ಗಯಾನಾ ದೇಶದ ಕವಿ ಮಾರ್ಟಿನ್ ಕಾರ್ಟರ್: ಎಸ್. ಜಯಶ್ರೀನಿವಾಸ ರಾವ್ ಸರಣಿ
ಕಾರ್ಟರ್ ತನ್ನ ಕವಿತೆಗಳಲ್ಲಿ, ಸರಳವಾದ, ಸ್ಪಷ್ಟವಾದ ಶೈಲಿಯನ್ನು ಇಷ್ಟಪಡುತ್ತಾರೆ. ದೀರ್ಘವಾದ ಸಂಕೀರ್ಣ ಕವಿತೆಗಳಿಗಿಂತ ಸರಳವಾದ ಕವಿತೆಗಳನ್ನು ಬರೆಯುವುದು ಹೆಚ್ಚು ಕಷ್ಟ ಎಂದು ಅವರ ಅಭಿಪ್ರಾಯ. ಸರಿಯಾಗಿರುವುದು ಮುಖ್ಯ. “ಇದು ಇದಕ್ಕೆ ಸರಿ ಅಥವಾ ಅದಕ್ಕೆ ಸರಿ ಎಂಬ ಪ್ರಶ್ನೆಯಲ್ಲ, ಅದು ಸರಿಯಾಗಿದೆ ಅಂತ ಅನಿಸಬೇಕು, ಅಷ್ಟೆ. ಕೆಲವೊಮ್ಮೆ ನಿಮಗೆ ಕವಿತೆಗಳ ಪುಸ್ತಕವೊಂದು ಸಿಗುತ್ತದೆ, ಅದರಲ್ಲಿ ಒಂದು ಕವಿತೆಯು ಕವಿ ಹೇಳುತ್ತಿರುವ ವಿಷಯಕ್ಕೆ ಸಂಪೂರ್ಣವಾಗಿ ಸರಿಯಾಗಿರಬಹುದು…
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಗಯಾನಾ (Guyana) ದೇಶದ ಖ್ಯಾತ ಕವಿ ಮಾರ್ಟಿನ್ ಕಾರ್ಟರ್-ರವರ (Martin Carter, 1927-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
