Advertisement

Tag: kendasampige

ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಇಂತಹ ಸಮುದಾಯ ಶಾಂತಿ ಕದಡುವ ಘಟನೆಗಳು ನಡೆಯುವುದು ಅಪರೂಪ. ಕನಿಷ್ಟ ಶಿಕ್ಷಣ, ಮಧ್ಯಮ ವರ್ಗ ಸಮಾಜದ ಹೆಚ್ಚು ಜನರು ದುಡಿದು ಗಳಿಸಿ ಸಾಮಾನ್ಯ ಜೀವನ ನಡೆಸುವ ಮೌಲ್ಯವನ್ನಿಟ್ಟುಕೊಂಡು ಬದುಕುವವರು. ಒಂದು ರೀತಿಯಲ್ಲಿ ಹೇಳುವುದಾದರೆ ಏಕತಾನದಲ್ಲಿ ಚಲಿಸುವ ಸಮಾಜದ ಸ್ತರಕ್ಕೆ ಕುಂದು ಬಂದರೆ ಎಲ್ಲರಿಗೂ ತಬ್ಬಿಬ್ಬಾಗಿ ಬಿಡುತ್ತದೆ. ಸಿಡ್ನಿಯಲ್ಲಿ ನಡೆದ ಕಳೆದ ವಾರಾಂತ್ಯದ ಘಟನೆಯಿಂದ ಜನರು ವಿಚಲಿತರಾಗಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಬೇಸಿಗೆ ದಿನಗಳ ಆಟದ ನೆನಪುಗಳು…: ಮಾರುತಿ ಗೋಪಿಕುಂಟೆ ಸರಣಿ

ನನಗೆ ಬೇರೆ ದಾರಿ ಇರಲಿಲ್ಲ. ಓಡಿಹೋಗೋಣವೆಂದರೆ ಅಪ್ಪನ ಕೈಯಲ್ಲಿನ ಕೋಲನ್ನು ಎಸೆದರೆ ಏನಾಗುವುದೋ ಎಂದು ಯೋಚಿಸುವಾಗಲೆ, ಊರಿನಿಂದ ಬಂದ ದೊಡ್ಡಮ್ಮ ಬಿಡಪ್ಪ ಮಗೀನ್ನ ಏನು ಮಾಡ್ಬೇಡ ಏನೋ ಹುಡುಗ್ ಬುದ್ದಿ ಅಂಗ್ ಮಾಡೈತಿ. ಎಳೆಮಗು ಬಾಯಲ್ಲೇಳಿದ್ರೆ ಸಾಕು ಅಂದ್ಕಂಡು ಒಳಗಿನಿಂದ ಬರುವುದಕ್ಕೂ ಅಪ್ಪ ಕೋಲನ್ನು ಎತ್ತಿ ಬೀಸುವುದಕ್ಕೂ ಸರಿಯಾಯಿತು. ದೊಡ್ಡಮ್ಮ ಬಂದವಳೆ ನನ್ನನ್ನು ರಬಕ್ಕನೆ ಎಳೆದುಕೊಂಡಳು. ಕೋಲಿನ ತುದಿ ಬಲ ತೋಳಿಗೆ ಬಿತ್ತು. ಇಷ್ಟು ಸಾಕಾಗಿತ್ತು; ಸಹಾಯಕ್ಕೆ ದೊಡ್ಡಮ್ಮ ಇದ್ದಳು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ