Advertisement

Tag: Maruthi Gopikunte

ಶ್ರಾವಣ ಸಂಜೆಯ ಮಳೆಯಂಥ ಪ್ರೀತಿ:‌ “ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

ಪರೀಕ್ಷೆಯ ವಿಚಾರ ಮಾತಾಡುವಷ್ಟರಲ್ಲಿ ಅವರ ಸಂಬಂಧಿ ಪ್ರತ್ಯಕ್ಷವಾಗಿದ್ದ. ಗೇಟಿನಲ್ಲೆ ನಮ್ಮಿಬ್ಬರನ್ನು ನೋಡಿರಬೇಕು. ಈಗಾಗಲೆ ಪರಿಚಯವಿದ್ದುದರಿಂದ ನನ್ನನ್ನು ಮಾತಾಡಿಸಿದ. ಮಾತಾಡಿಸಿ ‘ನೀವೇಕೆ ಬಂದಿದ್ದೀರಿ’ ಅಂದ. ನಾನು ಅದೆ ‘ಕ್ಯಾಸ್ಟ್ ಇನ್ಕಮ್’ ನೆಪ ಹೇಳಿದೆ ನನ್ನ ಸ್ನೇಹಿತರು ಬಂದಿದ್ದಾರೆ ಅವರನ್ನು ಮಾತಾಡಿಸುವ ಸಲುವಾಗಿ ಬಂದಿದ್ದೆ’ ಅಂದೆ ಅನುಮಾನ ಪಡುವ ಯಾವ ಘಟನೆಯೂ ನಮ್ಮಿಬ್ಬರ ವಿಷಯದಲ್ಲಿ ನಡೆದಿರಲಿಲ್ಲ. ನನಗೆ ಒಳ್ಳೆಯವನೆಂಬ ಪಟ್ಟ ಊರಲ್ಲಿತ್ತು. ಹಾಗಾಗಿ ಮಾತಾಡಿಸಿದವಳು ಇವಳ ಪರೀಕ್ಷೆ ಮುಗಿದ ಮೇಲೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇನೆ ಅಂದ. ನನಗೆ ಏನು ಹೇಳಲು ಮಾತೆ ಇರಲಿಲ್ಲ.
“ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

Read More

ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ

ಒಮ್ಮೊಮ್ಮೆ ಕನಸ್ಸಿನಲ್ಲಿ ಬೆಚ್ಚಿಬೀಳ್ತಾ ಇದ್ದ. ನಾರಾಣಿ ಅತ್ತಂತೆ ಕನಸ್ಸು ಬೀಳ್ತಾಇತ್ತು ತಾನು ಅತ್ತಂತಾಗುತ್ತಿತ್ತು. ಲಕ್ಷ್ಮಕ್ಕ ಬಂದು ಕತ್ತಿಸಿಕಿದಂತೆ ಕೆನ್ನೆಗೆ ಹೊಡೆದಂತೆ ಭಾಸವಾಗ್ತಾ ಇತ್ತು. ಅವಾಗೆಲ್ಲಾ ವಿಪರೀತ ಖಿನ್ನನಾಗ್ತಾ ಇದ್ದ. ಮಾದನನ್ನು ನೆನೆದಾಗಲೆಲ್ಲಾ ಚಿಕ್ಕಮಕ್ಕಳಂತೆ ಅತ್ತುಬಿಡುತ್ತಿದ್ದ. ಕರ್ಮಗಳೆಲ್ಲಾ ಹೀಗೆ ಕನಸುಗಳಲ್ಲಿ ಬಂದು ಕಾಡ್ತಾ ಇರ್ತವೆ ನಮ್ಮ ಪಾಪಕರ್ಮಗಳು ಕನಸುಗಳಲ್ಲಿ ಜೀವಂತವಾಗಿರುತ್ತವೆ ಅದಕ್ಕಾಗಿಯೇ. ಅವು ನಮ್ಮನ್ನು ಕಾಡುತ್ತವೆ ಕಾಡಿಸುತ್ತವೆ ನಮ್ಮನ್ನು ಶುಭ್ರಗೊಳಿಸುತ್ತವೆ. ಅದಕ್ಕಾಗಿ ನಾವೇಕೆ ಬೆಚ್ಚಬೇಕು. ಅಚ್ಚಹಸಿರಾಗಬೇಕು ಮನಸು ತಿಳಿಯಾಗಬೇಕು.
ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ “ಭಾವ ಬಿತ್ತಿದ ಬೀಜ” ನಿಮ್ಮ ಓದಿಗೆ

Read More

ಒಂಟಿತನ, ಖೋಖೋ, ಕಪ್ಪುಬಿಳುಪಿನ ಗಾಂಧಿ ಚಿತ್ರ: ಮಾರುತಿ ಗೋಪಿಕುಂಟೆ ಸರಣಿ

ಮೊದಮೊದಲು ಮೂವತ್ತು ನಲವತ್ತು ಸೆಕೆಂಡ್‌ಗಳಲ್ಲಿ ಔಟಾಗುತ್ತಿದ್ದ ನಾನು ಕ್ರಮೇಣ ಆಟದ ಪಟ್ಟುಗಳನ್ನು ತಿಳಿದುಕೊಂಡು ಒಂದೊಂದೆ ಕಲಿಯುತ್ತಾ ಹೋದೆ. ದಿನಕಳೆದಂತೆ ಎರಡು ನಿಮಿಷ ಓಡುವಷ್ಟರ ಮಟ್ಟಿಗೆ ತರಬೇತಾದೆ. ಹಂತ ಹಂತವಾಗಿ ಆಡುತ್ತಾ ಮೊದಲನೆ ಬ್ಯಾಚ್‌ಗೆ ಶಿಫ್ಟಾದೆ. ಕೊನೆಗೆ ಗಂಡು ಮಕ್ಕಳ ಖೊಖೋ ಪಂದ್ಯಕ್ಕೆ ಕ್ಯಾಪ್ಟನ್ ಆಗುವಷ್ಟರಮಟ್ಟಿಗೆ ಪ್ರಾವೀಣ್ಯತೆ ಪಡೆದೆ.
ಮಾರುತಿ ಗೋಪಿಕುಂಟೆ ಬರೆಯುವ ಸರಣಿ

Read More

ಕೇರಿಯ ಕುಟುಂಬವೊಂದರ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಪಕ್ಕದ ಊರಿಗೆ ಒಂದೆರಡು ಬಾರಿ ಹೋದಾಗ ಅವರ ಮನೆಗೆ ನಾವು ಹೋಗಿದ್ದೆವು. ಆದರೆ ಹಿರಿಮಗ ಪಾಂಡುರಂಗನ ಮೇಲೆ ಬಹಳಷ್ಟು ಜವಾಬ್ದಾರಿ ಇತ್ತು. ಆತ ದುಡಿದ… ದುಡಿಯುತ್ತಲೆ ಇದ್ದ. ತಂಗಿಯ ಮದುವೆಯನ್ನು ಬಹಳ ಜೋರಾಗಿಯೆ ಮಾಡಿದ. ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿತ್ತು. ತಮ್ಮನ ಮದುವೆಯೂ ಆಗಿ ಆತ ಬೇರೆಯಾದನು. ಪಾಂಡುರಂಗ ಎಲ್ಲ ಜವಾಬ್ದಾರಿಗಳ ನಡುವೆ ಒಂದಿಷ್ಟು ಸಾಲಗಾರನಾದ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ