Advertisement

Tag: kendasampige

ಬೇಸಿಗೆಯ ಬೇಗೆಗೆ ನೆನಪುಗಳ ಸಿಂಚನ: ಚಂದ್ರಮತಿ ಸೋಂದಾ ಸರಣಿ

ವಸಂತ ಋತುಗಳನ್ನು ಎಲ್ಲ ಕಾಲಕ್ಕೂ ಕವಿಗಳು ಹಾಡಿಹೊಗಳುತ್ತ ಬಂದಿದ್ದಾರೆ. ಮಾವಿನ ಚಿಗುರು, ಕೋಗಿಲೆಯ ಕುಕಿಲು, ಮುಂಗಾರಿನ ಆರ್ಭಟ ಎಲ್ಲವೂ ಅವರ ವರ್ಣನೆಗೆ ಕಾರಣವಾಗಿವೆ. ಅದೇಕೋ ಬಿರುಬೇಸಗೆಯ, ಸುಡುಬಿಸಿಲಿನ ಅನಭವಗಳು ಅವರನ್ನು ಕಾಡಿದಂತೆ ಕಾಣುತ್ತಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಭೂಮಿಯ ದಗೆಯನ್ನು ಮೀರಿಸುವಂತೆ ಚುನಾವಣೆಯ ಕಾವು ಏರುತ್ತಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ಮೂಕ ವೇದನೆ…: ಗುರುಪ್ರಸಾದ ಕುರ್ತಕೋಟಿ ಸರಣಿ

ಅದು ಇದು ಮಾತಾಡುತ್ತ ತನ್ನ ಮಗ ಫಿಲಿಪ್ ಕೂಡ ತುಂಬಾ ಚೆನ್ನಾಗಿ ಸ್ನೂಕರ್ ಆಡುತ್ತಾನೆ ಇಲ್ಲಿದೆ ನೋಡಿ ಅಂತ ಒಂದು ವೀಡಿಯೊ ತೋರಿಸಿದ. ಅದರಲ್ಲಿ ಅವನ ಮಗ ಸ್ನೂಕರ್ ಹೊಡೆತಗಳನ್ನು ತುಂಬಾ ಚೆನ್ನಾಗಿಯೇ ಹೊಡೆಯುತ್ತಿದ್ದುದು ಗಮನಿಸಿದೆ. ಅದರ ಜೊತೆಗೆ ಇನ್ನೊಂದು ವಿಚಿತ್ರವನ್ನೂ ಆಲಿಸಿದೆ. ಆ ವೀಡಿಯೊದಲ್ಲಿ ಅವನ ಮಗ ನಿಚ್ಚಳವಾಗಿ ಮಾತಾಡುತ್ತಿದ್ದ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಹದಿನಾಲ್ಕನೆಯ ಬರಹ

Read More

ಮಡಿಕೇರಿ ಟು ಬೇಲೂರು: ಸುಮಾವೀಣಾ ಸರಣಿ

ರಿಸಲ್ಟ್ ಮುಗಿದ ನಂತರ ಒಂದು ದಿನವೂ ಮಡಿಕೇರಿಯಲ್ಲಿ ಇರುತ್ತಿರಲಿಲ್ಲ. ಅಷ್ಟರಲ್ಲಿ ಬೇಲೂರಿನ ರಥೋತ್ಸವದ ಸಂದರ್ಭ ಸಂಭ್ರಮ ಎರಡೂ ಆಗಿರುತ್ತಿದ್ದ ಕಾರಣ ಬೇಲೂರಿಗೆ ಹೋಗುತ್ತಿದ್ದೆವು. ಹೋದ ನಂತರ ನಾವು ಯಾರ ಅಣತಿಯನ್ನೂ ಒಪ್ಪುತ್ತಿರಲಿಲ್ಲ. ಪೇರೋಲ್‌ನಿಂದ ಆಚೆ ಬಂದ ಖೈದಿಗಳಂತೆ ಆಡುತ್ತಿದ್ದೆವು. ಬೇಲೂರು ದೇವಸ್ಥಾನದಲ್ಲಿ ಘಂಟೆ ಬಾರಿಸಿದರೆ ನಮ್ಮಜ್ಜಿ ಮನೆಗೆ ಕೇಳಿಸುತ್ತಿತ್ತು. ಮಹಾಮಂಗಳಾರತಿ ಘಂಟೆ, ನೈವೇದ್ಯದ ಘಂಟೆಗಳು ಒಂದು ನಮೂನೆ ಅಲರಾಂ ಇದ್ದಂತೆ. ಬೇಸಗೆ ಎಂದರೆ ಎಲ್ಲ ಕಡೆ ನೀರಿಗೆ ತೊಂದರೆಯಿರುವಂತೆ ಬೇಲೂರಿನಲ್ಲಿಯೂ ಇತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಮಹಾನ್‌ ಬುದ್ಧರು ತೀರಿಹೋದ ಮೇಲೂ ಭಿಕ್ಷುಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಸ್ತೂಪಗಳನ್ನು ವಿಸ್ತರಿಸುವುದಕ್ಕೆ, ಹೊಸದಾಗಿ ನಿರ್ಮಾಣ ಮಾಡುವುದಕ್ಕೆ, ಆಶ್ರಮ, ಉದ್ಯಾನವನಗಳನ್ನು ರೂಪಿಸುವುದಕ್ಕೆ, ವರ್ತಕರಲ್ಲಿ, ಸೇನಾಧಿಪತಿಗಳಲ್ಲಿ, ಚಕ್ರವರ್ತಿಗಳಲ್ಲಿ ಒಂದು ಸ್ಪರ್ಧೆಯೇ ಏರ್ಪಟ್ಟಂತಿತ್ತು. ಇದೆಲ್ಲವನ್ನೂ ನೋಡಿಕೊಳ್ಳುವುದಕ್ಕೆ ಆನಂದನೊಬ್ಬನಿಗೇ ಸಮಯವಿರುತ್ತಿರಲಿಲ್ಲ, ದಣಿವಾಗುತ್ತಿತ್ತು. ಜವಾಬ್ದಾರಿಯನ್ನು ಹಂಚಿಕೊಳ್ಳಲು ನಂಬುಗೆಯ ಜನರು ಸಮೀಪದಲ್ಲಿರಲಿಲ್ಲ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ ‘ಸಾರಿಪುತ್ರನ ಸಂಸಾರ ಸಾಮ್ರಾಜ್ಯ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ