Advertisement

Tag: Nagarekha Gaonkar

ನಾಗರೇಖಾ ಗಾಂವಕರ ಬರೆದ ಈ ಭಾನುವಾರದ ಕತೆ “ಸೋಡಿನಾಟ”

ನೌಕರಿ ಸೇರಿದ ಹೊಸದರಲ್ಲಿ ಅಪ್ಪನ ಉಮೇದಿಗೆ ಕಡಿಮೆ ಇರಲಿಲ್ಲ. ಸಾಯುವವರೆಗೂ ಮನೆಯ ಜವಾಬ್ದಾರಿ ನಿಭಾಯಿಸುತ್ತಾ ಬದುಕಿದ ಜೀವ ತನ್ನಪ್ಪ. ಸಾಯುವ ಹಿಂದಿನ ದಿನವೂ “ಅಪ್ಪಾ!! ಸುಸ್ತಾಗಿದೆ ನಿಂಗೆ. ಮನಿಕಾ” ಎಂದು ಹಾಸಿಗೆ ಜಾಡಿಸಿ ತಲೆದಿಂಬು ಸರಿ ಮಾಡಿಕೊಟ್ಟರೆ “ಮಾಬ್ಲೂ ಮಲಗುಲಾ ಮನೇ!! ಆ ಹಾಳೆ ಕಟ್ಟು ತಕಂಡ ಬಾ!!” ಎಂದು ತಮ್ಮ ಲೆಕ್ಕದ ಪುಸ್ತಕ ತರಿಸಿಕೊಂಡು ಆ ವರ್ಷದ ಖರ್ಚು ವೆಚ್ಚ ಬರೆದುದನ್ನು ಮತ್ತೊಮ್ಮೆ ಚೆಕ್ ಮಾಡಿದ್ದರು. “ಮಾಬ್ಲು ಗಿಡವಕ್ಕೆ ಈ ಸಲ ಗೊಬ್ಬರ ಹಾಕಬೇಕಾಗತ. ಯಾರಿಗರೂ ಹೇಳ.
ನಾಗರೇಖಾ ಗಾಂವಕರ ಬರೆದ ಕತೆ “ಸೋಡಿನಾಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ

ಕಪಿಲೆ… ಈಗಲೂ ಅದೇ ನೋವಿನ ದನಿ ಕೇಳಿದಂತಾಗುತ್ತಿದೆ. ಈ ನೋವಿನ ಮೂಲದಲ್ಲೂ ಆಕೆಯ ನೆನಪು. ಹೌದು ಆಕೆಯೂ ನನ್ನಂತೆ ಹೆಣ್ಣು. ಹೆಣ್ಣಿನ ನೋವು ಆ ಸೂಕ್ಷ್ಮ ಅವಳಿಗೆ ತಾನೆ ಅರ್ಥವಾಗೋದು. ಏನು ಮಾಡಲಿ.. ಏನು ಆಡಲಿ.. ಚಿಟಿಚಿಟಿ ಎನ್ನುತ್ತಿರುವ ತಲೆ, ಸುತ್ತಿದ ಬಟ್ಟೆ. ಆ ಡಾಕ್ಟರಮ್ಮ ಬರುವವರೆಗೂ ನಿಲ್ಲಬೇಕು. ಕಪಿಲೆ ಏನು ಮಾಡುತ್ತಿದ್ದಾಳೋ? ಬಾಣಂತಿ ಬೇರೆ..
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ “ಸ್ಟಾಕ್‌ಹೋಮ್ ಸಿಂಡ್ರೋಮ್”

Read More

ನೆನಪುಗಳಿಗೆ ಜೀವ ತುಂಬುವ ಬರಹ: ಸ್ಮಿತಾ ಅಮೃತರಾಜ್ ಬರಹ

ನನಗಿಲ್ಲಿ ಲೇಖಕಿಯ ಬರೆಹಗಳು ಇಷ್ಟವಾಗುವುದಕ್ಕೆ ಅನೇಕ ಕಾರಣಗಳಿವೆ. ಮೊದಲನೆಯದಾಗಿ ಬಾಲ್ಯದಲ್ಲಿ ನಮಗೆ ನೋವು, ಕೀಳರಿಮೆ, ಅಪಮಾನ, ತಾರತಮ್ಯ ಎಲ್ಲದರ ಅನುಭವಗಳಿಗೆ ಒಡ್ಡಿಕೊಂಡು ಒಂದಲ್ಲ ಒಂದು ಹಂತದಲ್ಲಿ ಮನಸ್ಸನ್ನು ಹಿಡಿಮಾಡಿಕೊಂಡಿರುತ್ತೇವೆ. ಒಂದು ಕ್ಷಣ ಅದು ಮನಸ್ಸನ್ನು ಘಾಸಿಗೊಳಿಸಿದರೂ ಮರುಕ್ಷಣಕ್ಕೆ ಮರೆತು ಮೆಟ್ಟಿನಿಲ್ಲುವ ಛಾತಿಯೂ ಜೊತೆಜೊತೆಗೆ ಹುಟ್ಟಿಕೊಳ್ಳುತ್ತಿತ್ತು.
ನಾಗರೇಖಾ ಗಾಂವಕರ ಬರೆದ ಬಾಲ್ಯದ ಅನುಭವಗಳ ಕುರಿತ ಬರಹಗಳ “ಬಣ್ಣದ ಕೊಡೆ” ಕೃತಿಯ ಕುರಿತು ಸ್ಮಿತಾ ಅಮೃತರಾಜ್ ಸಂಪಾಜೆ ಬರಹ

Read More

ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಯುಗಾದಿಗೆ ಪರಿಸರದ ಕುರಿತ ಮಾತೇಕೆ? ಎಂದು ಪ್ರಶ್ನಿಸಬಹುದು ನೀವು!! ಚೈತ್ರಮಾಸದ ಪ್ರಾರಂಭದ ದಿನ ಯುಗಾದಿಯ ಆಚರಣೆ. ಪ್ರಕೃತಿಯ ಜೊತೆ ನಮ್ಮ ಸಂಬಂಧವನ್ನು ಆಚರಣೆಗಳ ಮುಖಾಂತರ ಗಟ್ಟಿಗೊಳಿಸಿಕೊಳ್ಳುತ್ತಾ ಬಂದ ದೇಶ ನಮ್ಮದು. ಪ್ರಕೃತಿ ಪೂಜೆಯೇ ನಮ್ಮ ಪೂರ್ವಿಕರ ನೈಜ ಆಚರಣೆಗಳಾಗಿದ್ದವು ಎಂಬುದು ನಮಗೆಲ್ಲ ತಿಳಿದ ಸಂಗತಿಯೇ..
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

Read More

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ