Advertisement

Tag: kendasampige

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನಾವು… ನಮ್ಮದು..: ಗುರುಪ್ರಸಾದ ಕುರ್ತಕೋಟಿ ಸರಣಿ

ಸ್ವಚ್ಚತೆ, ಇಂಡಿಪೆಂಡೆನ್ಸ್, ತಮಗನಿಸಿದ್ದನ್ನು ನಿರ್ಭಿಡೆಯಿಂದ ಹೇಳುವ ಅವರ ಶೈಲಿ ಇನ್ನೂ ಎಷ್ಟೋ ಒಳ್ಳೆಯ ಗುಣಗಳನ್ನು ಖಂಡಿತ ಅಮೆರಿಕನ್ನರಿಂದ ಕಲಿಯಬಹುದು. ಆದರೆ ಇನ್ನೂ ಎಷ್ಟೋ ವಿಷಯಗಳಲ್ಲಿ ಅವರು ಮಾಡೋದು ಅತಿ ಅನಿಸುತ್ತದೆ. ಅದೇ ರೀತಿ ನಾವೂ ಕೂಡ ಕೆಲವು ವಿಷಯಗಳಲ್ಲಿ ಅತಿ ಮಾಡುತ್ತೇವೆ. ಹೀಗಾಗಿ ಅವರ ಕೆಲವು ವಿಷಯಗಳನ್ನು ಸ್ವೀಕರಿಸಿ ನಮ್ಮತನವನ್ನೂ ಉಳಿಸಿಕೊಂಡ ಒಂದು ಮಧ್ಯದ ಶೈಲಿ ಅಳವಡಿಸಿಕೊಂಡರೆ ಎಷ್ಟು ಚೆನ್ನ ಅನಿಸುತ್ತದೆ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಮುಂಗಾರಿನ ಸವಿ ಸಂಜೆ: ಸುಮಾವೀಣಾ ಸರಣಿ

ಅಂತೂ ಶೆಟ್ಟಿ ಬೇಕರಿಗೆ ಹೋಗಿ ಕಾಲು ಕೆ.ಜಿ. ಲಡ್ಡುವನ್ನು 17.50 ಪೈಸೆ ಕೊಟ್ಟು ತೆಗೆದುಕೊಂಡು ಹೋಗಿ ಸೀತವ್ವಗೆ ಕೊಟ್ಟೆ. ಸ್ವೀಟ್ ತೆಗೆದುಕೊಂಡ ನಂತರ “ಎಷ್ಟುನೆ ಹಣ ಬಂದಿದು ನಿಂಗೆ….” ಅಂದರೆ “25” ಎಂದೆ “ಅಷ್ಟೆಯಾ…..?” ಎಂದು ಜೋರಾಗಿ ನಕ್ಕರು. ಪಾಪ ಅವರಿಗೆ ಇವೆಲ್ಲಾ ಹೇಗ್ ತಿಳಿಯಬೇಕು…?
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಎನ್.ಸಿ.ಸಿ ಇಷ್ಟ; ಭಜನೆ ಮಾಡಲೇಕೆ ಕಷ್ಟ?: ಬಸವನಗೌಡ ಹೆಬ್ಬಳಗೆರೆ ಸರಣಿ

ಭಜನೆ ಬಗ್ಗೆ ಯಾಕಿಷ್ಟು ಬೇಸರವಾಗಿದ್ವಿ ಅಂದ್ರೆ ಅರ್ಧ ಘಂಟೆಗೆ ಮುಗಿದಿದ್ರೆ ಏನೂ ಅನಿಸ್ತಾ ಇರಲಿಲ್ಲ. ಕೆಲವೊಮ್ಮೆ ಮುಕ್ಕಾಲು ಘಂಟೆಯಾದ್ರೂ ಮುಗೀತ ಇರಲಿಲ್ಲ. ಆಗ ‘ಓದೋಕೆ ಸಮಯ ಸಾಲೋಲ್ಲ’ ಎಂಬ ಭಾವನೆ ನಮ್ಮಲ್ಲಿ ಮೂಡಿತ್ತು. “ಹೊರಗಿನಿಂದ ಶಾಲೆಗೆ ಬರುವವರು ಈ ಸಮಯದಲ್ಲಿ ಓದ್ತಾ ಇರ್ತಾರೆ, ನಾವು ಮಾತ್ರ ಭಜನೆ ಮಾಡ್ತೀವಿ” ಎಂದು ನಮ್ಮ ಸೀನಿಯರ್ ಹುಡುಗರು ಹೇಳಿದ್ದರಿಂದ ಭಜನೆ ಅಂದ್ರೆ ಮೂಗು ಮುರಿಯಂತಾಗುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ