Advertisement

Tag: kendasampige

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವ ನಾರಾಯಣ ನಾಯಕ ಕತೆ

ಆಕಾಶದ ಒಂದು ಭಾಗದಲ್ಲಿ ಮೋಡ ದಟೈಸಿ ಒಂದೆರಡು ಹನಿ ಕೂಡ ಉದುರಿತು! ಉಸುಕಿನಲ್ಲಿ ನಡೆದಾಡಿದೆ. ಮಳೆ ಹನಿ ಬೀಸುವ ಗಾಳಿಯನ್ನು ತಂಪು ಮಾಡಿದ್ದರಿಂದ ತುಸು ಹಿತವೆನಿಸಿತು. ಆ ತುದಿ ಮುಟ್ಟುವಷ್ಟರಲ್ಲಿ ಇಡೀ ಮೈ ಹಸಿಯಾಗಿತ್ತು. ಈ ನಡುವೆ ಮೋಡಗಳು ಕರಗಿ ಆಕಾಶ ಶುಭ್ರಗೊಂಡು, ನಕ್ಷತ್ರಗಳು ಕಾಣಿಸಿಕೊಂಡವು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವ ನಾರಾಯಣ ನಾಯಕ ಕತೆ “ಮಣ್ಣಿನ ದೋಣಿ” ನಿಮ್ಮ ಓದಿಗೆ

Read More

ನಡು ಮಧ್ಯಾಹ್ನದ ಕಣ್ಣಿನ ಕಾವ್ಯ…: ವಿ.ಚಂದ್ರಶೇಖರ ನಂಗಲಿ ಬರಹ

‘ಅಡುಗೆಯಾಟದ ಹುಡುಗಿ’ ಬಾಲ್ಯದ ಅಡುಗೆಯಾಟವೇ ಕ್ರಮೇಣ ಆ ಹುಡುಗಿಯ ಜೀವನಶೈಲಿಯಾಗಿ ಬದಲಾಗುವ ಮತ್ತು ವ್ಯಕ್ತಿತ್ವ ವಿಕಸನದ ಅವಕಾಶಗಳು ಮುಚ್ಚಿಹೋಗುವ ಬಗೆಯೊಂದು ಅನಾವರಣಗೊಳ್ಳುತ್ತಾ , ಕಡೆಗೆ ಅಮ್ಮನಿಂದ ಮಗಳಿಗೆ ಹಸ್ತಾಂತರವಾಗುವ “ಚುಚ್ಚುಗ”ವು ಬರಿಯ ಅಡುಗೆಯ ಆಯುಧವಾಗಿ ಉಳಿಯದೆ, ಹೆಣ್ಣಿನ ಪಾಲಿಗೆ ಪುರುಷ ಪ್ರಧಾನ ಸಮಾಜದ “ಚುಚ್ಚುಗ”ವಾಗುವ ರೂಪಕ ಆಗಿಬಿಡುತ್ತದೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಡಾ. ವಿ.ಚಂದ್ರಶೇಖರ ನಂಗಲಿ ಬರಹ

Read More

ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ತೀರಾ ಸಣ್ಣ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅತ್ಯಂತ ಕೆಟ್ಟ ಬಾಲ್ಯ, ತಂದೆ-ತಾಯಿ ಪ್ರೀತಿ ಸಿಗದೇ ಅನಾಥ ಪ್ರಜ್ಞೆ ಹೊತ್ತು ಬೆಳೆದ ಮೇರಿ, ಮೂಕಿಯಾದಳು. ಮನುಷ್ಯರೊಂದಿಗೆ ಮಾತು ಮರೆತು ಪ್ರಕೃತಿಯೊಂದಿಗೆ ಜೀವಿಸಿದಳು. ಕಾಡಿನಲ್ಲಿ ಮೈಲಿಗಟ್ಟಲೆ ಗುರಿಯಿರದೆ ಸುತ್ತಾಡುವುದು ಈ ಕವಿಯ ಮೆಚ್ಚಿನ ಕೆಲಸವಾಗಿತ್ತು. ಇದನ್ನ ಹವ್ಯಾಸ ಅನ್ನಲಾರೆ, ದಿನವೂ ಕಾಡಿನೊಳಗೆ ಅಡ್ಡಾಡಿ ಬರುವುದು ಉಸಿರಾಟದಷ್ಟೇ ಅವಶ್ಯಕವಾಗಿತ್ತು ಈಕೆಗೆ.”
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಬೆಂಗಳೂರು ವಸತಿ ಪುರಾಣ-1: ರಂಜಾನ್‌ ದರ್ಗಾ ಸರಣಿ

ಮೊದಲ ದಿನವಾದ ಕಾರಣ ಲೈಟ್ ಹಚ್ಚಿಕೊಂಡೇ ಮಲಗಿದೆ. ಬೇಗ ನಿದ್ರೆ ಬರಲಿಲ್ಲ. ಆ ಮೇಲೆ ಮಧ್ಯರಾತ್ರಿ ಎಚ್ಚರವಾಯಿತು. ಕಣ್ಣು ತೆರೆದಾಗ ಗಾಢಾಂಧಕಾರ ಆವರಿಸಿದ್ದು ಗಾಬರಿ ಹುಟ್ಟಿಸಿತು. ಕರೆಂಟ್ ಹೋಗಿರಬಹುದು ಎಂದು ಭಾವಿಸಿ ಹಾಗೆ ಮಲಗಿದೆ. ಬೆಳಿಗ್ಗೆ ಬಹಳ ಹೊತ್ತಿನವರೆಗೆ ಎಚ್ಚರಾಗಲಿಲ್ಲ. ಕೊನೆಗೆ ಎಚ್ಚರವಾದಾಗ ಸೊಳ್ಳೆಪರದೆ ಮೇಲೆಲ್ಲ ಸೊಳ್ಳೆಗಳು ಸುತ್ತಿಕೊಂಡಿದ್ದರಿಂದ ಕತ್ತಲು ಆವರಿಸಿದ್ದು ಗೊತ್ತಾಯಿತು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ