Advertisement

Tag: Mangoes

ಬಣ್ಣ, ರುಚಿ ಮತ್ತು ಪರಿಮಳ: ಮಾಲತಿ ಶಶಿಧರ್‌ ಅಂಕಣ

ಅಷ್ಟು ಹೊತ್ತು ಎರಡು ದೇಹ ಒಂದೇ ಪ್ರಾಣದಂತೆ ಕೆಲಸ ಮಾಡಿ ಮುಗಿಸಿದ ನಾವಿಬ್ಬರು ಕದ್ದ ಮಾವು ಹಂಚಿಕೊಳ್ಳುವಾಗ ಪರಮ ದ್ವೇಷಿಗಳಾಗಿಬಿಡುತ್ತಿದ್ದೆವು. ಇದ್ದ ನಾಲ್ಕು ಹಣ್ಣನ್ನು ಭಾಗ ಮಾಡಿಕೊಳ್ಳಲು ಯುದ್ಧ ನಡೆಸುತ್ತಿದ್ದೆವು. ಅವುಗಳ ಬಣ್ಣ ರುಚಿ ಪರಿಮಳಕ್ಕಾಗಿ ಕಿತ್ತಾಟ. ನಾನು ಕಷ್ಟ ಪಟ್ಟು ಕದ್ದೆ ನನಗೆ ಜಾಸ್ತಿ ಎಂದು ನಾನಂದರೆ ದೊಡ್ಡಮ್ಮನನ್ನು ಎಷ್ಟು ಕಷ್ಟ ಪಟ್ಟು ಅತ್ತ ಬರದಂತೆ ತಡೆದೆ? ನನಗೆ ಹೆಚ್ಚು ಎನ್ನುತ್ತಿದ್ದ ಅಣ್ಣ. ಹೀಗೆ ಕಿತ್ತಾಡುತ್ತಲೇ ಹೇಗೋ ತಿಂದು ಮುಗಿಸಿ ಮಾಡಿದ ಸರ್ಕಸ್ ನೆನೆಸಿಕೊಂಡು ಪಕಪಕ ನಗುತ್ತಿದ್ದೆವು.
“ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More

ನೀನೆ ಭುವನಕ್ಕಾರಾಧ್ಯನೈ… ಚೂತರಾಜಾ: ಚಂದ್ರಮತಿ ಸೋಂದಾ ಸರಣಿ

ಮಲೆನಾಡು, ಕರಾವಳಿ ಭಾಗದಲ್ಲಿ ಕೊಸಗಾಯಿ ಅಥವಾ ಕುಚ್ಚುಮಾವಿನಕಾಯಿ ಎನ್ನುವುದು ಮಳೆಗಾಲದಲ್ಲಿ ಅಡಿಗೆಗೆ ಸಹಾಯಕ. ಕುದಿಯುವ ಹಂತದಲ್ಲಿದ್ದ ನೀರಿಗೆ ತೊಳೆದು ಶುದ್ಧಗೊಳಿಸಿದ ಮಾವಿನಕಾಯಿಗಳನ್ನು ಹಾಕಿ ಒಂದು ಕ್ಷಣಬಿಟ್ಟು ಅದನ್ನು ಅಲ್ಲಿಂದ ತೆಗೆದು ಆರಿದ ಮೇಲೆ ಉಪ್ಪುನೀರಿನಲ್ಲಿ ಹಾಕಿಡಬೇಕು. ಇದರಿಂದಲೂ ಹಸಿಮಾವಿನಕಾಯಿಯಲ್ಲಿ ಮಾಡುವ ವ್ಯಂಜನಗಳನ್ನೆಲ್ಲ ಮಾಡಬಹುದು. ಇದಕ್ಕೂ ಅಷ್ಟೆ, ಎಲ್ಲ ಮಾವಿನಕಾಯಿಯೂ ಬಾರದು. ಸಿಪ್ಪೆ ದಪ್ಪವಿದ್ದು ಉಪ್ಪಿನಲ್ಲಿ ಕರಗಬಾರದು. ಜೋಓಓ ಎಂದು ಹೊಯ್ಯುವ ಮಳೆಯಲ್ಲಿ ಕಮ್ಮಗೆ ಉಂಡು, ಬೆಚ್ಚನೆ ಹೊದ್ದು ಮಲಗಿದರೆ ʻಸ್ವರ್ಗಕ್ಕೆ ಕಿಚ್ಚು ಹಚ್ಚೆಂದ….ʼ
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ನಾಲ್ಕನೆ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ