಳ ಕೆಳಗಿನಿಂದ, ವೆಂಟಿಲೇಟರ್ ಸಂದಿಯಿಂದ, ಫ್ಯಾನ್ ರೆಕ್ಕೆಯ ಮೇಲಿನಿಂದ, ಟಾಯ್ಲೆಟ್ ರೂಮಿನ ಹೆಂಚಿನ ತಳದಿಂದ, ಮರ ಗಿಡಗಳ ಮರೆಯಿಂದ ನೋಟ್ ಬುಕ್‌ಗಳನ್ನು ಎತ್ತಿ ತರಲಾರಂಭಿಸಿದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ

Read More

ಕೂರಾಪುರಾಣ ೭: ಏನ್ರೀ ಸಂಜಮ್ಮಾ ನಿಮ್ದು ಯಾವ ಜಾತಿಯ ನಾಯಿ?

ನನ್ನಂತೆಯೇ ಹಲವರಿದ್ದಾರೆ, ಈಗಲೂ ಅವರಿಗೆ ನಾಯಿಗಳ ಬಗ್ಗೆ ಹೆಚ್ಚಿನದ್ದೇನೂ ಗೊತ್ತಿಲ್ಲ ಎಂಬ ಕಾರಣಕ್ಕಾಗಿಯೇ ಕೂರಾಪುರಾಣ ಶುರು ಮಾಡಿದ್ದು. ಥಿಯರಿ ಓದಿದರೆ ಪ್ರಾಕ್ಟಿಕಲ್ ಮಾಡಲು ಸ್ವಲ್ಪ ಧೈರ್ಯ ಹುಟ್ಟಬಹುದು ಎಂಬ ಕಾರಣಕ್ಕೆ. ಯಾಕೆಂದರೆ ನಾಯಿಗಳೊಡನೆ ಹುಟ್ಟಿಕೊಳ್ಳುವ ನಂಟು, ಅವುಗಳ ಸ್ನೇಹಕ್ಕೆ ಭಾಜನರಾಗುವ ಯೋಗ್ಯತೆ, ಮುಗ್ಧ ಪ್ರೀತಿಯನ್ನು ಅನುಭವಿಸುವ ಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂಬುದೇ ನನ್ನ ಆಸೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಏಳನೆಯ ಕಂತು

Read More

ಮಗನಂತೆ ಮಗಳನ್ನೂ ಕಾಣೋಣ: ಅನುಸೂಯ ಯತೀಶ್ ಸರಣಿ

ಆ ಹುಡುಗನನ್ನ ಎಬ್ಬಿಸಿ ಯಾಕೋ ನಿನ್ನ ತಂಗಿ ಶಾಲೆಗೆ ಬಂದಿಲ್ಲ? ಎಂದಾಗ ಇಂದು ಮನೆಯಲ್ಲಿ ಬಟ್ಟೆ ಒಗೆಯುವ ಕೆಲಸ ಇತ್ತು. ಅದಕ್ಕೆ ಅಮ್ಮ ರಜೆ ಹಾಕಿಸಿದ್ದಾರೆ ಮಿಸ್ ಎಂದನು. ನೀನು ಮಾತ್ರ ಶಾಲೆಗೆ ಬಂದಿದ್ದೀಯಾ? ನೀನು ಬಟ್ಟೆ ಒಗೆಯಲು ಹೋಗಲಿಲ್ಲವೇನು? ಎಂದು ಕೇಳಿದ್ದಕ್ಕೆ “ನಾನು ಹುಡುಗ ಮಿಸ್, ಬಟ್ಟೆ ತೊಳೆಯಲು ಹೋದರೆ ಯಾರಾದರೂ ನಗುತ್ತಾರೆ ಅಷ್ಟೇ” ಎಂದವನು, ಈ ಮಿಸ್‌ಗೆ ಅಷ್ಟು ಗೊತ್ತಿಲ್ಲವಾ? ಎಂಬ ಭಾವದಲ್ಲಿ ಗೆಳೆಯರೊಂದಿಗೆ ಮುಸಿಮುಸಿ ನಗಲಾರಂಭಿಸಿದ್ದ. ನನ್ನ ಮನಸ್ಸು ಈ ಲಿಂಗ ತಾರತಮ್ಯದ ಭಾವವನ್ನು ಕಂಡು ಖೇದಗೊಂಡಿತು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗ

Read More

ಅಮಾನುಷ ಮನಸ್ಥಿತಿಗಳ ಮಧ್ಯೆ ಮನುಷ್ಯತ್ವದ ತಲಾಶು: ರಾಮ್ ಪ್ರಕಾಶ್ ರೈ ಕೆ. ಸರಣಿ

ನಾಪತ್ತೆಯಾಗಿದ್ದಾರೆ ಎಂಬ ನೋಟಿಸುಗಳು ಇನ್ನೂ ವಿಲೇವಾರಿಯಾಗದೆ ಕಚೇರಿ ಫಲಕದಲ್ಲಿ ಕುಳಿತುಕೊಂಡಿರುವುದೇ ಆ ಮನುಷ್ಯನ ಸ್ವಭಾವಕ್ಕೆ ಹಿಡಿದ ಕನ್ನಡಿ. ಅವನ ಸರಹದ್ದಿನಲ್ಲಿ ಸ್ಲಮ್ಮಿನ ಭಾರವಾದ ಉಸಿರುಗಳೇ ಹೆಚ್ಚಿದ್ದರಿಂದ, ಆ ಜೀವಗಳಿಗೆ ಅಲ್ಲಿ ಬೆಲೆ ಇರುತ್ತಿರಲಿಲ್ಲ. ಮಾನವೀಯತೆಯ ಬಗ್ಗೆ ಪುಟಗಟ್ಟಲೆ ಮಾತುಗಳು ಕೇಳಿಬಂದರೂ ನಮ್ಮ ಸುತ್ತಮುತ್ತಲೇ ಇರುವ ಖಾಲಿ ಕಿಸೆಯ ಜನರ ಜೀವ-ಜೀವನ ಸದಾ ಅನಾಥವಲ್ಲವೇ
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಹಿಂದಿಯ ‘ಸೆಕ್ಟರ್ -36’ ಸಿನಿಮಾದ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ