Advertisement

Tag: Memories

ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ

ನಮ್ಮ ಮೊಬೈಲ್‌ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್‌ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ

Read More

ರುಕ್ಮಣಮ್ಮಜ್ಜಿಯ ನೆನಪುಗಳು….: ಸುಮಾ ಸತೀಶ್ ಸರಣಿ

ಅಂಗಡೀಗೇ ಮಾರಾಕೆ ಮಾತ್ರ ನಮ್ಮಜ್ಜೀ ತಿಂಡೀಗ್ಳು ಮೀಸ್ಲಲ್ಲ. ಮಾರಾಕಿಂತ ರವಷ್ಟು ಜಾಸ್ತೀನೆ ದಾನ ಮಾಡ್ತಿತ್ತು. ಒಂದು ಬೇಸನ್ ತಿಂಡಿ ಮಾರಾಕಿಟ್ರೆ, ಎಲ್ಡು ಬೇಸನ್ ಅವ್ರಿವ್ರಿಗೆ ಕೊಡೋಕೇ ಸಾಲ್ತಿರ್ಲಿಲ್ಲ. ಆದ್ರೂ ಒಲೆ ಮುಂದೆ ಕುಂತ್ಕಣಾಕೆ ಎಂದ್ರೂ ಬ್ಯಾಸ್ರ ಪಟ್ಟಿದ್ದಿಲ್ಲ. ಪಕ್ಕದ್ ಮನ್ಯಾಗಿದ್ದ ವಾರ್ಗಿತ್ತೀಗೆ ಮನೆ ತುಂಬಾ ಮಕ್ಳು. ಅದ್ರಾಗೂ ಸಾಲಾಗಿ ಒಂಬತ್ತು ಹೆಣ್ಣುಮಕ್ಕಳು. ಅದ್ಕೇಯಾ ತಿಂಡೀ ತೀರ್ಥದಾಗೆ ಕೈ ಬಿಗಿ ಮಾಡ್ತಿದ್ರು. ನಮ್ಮಜ್ಜೀ ಜೀವ ನಿಲ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಅಜ್ಜಿ ರುಕ್ಮಣ್ಣಮ್ಮನವರ ಕುರಿತು ಬರೆದಿದ್ದಾರೆ

Read More

ನನ್ನ ತಾಯಿ ವೆಂಕೂಬಾಯಿ: ರಂಜಾನ್‌ ದರ್ಗಾ ಸರಣಿ

ವೆಂಕೂಬಾಯಿ ನನ್ನ ಪಾಲಿನ ಮಹಾತಾಯಿ ಆಗಿದ್ದರು. ನಾನು ಅವರ ಮಗನೇ ಎನ್ನುವಷ್ಟರ ಮಟ್ಟಿಗೆ ಪ್ರೀತಿಸುತ್ತಿದ್ದರು. ನನಗಾಗಿ ಅವರು ಬ್ರಾಹ್ಮಣ ಸಂಪ್ರದಾಯದ ಎಲ್ಲ ಕಟ್ಟಳೆಗಳನ್ನು ಮೀರುತ್ತಿದ್ದರು. ಖುಷಿಯ ವಿಚಾರವೆಂದರೆ “ನಾನು ಮೀರುತ್ತಿದ್ದೇನೆ” ಎಂಬ ಭಾವವೂ ಅವರಲ್ಲಿ ಇರಲಿಲ್ಲ. ನಾನು ಬಿಸಿಬಿಸಿ ರೊಟ್ಟಿ ಪ್ರಿಯ. ಊಟದ ಸಮಯಕ್ಕೆ ಹೋದಾಗಲೆಲ್ಲ ನನಗಾಗಿ ರೊಟ್ಟಿ ಬಡಿಯುತ್ತಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 76ನೇ ಕಂತು ನಿಮ್ಮ ಓದಿಗೆ

Read More

ಅವರು ನನ್ನ ಕಣ್ಣಲ್ಲಿ ಹನಿಯಾದರು: ರಂಜಾನ್ ದರ್ಗಾ ಸರಣಿ

ಒಂದು ಸಲ ಒಬ್ಬ ಗಿರಾಕಿ ಬಂದ. ಆಗ ನಾವು ಬಾಗಿಲ ಬಳಿ ನಿಂತಿದ್ದೆವು. ಅವನು ಏನೋ ಮಾತನಾಡುತ್ತ ‘ನಿಮ್ಮ ಚಪ್ಪಲಿ ಚೆಂದ ಅದಾವು’ ಎಂದು ಹೇಳಿದ. ಆಗ ಅವರು ‘ನೀನೇ ಕೊಡಿಸಿದ್ದು’ ಎಂದು ಹೇಳಿದರು. ಅವನಿಗೆ ವಿಚಿತ್ರ ಎನಿಸಿತು. ಅವನಿಗೆ ಇನ್ನೂ ವಿಚಿತ್ರ ಎನಿಸಿ ಗಾಬರಿಯಾದ. ‘ನಿಮಂಥ ಗಿರಾಕಿಗಳು ನಮ್ಮ ಅಂಗಡಿಯಲ್ಲಿ ಬಟ್ಟೆ ಖರೀದಿ ಮಾಡಿದಾಗ. ಇದೆಲ್ಲ ದಕ್ಕಿದ್ದು’ ಎಂದು ಮಾಮಾ ಹೇಳಿದಾಗ ಅವನಲ್ಲಿ ಹೆಮ್ಮೆ ಮೂಡುವ ಬದಲು ಕೃತಜ್ಞತಾ ಭಾವ ಮೂಡಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ