Advertisement

Tag: kendasampige

ಸಾಹೇಬರ ಟೇಪಿನೊಳಗೆ ನೀಲಿಯ ಗೋವಿಂದ: ಸುಧಾ ಆಡುಕಳ ಅಂಕಣ

ಬೇರೆ ದಿನಗಳಲ್ಲಿ ಬಾಯಿ ಮುಚ್ಚದಂತೆ ಸೋಬಾನೆ ಪದ ಹೇಳುವ ಗಣಪಿ, ಗೋಯ್ದು ಎಲ್ಲರನ್ನೂ ಎಷ್ಟು ಒತ್ತಾಯಿಸಿದರೂ ಬಾಯಿಬಿಡಲಿಲ್ಲ. “ಅದ ಪೆಟ್ಟಿಗಿ ಮುಂದೆಲ್ಲ ಹೇಳೂಕೆ ಆಗೂದಿಲ್ವೆ. ಹೆದ್ರೀಕಿ ಬರ್ತದೆ. ದೆನಿ ನಡಗಿ ಗಂಟಲು ಕಟ್ಟೋಯ್ತದೆ. ಮತ್ತೆ ಸಾಯೇಬ್ರು ಕೇಳಿದ್ರೆ ಕಿವಿ ಮುಚ್ಕಬೇಕಾಗೂದು.” ಎನ್ನುತ್ತಾ ಹಾಡಲು ನಿರಾಕರಿಸಿದರು. ಸಾಯೇಬರನ್ನು ನಿರಾಸೆಗೊಳಲಿಸಲು ಇಷ್ಟವಿಲ್ಲದ ನೀಲಿಯ ಅಪ್ಪ ಯಾವುದಾದರೂ ಹಾಡನ್ನು ಹೇಳುವಂತೆ ಮಗಳನ್ನು ಪುಸಲಾಯಿಸಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಪರ್ವತದ ಉತ್ತರ ಭಾಗದಲ್ಲಿ ಮಲ್ಲೋರಿಯ ಅವಶೇಷಗಳು ಪರ್ವತಾರೋಹಿಗಳ ತಂಡವೊಂದಕ್ಕೆ ಕಾಣಸಿಕ್ಕಿದೆ. ಮತ್ತೊಂದು ದೇಹವನ್ನು ಇದೇ ಪ್ರದೇಶದಲ್ಲಿ ನೋಡಿದ್ದೇವೆಂದು ಕೆಲವು ಪರ್ವತಾರೋಹಿಗಳು ಹೇಳಿಕೊಂಡಿದ್ದಾರೆ. ಅವರಿಬ್ಬರೂ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಬಳಿಕವೂ ಬದುಕಿ ಉಳಿದಿದ್ದಾರೆ. ಆದರೆ ಪರ್ವತದಿಂದ ಇಳಿಯುವಾಗ ಮರಣ ಹೊಂದಿರಬಹುದು ಎಂದು ಈ ವಿದ್ಯಮಾನದ ಕುರಿತು ಅಧ್ಯಯನ ನಡೆಸಿದ ತಜ್ಞರು ಊಹಿಸಿದ್ದಾರೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಭಾಷೆಯ ಮುಖವಾಡಗಳನ್ನು ತೆಗೆಸುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಲೀಪ್ಸ್‌ಕರವರು ವಿಸ್ತಾರವಾದ ರೂಪಕಗಳು ಹಾಗೂ ಕಾವ್ಯಾತ್ಮಕವಾದ ಪರಿಕಲ್ಪನೆಗಳನ್ನು ಮುಕ್ತವಾಗಿ ಬಳಸತೊಡಗಿದರು, ಹಾಗೇ ಅವುಗಳ ಅರ್ಥಗಳನ್ನು ಕೂಡ ಸಂಕೀರ್ಣಗೊಳಿಸುತ್ತಾ ಹೋದರು. ಅವರ ಕವನಗಳಲ್ಲಿನ ಆಗುಹೋಗುಗಳು ಒಂದು ತರಹದ ಅತಿವಾಸ್ತವಿಕವಾದ ಸ್ವಪ್ನವ್ಯೋಮದಲ್ಲಿ ನಡೆಯುತ್ತದೆ. ಆದ್ದರಿಂದ ಕವನಗಳಲ್ಲಿ ಬರುವ ಪಾತ್ರಗಳಿಗೆ ಕಲ್ಪನೆಯೊಂದೇ ಬಿಡುಗಡೆಯ ಮಾರ್ಗವಾಗುತ್ತದೆ.

Read More

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಮದುವೆ ಎನ್ನುವ ಊರ ಸಂಭ್ರಮ: ಚಂದ್ರಮತಿ ಸೋಂದಾ ಸರಣಿ

ಈಗಿನಂತೆ ಅವರಪಾಡಿಗೆ ಅವರು ಮದುವೆಗೆ ಹೋಗುವ ರಿವಾಜಿರಲಿಲ್ಲ. ಎಲ್ಲರನ್ನೂ ಒಳಗೊಂಡು ಹೋಗುವುದಿತ್ತು. ಹೋಗುವಾಗ ಬರುವಾಗ ಹಾಡುಗಳ ಸ್ಪರ್ಧೆ ಇರುತ್ತಿತ್ತು. ಯಾರು ಎಷ್ಟು ಹಾಡನ್ನು ಹೇಳುತ್ತಾರೆ ಅಂತ. ಹೆಣ್ಣುಮಕ್ಕಳು ತಮ್ಮ ಹಾಡಿನ ಸಾಮರ್ಥ್ಯವನ್ನು ಒರೆಹಚ್ಚುವ ಅವಕಾಶವನ್ನು ಕಳೆದುಕೊಳ್ಳುತ್ತಿರಲಿಲ್ಲ. ಮದುಮಗನನ್ನು ಎದುರುಗೊಳ್ಳುವುದಿರಲಿ, ಸಭಾಪೂಜೆಯೋ, ವರಪೂಜೆ ಅಥವಾ ಧಾರೆ ಯಾವುದೇ ಸನ್ನಿವೇಶವನ್ನು ಬಿಡದೆ ಹಾಡುತ್ತಿದ್ದರು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ