Advertisement

Tag: kendasampige

ನನ್ನ ತಾಯಿ ವೆಂಕೂಬಾಯಿ: ರಂಜಾನ್‌ ದರ್ಗಾ ಸರಣಿ

ವೆಂಕೂಬಾಯಿ ನನ್ನ ಪಾಲಿನ ಮಹಾತಾಯಿ ಆಗಿದ್ದರು. ನಾನು ಅವರ ಮಗನೇ ಎನ್ನುವಷ್ಟರ ಮಟ್ಟಿಗೆ ಪ್ರೀತಿಸುತ್ತಿದ್ದರು. ನನಗಾಗಿ ಅವರು ಬ್ರಾಹ್ಮಣ ಸಂಪ್ರದಾಯದ ಎಲ್ಲ ಕಟ್ಟಳೆಗಳನ್ನು ಮೀರುತ್ತಿದ್ದರು. ಖುಷಿಯ ವಿಚಾರವೆಂದರೆ “ನಾನು ಮೀರುತ್ತಿದ್ದೇನೆ” ಎಂಬ ಭಾವವೂ ಅವರಲ್ಲಿ ಇರಲಿಲ್ಲ. ನಾನು ಬಿಸಿಬಿಸಿ ರೊಟ್ಟಿ ಪ್ರಿಯ. ಊಟದ ಸಮಯಕ್ಕೆ ಹೋದಾಗಲೆಲ್ಲ ನನಗಾಗಿ ರೊಟ್ಟಿ ಬಡಿಯುತ್ತಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 76ನೇ ಕಂತು ನಿಮ್ಮ ಓದಿಗೆ

Read More

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌ ಅವರು ಅನೇಕ ಸಾರಿ ನನ್ನ ಜತೆಗೆ ಹಂಚಿಕೊಂಡರು. ʻನೋಡಿ, ನೀವು ನಿಮ್ಮ ಚಿತ್ರ ಹಾಕಿಕೊಂಡು ಬರೆಯುತ್ತೀರಿ. ನಮಗೆ ಹೀಗೆ ಬರೆಯಲು ನಮ್ಮ ಕಾಲದಲ್ಲಿ ಅವಕಾಶವೇ ಇರಲಿಲ್ಲʼ ಎಂದು ಅವರು ಹೇಳುತ್ತಿದ್ದರು.
ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿಯವರ ವೃತ್ತಿ ಜೀವನದ ನೆನಪುಗಳ ಕೃತಿ “…ಉಳಿದಾವ ನೆನಪು” ಮೇ ೫ ರಂದು ಭಾನುವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದ್ದು, ಅದರ ಅಧ್ಯಾಯದ ಒಂದು ಭಾಗ ನಿಮ್ಮ ಓದಿಗೆ

Read More

ನೀನೆ ಕೊನೆ-ಮೊದಲೆಂಬ ಕಾಲಾತೀತ ಪ್ರೇಮಗಾಥೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಬೆಕ್ಕಾಯಣ…. ರಾಮಾಯಣ…: ವೇದ ಭದ್ರಾವತಿ ಬರಹ

ಹುಡುಗ ಎಲ್ಲ ಕಿಟಕಿಗಳನ್ನು ಮುಚ್ಚಿ ಬಾಗಿಲು ಹಾಕಿ ಒಮ್ಮೆ ನನ್ನ ಮುಖ ನೋಡಿ ಮೆಲ್ಲಗೆ, ಎರಡೂ ಮರಿಗಳು ಸತ್ತು ಹೋಗಿರುವುದನ್ನೂ ಗಂಡು ಬೆಕ್ಕು ಒಂದನ್ನು ಅರ್ಧ ತಿಂದಿರುವುದನ್ನೂ ಹೇಳಿದ. ನನಗೆ ಜಂಘಾಬಲ ಉಡುಗಿತು! ಮರಿಗಳಿಗಾಗಿ ಹೆಣ್ಣು ಉಗ್ರವಾಗಿ ಕಾದಾಡಿದ್ದು ಸ್ಪಷ್ಟವಾಗಿತ್ತು. ತನ್ನ ಮರಿಗಳಲ್ಲಿ ಯಾವುದೂ ಉಳಿದಿಲ್ಲವೆಂದು ಅದಕ್ಕೆ ತಿಳಿಸುವುದು ಹೇಗೆ?? ಇಷ್ಟು ದಿನ ನಮ್ಮನ್ನು ಕಂಡೊಡನೆ ಮಾರು ದೂರ ಓಡುತ್ತಿದ್ದ ತಾಯಿ ಈಗ ಮುಚ್ಚಿದ್ದ ಕಿಟಕಿಯನ್ನು ಹೊಗುವ ವಿಧಾನ ಹುಡುಕುತ್ತ, ತನ್ನ ಮರಿಗಳು ಅಲ್ಲಿವೆ ಎಂದೂ ನಾವು ಕಿಟಕಿ ತೆರೆದು ದಾರಿ ಕೊಡಬೇಕೆಂದೂ ದಯನೀಯ ಸ್ವರದಲ್ಲಿ ಅಂಗಲಾಚುತ್ತ ನಮ್ಮನ್ನೇ ದಿಟ್ಟಿಸತೊಡಗಿತ್ತು.
ಬೆಕ್ಕುಗಳ ಕುರಿತು ವೇದ ಭದ್ರಾವತಿ ಬರಹ ನಿಮ್ಮ ಓದಿಗೆ

Read More

ಉಳ್ಳವರ ಜೊಳ್ಳುತನ: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಒಮ್ಮೆ ‘ಬಿಹಾರಿ ಭೈಯ್ಯ’ ಹೀಗೆ ಕರ್ಕೊಂಡ್ ಬರುವಾಗ, ಆ ಕುಡುಕ ಮಹಾಶಯನೇ ಬ್ಯಾಲೆನ್ಸ್ ತಪ್ಪಿಸಿ, ಬೈಕ್ ಬಿದ್ದು, ಇಬ್ಬರಿಗೂ ಪೆಟ್ಟಾಗಿ, ನೋಡಿದವರು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಆ ಮಹಾಶಯನ ಮಕ್ಕಳು, ಮೊಮ್ಮಕ್ಕಳು ಬೈಕ್ ಚಾಲಕನದೇ ತಪ್ಪೆಂದು ದಬಾಯಿಸಿ, ಅವನಿಂದಲೇ ಹಣ ಪೀಕಿ, ಟ್ರೀಟ್ಮೆಂಟ್‌ಗೆ ಅದಕ್ಕೆ ಇದಕ್ಕೆ ಎಂದು ಅದರಲ್ಲಿ ಬೇಕಾದ ಬೇಡದ ಟೆಸ್ಟ್‌ಗಳನ್ನೆಲ್ಲ ಮಾಡಿಸಿ, ಆ ಬಿಹಾರಿ ಭಯ್ಯ ಈ ಊರಿನ ಸಹವಾಸವೇ ಬೇಡ ಎಂದು ಈಗ ಇಲ್ಲಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗೋಣಿಪುರಕ್ಕೆ ಮನೆ ಶಿಫ್ಟ್ ಮಾಡಿದನಂತೆ!
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ