Advertisement

Tag: Kruthi Purappemane

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಮಡಿವಂತಿಕೆಯ ರಂಗಸ್ಥಳದಲ್ಲಿ ಹೊಸ ಪ್ರಸಂಗಗಳ ಗ್ರಹಿಕೆ

ಹೊಸ ಪ್ರಸಂಗಗಳ ಬಗ್ಗೆ ಸಾಮಾನ್ಯವಾಗಿ ಒಂದು ಸೀಮಿತ ಗ್ರಹಿಕೆಯಿರುತ್ತದೆ. ಯಕ್ಷಗಾನವೆಂದರೆ ಅದು ಹಳೆಯ ಕಲೆ, ಅದಕ್ಕೆ ನೂರಾರು ವರ್ಷಗಳ ಪರಂಪರೆಯಿದೆ. ಅದು ಪುರಾಣ ಕತೆಗಳ ಮೌಲ್ಯ ಪ್ರಸಾರಕ್ಕಾಗಿದೆ, ನಮ್ಮ ಜೀವನಕ್ಕೆ ಬೇಕಾಗುವ ಮೌಲ್ಯವೇ ಪುರಾಣಗಳಲ್ಲಿವೆ ಮತ್ತು ಹಳೆಯದೆಲ್ಲವನ್ನು ರಕ್ಷಿಸಬೇಕು ಎನ್ನುವ ನಂಬಿಕೆಯಿಂದಾಗಿ. ಜೊತೆಗೆ ಅದೊಂದು ಗಂಭೀರವಾದ ಕಲೆ ಎನ್ನುವ ದೃಷ್ಟಿಕೋನವೂ ಸೇರಿಕೊಂಡಿದೆ. ಗಂಭೀರವೆಂದರೆ ರಂಜನೆಯಿಲ್ಲದ್ದು ಅನ್ನುವುದು ಒಮ್ಮೊಮ್ಮೆ ಅವರ ಮಾತುಗಳಲ್ಲಿ ಧ್ವನಿಸುತ್ತದೆ. ಇವೆಲ್ಲ ನಂಬಿಕೆಗಳು ವಸಾಹತಿನ ಕಾಲದಲ್ಲಿ ಹುಟ್ಟಿದ ರಾಷ್ಟ್ರೀಯತೆಯ ಕಲ್ಪನೆಯೊಟ್ಟಿಗೆ ಬಂದದ್ದೆಂದು ಕಾಣುತ್ತದೆ. ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ. 

Read More

ಯಕ್ಷಗಾನದ ವಿಮರ್ಶೆಯಲ್ಲಿ ‘ಔಚಿತ್ಯ’ದ ಪ್ರಯೋಗಗಳು…

ಯಕ್ಷಗಾನದಲ್ಲಿ ಈ ಪೂರ್ಣತೆಯ ಅರ್ಥವನ್ನೇ ಔಚಿತ್ಯ ಪಡೆದುಕೊಳ್ಳುವುದಾದರೂ, ಇಲ್ಲಿ ನಿತ್ಯದ ಸಮಾಜದೊಂದಿಗೆ ವ್ಯವಹರಿಸುವ ಯಕ್ಷಗಾನವು ಬದಲಾಗುತ್ತಿರುವ ತನ್ನ ಸುತ್ತಮುತ್ತಲಿನ ಸಮಾಜದ ಕ್ರಮಗಳ ಜೊತೆಗೆ ಚೌಕಾಶಿ ಮಾಡುತ್ತಾ ವ್ಯವಹರಿಸಬೇಕಾಗುತ್ತದೆ. ಅಂದರೆ ಹಿಂದಿನ ಜೀವನ ಕ್ರಮದ ನಡಾವಳಿಗೂ ಮತ್ತು ಈಗಿನ ಸಮಾಜದ ಕ್ರಮಗಳಿಗೂ ಕಲಾಪ್ರಕಾರಗಳು ಒಂದು ಸೇತುವೆಯನ್ನು ಕಟ್ಟಿಕೊಳ್ಳುತ್ತಾ ಹೋಗಬೇಕಾಗುತ್ತದೆ. ಯಕ್ಷಗಾನದ ‘ಮೂಲ ಉದ್ದೇಶ’ ಪುರಾಣದ ಪ್ರಸರಣವಾಗಿರಲಿ, ಅಥವಾ ಪ್ರಸಂಗ ಪಠ್ಯವನ್ನು ಗಾನ, ನೃತ್ಯ ಮಾತಿನಲ್ಲಿ ಪ್ರೇಕ್ಷಕರಿಗೆ ತೋರಿಸುವುದಷ್ಟೇ ಆಗಿರಲಿ, ಅದು ಈಗಿನ ಕಾಲಕ್ಕೆ ಸಂವಹನವಾಗಬಹುದಾದ….

Read More

ಸ್ವಾಯತ್ತತೆಯೆಡೆಗೆ ತುಡಿಯುವ ದಾಕ್ಷಾಯಿಣಿಯ ಪಾತ್ರ

ಸಂಸಾರಕ್ಕೆ ಯೋಗ್ಯವೆನಿಸುವ ಲಕ್ಷಣಗಳಾವುವೂ ಶಿವನಲ್ಲಿ ಇರುವಂತೆ ನಮಗೆ ಕಾಣಿಸುವುದಿಲ್ಲ. ಅವಳ ಅಪ್ಪನಾದ ದಕ್ಷನಿಗೂ ಹಾಗೆ ಕಂಡಿರಬೇಕು. ಇಲ್ಲಿ ನಾವು ಗಮನಿಸಬೇಕಾದ್ದು, ಶಿವನ ಅಲೆಮಾರಿತನ, ಒರಟುತನವು ‘ಗೃಹಸ್ಥ’ ನ ಲಕ್ಷಣಕ್ಕೆ ತೀರಾ ವಿರುದ್ಧವಾದುದು ಎನ್ನುವುದನ್ನು. ಲಹರಿಯಲ್ಲಿ ಯೋಚಿಸುತ್ತಾ ಹೋದರೆ, ಇದು ಹಲವು ಉತ್ತರಗಳನ್ನು ಮೇಲಿನ ಪ್ರಶ್ನೆಗಳಿಗೆ ಕೊಡುತ್ತಾ ಹೋಗುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ