Advertisement

Tag: Malnad

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಪ್ರಕೃತಿಯೇ ದೈವವೆನ್ನುವ ದೈಯ್ಯದ ಹರಕೆ: ಭವ್ಯ ಟಿ.ಎಸ್. ಸರಣಿ

ರಮಣೀಯವಾದ ಹಚ್ಚಹಸಿರಿನ ಮಲೆನಾಡಿನ ಒಂಟಿ ಮನೆಗಳ ಅಕ್ಕಪಕ್ಕದ ದರುಗು ಗುಡಿಸುವ ಹಡ್ಡೆಗಳ ಬನದೊಳಗೆ ಇರುವ ಮರದ ಬುಡಗಳೇ ಈ ದೈಯ್ಯಗಳ ಆವಾಸಸ್ಥಾನ. ಪ್ರಕೃತಿ, ಮರ-ಗಿಡಗಳಲ್ಲಿ ದೈವತ್ವವನ್ನು ಕಾಣುವ ಮಲೆಯ ಜನರ ಭಕ್ತಿ, ಶ್ರದ್ಧೆಗಳಿಗೆ ಈ ದೈಯ್ಯಗಳು ಪಾತ್ರವಾಗಿವೆ. ದೈಯ್ಯದ ಮರಗಳೆಂಬ ಭಯ, ಭಕ್ತಿಯಿಂದ ಈ ಮರಗಳನ್ನು ಯಾರೂ ಕಡಿಯುವುದಿಲ್ಲ. ಇದರಿಂದ ಪ್ರಕೃತಿಯ ಸಂರಕ್ಷಣೆಯೂ ಆಗುತ್ತಿದೆ. ಊರು ತೊರೆದು ಬೇರೆ ಬೇರೆ ಊರಿಗೆ ಹೋಗಿ ನೆಲೆಸಿರುವ ಜನರು ಪುನಃ ಊರಿಗೆ ಬರುವುದು, ಬಂಧು ಬಾಂಧವರೊಡನೆ ಬೆರೆಯಲು ಇದೊಂದು ಸುದಿನ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ದೇವರ ಹರಕೆ ಸಲ್ಲಿಸುವುದರ ಕುರಿತ ಬರಹ ನಿಮ್ಮ ಓದಿಗೆ

Read More

ಮಳೆ ಹಿಡಿಯೋ ಮೊದ್ಲು…..: ಭವ್ಯ ಟಿ‌. ಎಸ್. ಸರಣಿ

ಮಳೆಗಾಲ ಬಂತೆಂದರೆ ಮೀನುಗಳ ಕಾಲವೂ ಬಂದಂತೆಯೇ. ಹತ್ ಮೀನು, ಅವ್ಲು, ಗೌರಿ ಮೊದಲಾದ ಹೊಳೆ ಮೀನುಗಳು ಸಿಗುವಾಗ ರುಚಿಕರವಾದ ಮೀನು ಸಾರಿಗೆ ಬೇಕಾದ ತರತರದ ಹುಳಿಗಳು ಈ ಮೇ ತಿಂಗಳಲ್ಲಿ ತಯಾರಾಗಬೇಕು. ಮಲೆನಾಡಿನ ಕಾಡುಗಳಲ್ಲಿ ವಾಟೆ ಮರ ಇರುತ್ತದೆ. ಈ ವಾಟೆ ಕಾಯಿಗಳನ್ನು ಉದುರಿಸಿ ತಂದು ಸಣ್ಣಗೆ ಹೆಚ್ಚಿ, ಒಣಗಿಸಿ, ಬೀಜ ತೆಗೆದು ಉಪ್ಪು ಹಾಕಿ ಡಬ್ಬಿಗಳಲ್ಲಿ ಸಂಗ್ರಹಿಸಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆ ಶುರುವಾಗುವ ಮುಂಚೆ ಮಾಡಿಟ್ಟುಕೊಳ್ಳುವ ಸಿದ್ಧತೆಗಳ ಕುರಿತ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ