Advertisement

Tag: Keshava Malagi

ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತʼ ಪುಸ್ತಕದ ಪ್ರವೇಶಿಕೆ…

“ದೇಶಭ್ರಷ್ಟತೆಯನ್ನು ಆಯ್ದುಕೊಂಡ ಲೇಖಕರು ದಕ್ಷಿಣ ಆಫ್ರಿಕದ ಕುರಿತು ವಿಫುಲವಾಗಿ ಬರೆಯತೊಡಗಿದರು. ಅದಕ್ಕಾಗಿ ವಿವಿಧ ಪ್ರಕಾರಗಳನ್ನುಆಯ್ದುಕೊಂಡರು. ಅವುಗಳಲ್ಲಿ ಆತ್ಮಚರಿತ್ರೆ ಅತ್ಯಂತ ಪ್ರಿಯವಾದ ಪ್ರಕಾರವಾಯಿತು. ಅನುಭವ ಕಥನವು ಆತ್ಮಚರಿತ್ರೆಯ ರೂಪದಲ್ಲಿ, ಹೊಸ ಪದವಿನ್ಯಾಸದಲ್ಲಿ ಗೋಚರಿಸತೊಡಗಿತು. ಪರದೇಸಿಗರಾದ ದಕ್ಷಿಣ ಆಫ್ರಿಕನ್ ಬುದ್ಧಿಜೀವಿಗಳಿಗೆ ಆತ್ಮಕಥೆ ಹೊಸ ಅಸ್ತಿತ್ವವನ್ನು ನೀಡಿದ ಪ್ರಕಾರವಾಯಿತು. ಇತ್ತ, ತಾಯ್ನೆಲದಲ್ಲಿ ಭಾವಗೀತೆ ಅರಳತೊಡಗಿತ್ತು. ಕಾವ್ಯಾಭಿವ್ಯಕ್ತಿಗೆ ಹೊಸಬರು ಸೇರಿಕೊಂಡಂತೆಲ್ಲ ಅಭಿವ್ಯಕ್ತಿ ರೂಕ್ಷವಾಗತೊಡಗಿತು.”
ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತ: ಆಫ್ರಿಕನ್‌ ಸಂಕಥನ’ ಪುಸ್ತಕದ ಪ್ರವೇಶಿಕೆ ನಿಮ್ಮ ಓದಿಗೆ

Read More

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ