ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More