Advertisement

Tag: Munavvar Jogibettu

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

Read More

ಬದುಕಿನ ಹಡಗು ಮತ್ತೊಂದು ತೀರದೆಡೆಗೆ..

ಇನ್ನೇನು ಸುರಂಗ ಕೊರೆಯುವ ಕೆಲಸ ಮುಕ್ತಾಯವಾಗುತ್ತ ಬಂದಿತ್ತು. ಕೆಲವೇ ಅಡಿಗಳಷ್ಟೇ ಕೊರೆಯುವ ಕೆಲಸ ಬಾಕಿ ಉಳಿದಿತ್ತು. ಸುರಂಗ ಮುಂದೆ ಸಾಗಿದಂತೆ ಮರದ ದೊಡ್ಡ ದಿಮ್ಮಿಗಳನ್ನಿಟ್ಟು ಆಧಾರದಂತೆ ಕೊಡುವುದು ಇದಿನಬ್ಬನಿಗೆ ಮರೆತು ಹೋಗಿತ್ತು. ಆ ವಿಷಯ ನೆನಪಾಗುತ್ತಲೇ, ಓಡಿ ಓಡಿ ಎಂದು ಕಿರುಚಿದ. ಎಲ್ಲರೂ ದಿಕ್ಕಾಪಾಲಾಗಿ ಓಡಿದರು. ಇದಿನಬ್ಬನಿಗೆ ಓಡಲಾಗಲಿಲ್ಲ‌. ಇದ್ದಕ್ಕಿದ್ದಂತೆ ಭಾರೀ ಸದ್ದಿನೊಂದಿಗೆ ಗುಡ್ಡದ ಒಂದು ಭಾಗ ಜರ್ರನೆ ಕುಳಿತೇ ಬಿಟ್ಟಿತು. ಇದಿನಬ್ಬನೂ ಸೇರಿ ನಾಲ್ಕೈದು ಜ‌ನರು ಆ ಮಣ್ಣಿನೊಳಗೆ ಸಿಕ್ಕಿಹಾಕಿಕೊಂಡರು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಎಂಟನೆಯ  ಕಂತು.

Read More

ನೀಲಕಡಲನು ಸೀಳಿ ತೇಲುತ ಸಾಗಿದ ಪಯಣ

ಹಡಗು ಮುಂದೆ ಹೋದಂತೆ ದೋಣಿಯ ಹಾಗೆ ಓಲಾಡಲು ಶುರುವಿಟ್ಟುಕೊಂಡಿತು. ಕಡಲಿನ ಅಲೆಗಳಿಗೆ ಲಯಬದ್ಧವಾಗಿ ಚಲಿಸಿದರೂ ಒಮ್ಮೊಮ್ಮೆ ಮುಗ್ಗರಿಸಿದಂತೆ ಅನಿಸುತ್ತಿತ್ತು. ಯಾರೋ ಒಂದಿಬ್ಬರು ಅಚ್ಚರಿಯಾಗಿ ಆ ದೃಶ್ಯ ನೋಡುತ್ತಿದ್ದರೂ ಅವರೊಂದಿಗೆ ಚರ್ಚಿಸಲು ಭಾಷೆ ಅರಿಯದೆ ಇದಿನಬ್ಬ ತನ್ನ ಗತ ಬದುಕನ್ನು ಮೆಲುಕು ಹಾಕತೊಡಗಿದ. ತಾನು ಬದುಕಿನ ಯಾವ ಹಂತದಲ್ಲಿ ಇದ್ದೇನೆ ಎಂದು ಅರಿವಾಗುತ್ತಲೇ ದುಃಖ ಉಮ್ಮಳಿಸಿ ಬಂತು. ದುಃಖದಲ್ಲಿ ಅವನು ತಲೆಯಲ್ಲಿ ಹಾದು ಹೋದ ಯೋಚನೆಗಳೇನು?”

Read More

ಬಿದಿರುಮೆಳೆಯಲ್ಲಿ ಹೂತ ಹೆಣ: ಮುನವ್ವರ್ ಜೋಗಿಬೆಟ್ಟು ಅಂಕಣ

“ಹೊಸ ಛತ್ರಿಯನ್ನು ತಲೆ ಕೆಳಗಾಗಿಸಿ ಅದರೊಳಗೆ ಕಲಕು ನೀರು ಹರಿಯಲು ಬಿಟ್ಟು ಪುಡಿ ಮೀನುಗಳನ್ನು ಹಿಡಿಯುತ್ತಿದ್ದ ಮಹಾ ಪೋಕಿರಿಗಳು ನಾವು. ‘ಮೀನು ಹಿಡಿಯಲಿಕ್ಕಾಗಿಯೇ ಶಾಲೆಗೆ ರಜಾ ಮಾಡುವ ನನ್ನಂತಹ ಮಕ್ಕಳ ಕಾಲವೆಲ್ಲಾ ಎಲ್ಲಿ ಹೋಯಿತು?’ ಅನಿಸತೊಡಗುವಾಗ ಸಮವಸ್ತ್ರ ಮತ್ತು ಬೂಟು ಹಾಕಿ ಬೆಳಗಿನ ಜಾವವೇ ಸ್ಕೂಲ್ ಬಸ್ಸು ಹತ್ತುವ ಮಕ್ಕಳ ಮುಖವೊಮ್ಮೆ ತೇಲಿ ಬಂತು…”

Read More

ಮುನವ್ವರ್ ಜೋಗಿಬೆಟ್ಟು ಬರೆದ ಸಣ್ಣ ಕತೆ “ಎರಡನೇ ತಿರುವು”

“ಏನೋ ತೀರ್ಮಾನಿಸಿದವಳಂತೆ, ಮೆಟ್ಟಿಲಿಳಿದು ರಸ್ತೆಗೆ ಬಂದಳು. ನಿಡು ದೂರದಲ್ಲಿ ಕುತೂಹಲ ಹುಟ್ಟಿಸುವ ಆ ಎರಡನೇ ಅಡ್ಡ ರಸ್ತೆ. ಒಮ್ಮೆ ಉರಿದು ಮತ್ತೆ ನಂದುತ್ತಿರುವ ದಾರಿದೀಪ. ಸಾಲದ್ದಕ್ಕೆ ಲೈಟು ಕಂಬದಿಂದ “ಟ್ರೀ” ಎಂಬ ಶಾರ್ಟ್ ಸರ್ಕ್ಯೂಟಿನ ಸದ್ದು. ಬೆಳಕು ನಂದಿ ಹೊತ್ತುವಷ್ಟರಲ್ಲೇ ಕತ್ತಲ ಮಧ್ಯೆ ರಪ್ಪನೆ ಯಾರೋ ನುಗ್ಗಿದಂತಾಗಿ ಇವಳೆದೆಯ ತುಂಬಾ ಹಾಲಿನವನ ಪ್ರೇತ. ಮತ್ತೆ ಮತ್ತೆ ನಡೆದಳು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ