Advertisement

Tag: kendasampige

ಬದುಕಲು ಕಲಿತೆವು: ರಂಜಾನ್‌ ದರ್ಗಾ ಸರಣಿ

ಕಿಚ್ಚಿನಲ್ಲಿ ಕೋಲ ಬೈಚಿಟ್ಟಾಗ ಎರಡೂ ಕೋಲುಗಳು ಕಿಚ್ಚಿನಿಂದಾಗಿ ನಿಗಿನಿಗಿ ಕೆಂಡಗಳಾಗುತ್ತವೆ. ಅವು ನಿಗಿನಿಗಿ ಕೆಂಡವಾದ ನಂತರ ಒಂದೇ ತೆರನಾದಂತೆ. ಒಂದು ದೀಪದಿಂದ ಇನ್ನೊಂದು ದೀಪವನ್ನು ಹಚ್ಚಿಕೊಂಡಾಗ ಆ ಎರಡೂ ದೀಪಗಳು ಒಂದೇ ರೀತಿಯ ಬೆಳಕು ಕೊಡುತ್ತವೆ. ಹೀಗೆ ಬಸವಣ್ಣನವರು ಗುರು-ಶಿಷ್ಯ ಸಂಬಂಧದ ಕುರಿತು ಹೇಳಿದ್ದಾರೆ. ಕೆಂಡಗಳ ಶಾಖ, ದೀಪಗಳ ಬೆಳಕು ಒಂದೇ ರೀತಿಯವು ಆಗುತ್ತವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಮೆಲ್ಲಗೆ ಗದರುವ ನನ್ನ ಅಪರ್ಣೇ…: ನಾಗರಾಜ ವಸ್ತಾರೆ ಬರಹ

ಸಮಾರಂಭದ ಬಳಿಕ ಇವಳ ಬದಿಯಲ್ಲಿ ನಾನು ಕಾರಿನತ್ತ ಸರಿಯುತ್ತಿರುವಾಗ ಮುಖ್ಯಮಂತ್ರಿಗಳ ಕಾರು ನಮ್ಮನ್ನು ಬಳಸಿತು. ಇವಳನ್ನು ನೋಡಿದ್ದೇ ಅವರು ಕಾರು ನಿಲ್ಲಿಸಲು ಹೇಳಿ, ಇಳಿದು ಅವತ್ತಿನ ನಿರೂಪಣೆಯನ್ನು ಹೊಗಳಿದರು. ಸುಮಾರು ಹತ್ತು ನಿಮಿಷ. ಸುಮ್ಮನೆ ಶ್ರೋತೃವಾದೆ. ಬೀಳ್ಕೊಡುವಾಗ- ಸರ್, ಇವರು ನನ್ನ ಹಸ್ಬೆಂಡ್ ಅಂತ ಪರಿಚಯಿಸಿದಳು.
ನೆನ್ನೆ ರಾತ್ರಿ ತೀರಿಕೊಂಡ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕುರಿತು ಅವರ ಪತಿ, ಕತೆಗಾರ ನಾಗರಾಜ ವಸ್ತಾರೆ ಬರೆದಿದ್ದ ಬರಹವೊಂದು ನಿಮ್ಮ ಓದಿಗೆ

Read More

ನಾನಾ… ಸನ್ಯಾಸಿನಾ…!: ಎಚ್. ಗೋಪಾಲಕೃಷ್ಣ ಸರಣಿ

ಖಾದಿ ಬೋರ್ಡ್‌ಗೆ ಹೋಗೋದು, ಅಲ್ಲಿಂದ ಈ ಕೇಸರಿ ಅಥವಾ ಕಾವಿ ದಟ್ಟಿ ತರೋದು ಅದನ್ನು ಮೂರೂ ಹೊತ್ತು ಸುತ್ತಿಕೊಂಡು ಓಡಾಡೋದು. ಇದು ನಮ್ಮ ಅಮ್ಮನಿಗೆ ಇಷ್ಟ ಇಲ್ಲ. ಕಾರಣ ಇವನು ರಾಮಕೃಷ್ಣ ಆಶ್ರಮಕ್ಕೆ ಹೋಗಿದ್ದ, ಅಲ್ಲಿ ಪ್ರಭಾವ ಇವನೂ ಸನ್ಯಾಸಿ ಆಗಿಬಿಡ್ತಾನೆ ಎನ್ನುವ ಭಯ. ಇದನ್ನು ಅಮ್ಮ ನನ್ನ ಮದುವೆ ಆದ ಎಷ್ಟೋ ವರ್ಷದ ನಂತರ ತನ್ನ ಸೊಸೆಗೆ ಅಂದರೆ ನನ್ನ ಹೆಂಡತಿಗೆ ಹೇಳಬೇಕಾದರೆ ನನ್ನ ಕಿವಿಗೆ ಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸಾಹೇಬರ ಟೇಪಿನೊಳಗೆ ನೀಲಿಯ ಗೋವಿಂದ: ಸುಧಾ ಆಡುಕಳ ಅಂಕಣ

ಬೇರೆ ದಿನಗಳಲ್ಲಿ ಬಾಯಿ ಮುಚ್ಚದಂತೆ ಸೋಬಾನೆ ಪದ ಹೇಳುವ ಗಣಪಿ, ಗೋಯ್ದು ಎಲ್ಲರನ್ನೂ ಎಷ್ಟು ಒತ್ತಾಯಿಸಿದರೂ ಬಾಯಿಬಿಡಲಿಲ್ಲ. “ಅದ ಪೆಟ್ಟಿಗಿ ಮುಂದೆಲ್ಲ ಹೇಳೂಕೆ ಆಗೂದಿಲ್ವೆ. ಹೆದ್ರೀಕಿ ಬರ್ತದೆ. ದೆನಿ ನಡಗಿ ಗಂಟಲು ಕಟ್ಟೋಯ್ತದೆ. ಮತ್ತೆ ಸಾಯೇಬ್ರು ಕೇಳಿದ್ರೆ ಕಿವಿ ಮುಚ್ಕಬೇಕಾಗೂದು.” ಎನ್ನುತ್ತಾ ಹಾಡಲು ನಿರಾಕರಿಸಿದರು. ಸಾಯೇಬರನ್ನು ನಿರಾಸೆಗೊಳಲಿಸಲು ಇಷ್ಟವಿಲ್ಲದ ನೀಲಿಯ ಅಪ್ಪ ಯಾವುದಾದರೂ ಹಾಡನ್ನು ಹೇಳುವಂತೆ ಮಗಳನ್ನು ಪುಸಲಾಯಿಸಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ