Advertisement

Tag: kendasampige

ಕೊಡೆ…. ಕೊಡೆ … ಎಲ್ನೋಡಿ ಕೊಡೆ: ಸುಮಾವೀಣಾ ಸರಣಿ

ಆಗಷ್ಟೆ ಒಗೆದು ಹಿಂಡಿದ ಬಟ್ಟೆ ಹಾಕಿದರೆ ನೀರಿನ ಅಂಶ ಹಬೆಯಾಗಿ ಸುರುಳಿ ಸುರುಳಿಯಾಗಿ ಹೋಗುವುದನ್ನು ಕುತೂಹಲದಿಂದ ನೋಡುತ್ತಿದ್ದೆವು. ಕೆಲವೊಮ್ಮೆ ಶಾಖ ಹೆಚ್ಚಾಗಿ ಬಟ್ಟೆಯ ಒಂದು ಬದಿ ತುಕ್ಕುಹಿಡಿದ ಕೇಸರಿ ಬಣ್ಣಕ್ಕೆ ತಿರುಗುತ್ತಿದ್ದವು ….. ಮನೆಯಲ್ಲಿ ಹಿರಿಯರಿದ್ದರೆ ಅವರಿಗೆ ಬಟ್ಟೆಯನ್ನು ಜೋಪಾನವಾಗಿ ಒಣಗಿಸಿ ತೆಗೆದಿಡುವುದೆ ಹೆಚ್ಚಿನ ಕೆಲಸವಾಗಿರುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕಾಶ್ಮೀರ ಪ್ರವಾಸದ ನೆನಪುಗಳು…: ರಂಜಾನ್‌ ದರ್ಗಾ ಸರಣಿ

ಸೋನ್‌ ಮಾರ್ಗ ಪ್ರದೇಶದ ಕಡೆ ಹೋಗುವಾಗ ಭಾರಿ ಪ್ರಮಾಣದ ಹಿಮ ಬಿದ್ದ ಕಾರಣ ನಮ್ಮ ವಾಹನ ಮುಂದೆ ಸಾಗದ ಸ್ಥಿತಿಯುಂಟಾಯಿತು. ನಂತರ ಹಿಮದಲ್ಲಿ ಮುನ್ನುಗ್ಗುವ ಬೇರೆ ವಾಹನಗಳನ್ನು ಬಾಡಿಗೆ ಪಡೆಯಲಾಯಿತು. ಎತ್ತ ನೋಡಿದಡತ್ತ ಹಿಮ. ಸುತ್ತೆಲ್ಲ ಹಿಮ ಪರ್ವತಗಳು. ಆ ಪ್ರದೇಶದ ಕುರಿಗಾಯಿಗಳ ಪುಟ್ಟ ಪುಟ್ಟ ಮನೆಗಳೆಲ್ಲ ಹಿಮದ ರಾಶಿಯ ಹಾಗೆ ಕಾಣುತ್ತಿದ್ದವು. ಹಿಮ ಬೀಳುವ ಋತುವಿನಲ್ಲಿ ಆ ಕುರಿಗಾರರು ತಮ್ಮ ಕುರಿಗಳೊಂದಿಗೆ ಬೇರೆಡೆ ಹೋಗಿ ವಾಸಿಸುವರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ

ಹೆಜ್ಜೆಯಿಡಲೂ ಎಲ್ಲರೂ ಭಯಬೀಳುತ್ತಿದ್ದ ಕಾಡಿನ ಆ ಅಭೇಧ್ಯ ಕಣಿವೆಗೆ ಅವನು ಹೊಸದೇ ಆದ ಒಂದುದಾರಿ ಮಾಡಿಕೊಂಡು ಬಂದಾಗ, ಅಲ್ಲಿ ಕೆನೆಗಟ್ಟಿದ್ದ ಸೌಂದರ್ಯಕ್ಕೆ ಮಾರುಹೋಗಿದ್ದ. ಅಲ್ಲೇನಿದೆ ಕೇವಲ ಮರ, ಗಿಡ, ಬಳ್ಳಿ, ವಿಷಜಂತುಗಳು, ಕ್ರೂರಪ್ರಾಣಿಗಳು, ರಕ್ತ ಹೀರುವ ಜಿಗಣಿಗಳು ಎನ್ನುತ್ತಿದ್ದವರ ಮಧ್ಯದಲ್ಲಿದ್ದಾಗ ಇಂತಹಕಡೆ ಸೌಂದರ್ಯ ಕಾಣಲು ಬೇರೆಯದೇ ಆದ ಕಣ್ಣಗಳಿರಬೇಕು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ “ಸ್ವೇದಗಂಧಿ”

Read More

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ