Advertisement

Tag: Mogalli Ganesh

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

ಅಸ್ಪೃಶ್ಯ ಆಕಾಶದ ಚಲನೆ

ಚಲುವರಾಜನ ತಮ್ಮ ಚಂದ್ರ ಹಾಸ್ಟಲಲ್ಲೆ ಇದ್ದ. ಇನ್ನು ಚಿಕ್ಕವನು. ಬಾರೋ ಎಂದು ಕರೆದೊಯ್ದು ಎಲ್ಲ ಕ್ಲೀನ್ ಮಾಡಿಸಿದೆ. ಆ ಬ್ಯಾಗಲ್ಲಿದ್ದ ಅಕ್ಕಿ ಎಂತಾವು ನೋಡು ಎಂದೆ. ಯೋಗ್ಯ ಇದ್ದರೆ ಕೊಂಡೊಯ್ಯುವ ಎನಿಸಿತ್ತು. ಕಲ್ಲು ಮಿಶ್ರತ ಹುಳು ಹಿಡಿದ ಬೂಸ್ಲು ನುಚ್ಚಕ್ಕಿಯಾಗಿದ್ದವು. ಆ ನಾಯಿಗೆ ಇದನ್ನು ಬೇಯಿಸಿ ಹಾಕುತ್ತಿದ್ದರೆ ಈ ಪ್ರಾಧ್ಯಾಪಕರು.. ‘ನೀನೂ ಅದನ್ನೆ ಊಟ ಮಾಡಪ್ಪ’ ಎಂದಿದ್ದನಲ್ಲ ಮಹಾಶಯ! ಆ ನಾಯಿ ಮನೆ ಬಿಟ್ಟು ಹೋಗಿರುವುದರಲ್ಲಿ ನಮ್ಮ ಪಾಲು ಎಷ್ಟಿದೆಯೊ ಏನೊ!
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ 32ನೇಯ ಕಂತು.

Read More

ಅಲೆಗಳು ಕರೆತಂದಿದ್ದವು ದಂಡೆಗೆ

ಅದೇ ಅವನು ನಮ್ಮಪ್ಪ ನರಭಕ್ಷಕ ಬಾಂಡ್ಲಿಯಲ್ಲಿ ಬೋಂಡ ಹಾಕುತಿದ್ದ. ಅವನ ಹೆಂಡತಿ ಸಪ್ಲೆರ‍್ರಾಗಿದ್ದಳು. ಪುಟ್ಟ ಹುಡುಗಿ; ಅವಳ ಹೆಸರು ಮೀನಾಕ್ಷಿ, ಶಾಲೆಗೆ ಸೇರಿದ್ದಳೊ ಇಲ್ಲವೊ ಗೊತ್ತಿರಲಿಲ್ಲ. ಅವಳ ತಾಯ ತದ್ರೂಪ. ಅಲಲಲಾ… ಎಂತಹ ಪಾಳೆಯಗಾರ… ಇಲ್ಲಿ ಫುಟ್‌ಪಾತಲ್ಲಿ ಬಂದು ಬಿದ್ದಿದ್ದಾನಲ್ಲಾ. ಇವನೆನಾ ನಮ್ಮಪ್ಪ! ಕೊಂದು ಬಿಡಲು ಎಷ್ಟು ಸಲ ಯತ್ನಿಸಿ ವಿಫಲನಾಗಿದ್ದನಲ್ಲಾ! ಈಗ ಇಲ್ಲಿ ಈ ಪಾಡಿನಲ್ಲಿ. ಮೆರೆದಿದ್ದವನ ಗತಿಯೇ ಇದೂ ಎಂದು ಗಕ್ಕನೆ ನಿಂತೆ. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ. 

Read More

ಬೆದೆಗೆ ಬಂದವಳ ಮೆದುವಾಗಿ ತಳ್ಳಿಬಿಟ್ಟಿದ್ದೆ

ಅವಳು ಬಿಗಿಯಾಗಿ ನನ್ನ ಕೈ ಹಿಡಿದೇ ಇದ್ದಳು. ವಿದಾಯದ ಗಳಿಗೆಯಲ್ಲಿ ಅಮರ ಪ್ರೇಮದ ಮೋಹವೇ…’ನಾಳೆ ಸಿಗುವೆ’ ಎಂದಿದ್ದೆ. ‘ನಿಜವಾಗ್ಲೂ… ನನ್ನ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ಇನ್ನೊಂದ್ಸಲ ಹೇಳಿ’ ಎಂದು ಪ್ರತಿ ಉತ್ತರಕ್ಕೆ ಕಾದಳು. ಕೈ ಹಿಡಿದು ತಲೆ ಮೇಲೆ ಇಟ್ಟುಕೊಂಡಳು. ‘ನಾಳೆ ಅನ್ನೋದು ಕೂಡ ಒಂದು ಸುಳ್ಳು, ಅಂದಾಜು; ಕೇವಲ ನಿರೀಕ್ಷೆ…ಊಹೆ’ ಎಂದೆ.  ‘ಅಷ್ಟೆಲ್ಲ ಬೇಡ. ಸಿಕ್ತೀನಿ; ಸಿಗಲ್ಲಾ ಅನ್ನೊದ್ರಲ್ಲಿ ಯಾವ್ದಾದ್ರು ಒಂದನ್ನ ಹೇಳಿ ಏನೂ ಬೇಜಾರು ಮಾಡ್ಕೋದಿಲ್ಲ’ ಎಂದಳು. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ

Read More

ನರಕದಲ್ಲಿ ಕ್ಷಣ ಬೆರಳದ್ದಿ ಬಂದಿದ್ದೆ

ನನ್ನ ಇತಿ ಮಿತಿಯಲ್ಲಿ ಅವುಗಳಲ್ಲಿ ಬೇಕಾದವನ್ನು ಆಯ್ದುಕೊಂಡೆ. ಬರೆವ ಬಣ್ಣಗಳು ಆಗಲೇ ಹೈಸ್ಕೂಲು, ಪಿಯು ಕಾಲೇಜಿನಲ್ಲೆ ಅಂಟಿಕೊಂಡಿದ್ದವು ಎಂದು ಹೇಳಿದ್ದೆ. ಲೈಬ್ರರಿಯ ತರಾವರಿ ಗ್ರಂಥಗಳ ಬೆಟ್ಟ ಕಂಡ ಕೂಡಲೆ ಬರೆಯುವುದನ್ನೆ ಮರೆತುಬಿಟ್ಟಿದ್ದೆ. ಹಾದಿ ಬೀದಿಯಲ್ಲಿ ಅಲೆವಾಗ ಎಷ್ಟೊಂದು ಚೆಲುವೆಯರ ಕಂಡೆ; ನಗರದ ಮೂಲೆ ಮೂಲೆಯ ನರಕವ ಕಂಡೆ…
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ