Advertisement

Tag: kendasampige

ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ ಇಂದಿನಿಂದ

ಭವ್ಯವಾದ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಹಲವಾರು ಕ್ರೀಡಾಪಟುಗಳ ಕನಸು. ಅದನ್ನು ಸಾಕಾರಗೊಳಿಸಲು ಹಗಲಿರುಳು ಶ್ರಮಿಸುವ ಎಷ್ಟೋ ಅಥ್ಲೀಟ್‌ಗಳಲ್ಲಿ ಗುರಿಮುಟ್ಟುವುದು ಬೆರಳೆಣಿಕೆಯ ಮಂದಿಯಷ್ಟೇ! ಉಳಿದವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದೆ ತಮ್ಮ ಸೌಭಾಗ್ಯವೆಂದು ಮುಂದಿನ ನಾಲ್ಕು ವರುಷಗಳನ್ನು ಇನ್ನಷ್ಟು ತಯಾರಿಯೊಂದಿಗೆ ಕಳೆಯುತ್ತಾರೆ. ಸೋತವರು ಒಂದೆಡೆಯಾದರೆ, ಕೂದಲೆಳೆಯ ಅಂತರದಲ್ಲಿ ಪದಕ ವಂಚಿತರಾದವರು ಇನ್ನೊಂದೆಡೆ. ಇಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ, ದಾಖಲೆಗಳು ಧೂಳಿಪಟವಾಗುತ್ತವೆ. ಕಾರ್ತಿಕ್‌ ಕೃಷ್ಣ ಹೊಸ ಸರಣಿ “ಒಲಂಪಿಕ್ಸ್‌ ಅಂಗಣ” ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಆಟದ ಸುತ್ತ ಒಂದು ಸುತ್ತು: ಚಂದ್ರಮತಿ ಸೋಂದಾ ಸರಣಿ

ಮಳೆಗಾಲ ಮುಗಿದ ಮೇಲೆ ಊರಿನ ಬೀದಿ ಶಾಲೆಯ ಅಂಗಳ, ದೇವಸ್ಥಾನದ ಮುಂದಿನ ಬಯಲು ಎಲ್ಲವೂ ನಮ್ಮ ಆಟಕ್ಕೆ ಸೂಕ್ತ ಎಂದು ಭಾವಿಸಿ ಆಡುತ್ತಿದ್ದೆವು. ಮುಟ್ಟಾಟ ಅಥವಾ ಹಿಡಿಯೋ ಆಟಕ್ಕೆ ಬಹಳ ಪ್ರಾಧಾನ್ಯವಿತ್ತು. ಅಟ್ಟಿಸಿಕೊಂಡು ಹೋಗಿ ಹಿಡಿಯುವುದು ಒಂಥರಾ ಖುಶಿ ಕೊಡುತ್ತಿತ್ತು. ಇದರ ಇನ್ನೊಂದ ರೂಪವೇ ʻಕೂತು ಹಿಡಿತಿಯೋ ನಿಂತು ಹಿಡಿತಿಯೋʼ ಎನ್ನುವುದು. ಕೇಳಿದಾಗ ನಿಂತು ಎಂದರೆ ನಿಂತಾಗ, ಇಲ್ಲವೆ ಕುಳಿತು ಎಂದರೆ ಕುಳಿತಾಗ ಅವರನ್ನು ಮುಟ್ಟಬೇಕು, ಆಗ ಅವರು ಆಟದಿಂದ ಹೊರಕ್ಕೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಅಮೆರಿಕಾದ ಹುಡುಗ ರೈತನೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಹೋದಹೋದಂತೆ ತಾವು ಮಾಡುತ್ತಿದ್ದ ಕೆಲಸವನ್ನೂ ಬಿಟ್ಟು, ಇದನ್ನೇ ಮಾಡಲು ತೊಡಗಿ ಸಿಕ್ಕಾಪಟ್ಟೆ ದುಡ್ಡು ಮಾಡಿದರಂತೆ. ಇದ್ದ ಒಬ್ಬನೇ ಮಗನಿಗೂ ಕೂಡ ಬೇರೆ ಕಡೆ ಯಾಕೆ ಕೆಲಸ ಮಾಡ್ತೀಯಾ ನನ್ನ ಕೃಷಿ ಕೆಲಸವನ್ನೇ ಮಾಡು ಅಂತ ಅವನನ್ನೂ ತಮ್ಮ ಜೊತೆಗೆ ಸೇರಿಸಿಕೊಂಡರು. ಮಗ ಮದುವೆಯ ವಯಸ್ಸಿಗೆ ಬಂದಾಗ ಭಾರತದಲ್ಲೇ ಒಂದು ಹುಡುಗಿಯನ್ನೂ ಹುಡುಕಿದರಂತೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೆರಡನೆಯ ಬರಹ

Read More

ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಪತ್ರಿಕಾ ರಂಗದ ನಾಡೋಜ ಪಾಟೀಲ ಪುಟ್ಟಪ್ಪ: ರಂಜಾನ್‌ ದರ್ಗಾ ಸರಣಿ

ಬಡವರ ಬಗ್ಗೆ, ಹದಗೆಟ್ಟ ರಾಜಕೀಯ ಸ್ಥಿತಿಯ ಬಗ್ಗೆ ಮತ್ತು ಸಾಮಾಜಿಕ ನಿಷ್ಕ್ರಿಯತೆಯ ಬಗ್ಗೆ ಪಾಪು ಮರಗುತ್ತಿದ್ದರು. ಸಾಹಿತ್ಯ, ರಾಜಕಾರಣ, ಸಿನಿಮಾರಂಗ ಮುಂತಾದ ಕ್ಷೇತ್ರಗಳಲ್ಲಿನ ದೊಡ್ಡವರ ಸಣ್ಣತನದ ಬಗ್ಗೆ ಮತ್ತು ಸಣ್ಣವರ ದೊಡ್ಡತನದ ಬಗ್ಗೆ ವಿವರಿಸುತ್ತಿದ್ದರು. ಅವರ ಮಾತುಗಳು ರಂಜಕತೆಯಿಂದ ಮತ್ತು ಕೆಲವು ಸಲ ವಿಷಾದದಿಂದ ಕೂಡಿರುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 83ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ