Advertisement

Tag: kendasampige

ಮುರಿದ ಗಾಜಿನ ಚೂರುಗಳಲ್ಲಿ ಅರಳುವ ಚಂದಿರ: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಸಣ್ಣ ಜೈಲಿನಿಂದ ದೊಡ್ಡ ಜೈಲಿಗೆ ಹೋಗುತ್ತಿದ್ದೀಯ’ ಎಂಬಂತಹ ಹಲವು ಅರ್ಥಪೂರ್ಣ ಮಾತುಗಳು ಇಲ್ಲಿ ಮನ ಸೆಳೆಯುತ್ತದೆ. ಪುಟ್ಟಿ ಮತ್ತು ಮಗನಿಗೆ ಕಳೆದ ಸಂತಸವ ಮರಳಿ ನೀಡುವಂತೆ ಮಾಡುವ ರೋಲರ್ ಕೋಸ್ಟರ್ ಪಯಣ, ಮನುವಿನ ದೃಷ್ಟಿಗೆ ಬದುಕು ಅನುಭವಿಸುವ ಏಳು ಬೀಳಿನ ಸಂಕೇತದಂತೆ ಕಾಣುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾದ ವಿಶ್ಲೇಷಣೆ

Read More

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಸುಮಾರು ಹೊತ್ತಿನಲ್ಲಿ ಮೊದಲು ಮಾತನಾಡಿಸಿದ ಹೆಂಗಸೇ ಹೊರಬಂದು, “ಬನ್ನಿ ಒಳಗೆ. ನಿಮಗೆ ಬಿಸಿ, ಬಿಸಿ ಚಾ ಕೊಡುವೆ.” ಎಂದಳಾದರೂ ಮಾತು ಮುಗಿಸುವಾಗ ಕಣ್ಣು ಕೆಂಡದಂತೆ ಹೊಳೆಯುತ್ತಿತ್ತು. ನಡುಮನೆಯಲ್ಲಿರುವ ಎರಡು ಕತ್ತಲೆಯ ಕೋಣೆಯನ್ನು ದಾಟಿ ಅಡುಗೆಮನೆಗೆ ಕಾಲಿಟ್ಟಿದ್ದೇ ಸೋಮಣ್ಣ ಬೆಚ್ಚಿಬಿದ್ದ! ಕಟ್ಟಿಗೆಯ ಒಲೆಯಲ್ಲಿ ಸೌದೆಯ ಬದಲು ತನ್ನ ಕಾಲನ್ನೇ ಒಟ್ಟಿ ಅಲ್ಲವಳ ಸೊಸೆ ಹಾಲು ಕಾಯಿಸುತ್ತಿದ್ದಳು!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ನೋವಿನ ರಾಗ ಪಲುಕುವ ಹಂಸದ ನೆರಳು: ಚೈತ್ರಾ ಶಿವಯೋಗಿಮಠ ಸರಣಿ

“ಚಳಿಗಾಲದ ಮರಗಳು” ಪದ್ಯದಲ್ಲಿ ಸಿಲ್ವಿಯಾ, ತನ್ನ ಕಾಲಘಟ್ಟದಲ್ಲಿ ಹೆಣ್ಣನ್ನು ನಡೆಸಿಕೊಂಡ ರೀತಿ, ಹೆಣ್ಣನ್ನು ತಾಯ್ತನ, ಕರ್ತವ್ಯಗಳಲ್ಲಿ ಬಂಧಿಸಲು ನೋಡುತ್ತಿದ್ದ ಸಮಾಜದ ಮನಸ್ಥಿತಿಯ ಚಿತ್ರಣ ಕಂಡರೆ, ಏಕಾಂಗಿಯ ಸ್ವಗತದಲ್ಲಿ ತನ್ನ ಏಕಾಂತ, ಒಂಟಿತನದ ಮಧುರ ಯಾತನೆ, ತನ್ನ ಪ್ರೇಮಿಯ ಹಠಾತ್ ನಿರ್ಗಮನದಿಂದ ಬಲಹೀನಳಾಗುವ ಸಿಲ್ವಿಯಾಳ ತೀವ್ರ ನೋವು ಕಾಣಿಸಿತು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಆಕ್ಸಿಡೆಂಟೂ… ಅಜ್ಜಿಯ ಆರೈಕೆಯೂ: ಸುಮಾವೀಣಾ ಸರಣಿ

ಅಲ್ಲೇ ರಸ್ತೇ ಬದಿಯಲ್ಲಿ ಚಿಕ್ಕ ಟವಲ್ ಹಾಕಿ ನನ್ನನ್ನು ಕೂರಿಸಿ ತಾನೂ ಛತ್ರಿ ಬಿಡಿಸಿ ಕುಳಿತುಕೊಂಡು ಬಿಟ್ಟಳು. ನನಗೋ ಕೋಪವೆಂದರೆ ಕೋಪ. “ನಾನು ಪಾಯಸ ಕುಡಿದಿದ್ದೇನೆ’’ ಅಂದರೆ ಕೇಳಲೇ ಇಲ್ಲ. ಗಲ್ಲ ಸವರಿ, ತಲೆ ಸವರಿ “ಊಟ ವೇಸ್ಟ್ ಮಾಡಬಾರದು….!” ಎನ್ನುತ್ತಾ ತಿನ್ನಿಸಲು ಬಂದರೆ ನಾನು ತಿನ್ನುತ್ತೇನೆಯೇ? ಸಾಧ್ಯನಾ? ತುತ್ತನ್ನಷ್ಟೇ ತಿಂದೆ ಕೋಪದಿಂದ. ತನ್ನ ಕೈಯ್ಯಲ್ಲೇ ನನ್ನ ಬಾಯೊರೆಸಿ “ಜಾಗ್ರತೆ ಈಗ್ ಹೋಗು ಸಂಜೆ ಬೇಗ ಸೈಡಲ್ಲಿ ಬಾ” ಎಂದು ಟಾಟಾ ಹೇಳಿಬಿಟ್ಟಳು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ