Advertisement

Tag: kendasampige

ಭಾರತಕ್ಕೆ ಹತ್ತಿರವಾದ ಅಮೇರಿಕ: ಎಂ.ವಿ. ಶಶಿಭೂಷಣ ರಾಜು ಅಂಕಣ

ಭಾರತೀಯರ ಹಣ, ಅಂತಸ್ತು, ಜಾತಿ ತೋರಿಕೆ ಇಂತವುಗಳಿಂದ ದೂರಸರಿಯಲು ಅವರು ಬಯಸುತ್ತಾರೆ. ಕೆಲ ಭಾರತೀಯರದು ಸಂಕುಚಿತ ಮನೋಭಾವ, ಕೆಲವರು ಅತಿಯಾಗಿ ಹಚ್ಚಿಕೊಳ್ಳಲು ಹವಣಿಸಿ, ಕೊನೆಗೆ ವ್ಯಯಕ್ತಿಕ ವಿಷಯಗಳನ್ನು ಕೆದುಕುತ್ತಾರೆ, ಇಂತವುಗಳಿಂದ ತಪ್ಪಿಸಿಕೊಳ್ಳಲು ಬಂದಂತಹ ಕೆಲವರಿಗೆ ಇದರಿಂದ ಮುಜುಗರವಾಗುತ್ತದೆ. ಇದಲ್ಲದೆ ಭಾರತೀಯರನ್ನು ಹಚ್ಚಿಕೊಂಡಷ್ಟೂ ಸಾಮಾಜಿಕ ಒತ್ತಡಕ್ಕೆ ಒಳಗಾಗಬೇಕಾಗುತ್ತದೆ ಎಂದು ಅವರು ಭಾವಿಸುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಮದುವೆ ಮದುವೆ ಆ ಸಿಹಿ ಪದವೆ: ಅಚಲ ಸೇತು ಬರಹ

ಅಡುಗೆಮನೆಯ ಸಿಹಿತಿಂಡಿಯ ಡಬ್ಬಕ್ಕೆ ಮುತ್ತಿಗೆ ಹಾಕುವ ಇರುವೆಗಳ ಹಾಗೆ ಮದುವೆಯಾಗಬಯಸುವ ಸಾಲು ಸಾಲು ಮದುಮಕ್ಕಳ ಸಂತೆ ನೆರೆಯಿತು. ರಾತ್ರಿ ಹನ್ನೆರಡು ಗಂಟೆಯೊಳಗೆ ತಮಗೆ ಮದುವೆ ಪರವಾನಗಿ ದೊರಕಬೇಕು ಎಂದು ಕೂಗುತ್ತ ಒಳ ನುಗ್ಗಲು ತಳ್ಳಾಡುತ್ತಿದ್ದ ವಧುವರರ ವರ್ತನೆ ವಿಚಿತ್ರವಾಗಿತ್ತು.
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ

Read More

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

Read More

ಎವರೆಸ್ಟ್‌ನಲ್ಲಿ ಹೃದಯ ಬಡಿತ ನಿಂತಾಗ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎರಡು ನಿಮಿಷ ಕಳೆಯಿತು. ನಮ್ಮ ಗಾಡಿ ಚಲಿಸುವ ಲಕ್ಷಣ ಕಾಣಲಿಲ್ಲ. ಎಲ್ಲರೂ ಒಬ್ಬರ ಮುಖ ಒಬ್ಬರು ನೋಡತೊಡಗಿದೆವು. ಏನೋ ತಾಂತ್ರಿಕ ಸಮಸ್ಯೆ ಆಗಿದೆ ಅಂತ ಗೊತ್ತಾಯ್ತು. ಆದರೂ ಇಳಿದು ಹೋಗಲೂ ಆಗಲ್ಲವಲ್ಲ. ನಾವು ಕೂತಾಗಲೇ ಹಿಂದಿನಿಂದ ಇನ್ನೊಂದು ಟ್ರೈನ್ ಬಂದು ಡಿಕ್ಕಿ ಹೊಡೆದುಬಿಟ್ಟರೆ ಏನು ಗತಿ ಎಂಬ ಯೋಚನೆ ಬಂದು ಬೆವರು ಹರಿಯಲು ಶುರು ಆಗಿತ್ತು! ನನ್ನ ಪಕ್ಕದಲ್ಲಿ ಕೂತಿದ್ದ ಒಂದು ಸಣ್ಣ ಹುಡುಗಿ ಆಗಲೇ ಅಳಲು ಶುರು ಮಾಡಿದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ