Advertisement

Tag: Narayana Yaji

ಕರ್ಮನಿಷ್ಟೆಯಲ್ಲಿ ಜಯಕಂಡವನ ಕಥನ: ನಾರಾಯಣ ಯಾಜಿ ಬರಹ

ಮೊದಲು ಪ್ರಥಮ ಪುರುಷದಲ್ಲಿ ಪ್ರಾರಂಭಮಾಡಿದ ಹೆಗಡೆಯವರು ಇದ್ದಕ್ಕಿದ್ದಂತೆ ಅದನ್ನು ತೃತೀಯ ಪುರುಷದಲ್ಲಿ ಬರೆಯಲು ಪ್ರಾರಂಭಿಸುವುದು ಕುತೂಹಲಕಾರಿ. ಶೀರ್ಷಿಕೆಯಲ್ಲಿ ಹೇಳಿರುವಂತೆ ಇದು ಜಯರಾಮ ಹೆಗಡೆಯ ಜೀವನಕಥನ ಎನ್ನುವಾಗ ತನ್ನನ್ನು ತಾನು ಹೊರಗಡೆ ನಿಂತು ‘ಜಯರಾಮ’ ಎನ್ನುವ ಮೂಲಕ ಕಥನವನ್ನು ಹೇಳುವಾಗ ಮನಸ್ಸಿನ ಅನೇಕ ವಿಷಯಗಳನ್ನು ತೆರೆದಿಡಬಹುದು ಎನ್ನುವುದು ಅವರ ಅನಿಸಿಕೆಯಾಗಿರಬಹುದು. ಅದೂ ಅಲ್ಲದೇ ಲೇಖನನ್ನೂ ಸಹ ವಿಮರ್ಶೆಗೊಳಿಸಲು ಈ ರೀತಿಯ ಬರಹದಿಂದ ಸಾಧ್ಯ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ನೇತಾಜಿ ಸುಭಾಷರ ಲೋಕದಲ್ಲಿ ನಮ್ಮದೊಂದು ಹೆಜ್ಜೆ: ನಾರಾಯಣ ಯಾಜಿ ಬರಹ

ರಾಮಾಯಣವನ್ನು ಹೊಸ ಇತಿಹಾಸದೊಂದಿಗೆ ನೇತಾಜಿ ಸುಭಾಶ್‌ಚಂದ್ರ ಬೋಸ್ ಅವರು ಇಂಗ್ಲೀಷಿನಲ್ಲಿ ಬರೆದ ಆತ್ಮಕಥೆಯನ್ನು “ಭಾರತೀಯ ಹೋರಾಟ” ಎನ್ನುವ ಹೆಸರಿನಲ್ಲಿ ಹೊರತಂದಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ, ಗಾಂಧಿ ಒಂದು ಕಡೆ, ಅದಕ್ಕೆ ಪ್ರತಿಯಾಗಿ ನೇತಾಜಿ ಸುಭಾಶ್ ಬಾಬು ಎನ್ನುವ ಸುದ್ದಿ ಯಾವತ್ತಿನಿಂದಲೂ ಕೇಳುತ್ತಲೇ ಇದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ 1915 ರಿಂದ 1921ರ ತನಕ ಮಹತ್ವದ ತಿರುವು ಕಂಡ ದಿನಗಳು.
ಪ್ರೊ. ಕೆ.ಇ. ರಾಧಾಕೃಷ್ಣ ಅನುವಾದಿಸಿರುವ ಸುಭಾಶ್‌ಚಂದ್ರ ಬೋಸರ ಕೃತಿ “ಭಾರತೀಯ ಹೋರಾಟ”ದ ಕುರಿತು ನಾರಾಯಣ ಯಾಜಿ ಬರಹ, ನಿಮ್ಮ ಓದಿಗೆ

Read More

ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ

ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್‌ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

Read More

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ